AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಬಿಬಿಎಂಪಿ ಮೈದಾನದ ಗೇಟ್​ ಬಿದ್ದು 7 ವರ್ಷದ ಮಗು ಸಾವು

ಮಕ್ಕಳ ಬಗ್ಗೆ ಎಷ್ಟೇ ಎಚ್ಚರವಹಿಸಿದರೂ ಅದು ಕಡಿಮೆಯೇ, ಹೌದು, ಇಂದು(ಭಾನುವಾರ) ಸಂಜೆ 4 ಗಂಂಟೆಯ ಸುಮಾರಿಗೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಬಿಬಿಎಂಪಿ ಮೈದಾನದ ಗೇಟ್​ ಬಿದ್ದು 7 ವರ್ಷದ ಮಗು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಸ್ಥಳಕ್ಕೆ‌ ಮಲ್ಲೇಶ್ವರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಗಳೂರು: ಬಿಬಿಎಂಪಿ ಮೈದಾನದ ಗೇಟ್​ ಬಿದ್ದು 7 ವರ್ಷದ ಮಗು ಸಾವು
ಬಿಬಿಎಂಪಿ ಮೈದಾನದ ಗೇಟ್​ ಬಿದ್ದು 7 ವರ್ಷದ ಮಗು ಸಾವು
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on:Sep 22, 2024 | 6:38 PM

Share

ಬೆಂಗಳೂರು, ಸೆ.22: ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಇಂದು(ಭಾನುವಾರ) ಸಂಜೆ 4 ಗಂಂಟೆಯ ಸುಮಾರಿಗೆ ಬಿಬಿಎಂಪಿ ಮೈದಾನದ ಗೇಟ್​ ಬಿದ್ದು 7 ವರ್ಷದ ಮಗು ಸಾವನ್ನಪ್ಪಿದ ಘಟನೆ ನಡೆದಿದೆ. ನಿರಂಜನ್ ಮೃತ ಬಾಲಕ. ವಿಜಯಕುಮಾರ್ ಮತ್ತು ಪ್ರಿಯಾ ದಂಪತಿಯ ಮಗುವಾದ ನಿರಂಜನ್, ಆಟ ಆಡಲು ಮೈದಾನದ ಗೇಟ್ ಓಪನ್ ಮಾಡುತ್ತಿದ್ದಂತೆ ಮಗುವಿನ ಮೇಲೆಯೇ ಗೇಟ್ ಬಿದ್ದಿದೆ. ಈ ವೇಳೆ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದು, ಕೂಡಲೇ ಸ್ಥಳೀಯರು ಮಗುವನ್ನು ಕೆ ಸಿ ಜನರಲ್ ಆಸ್ಪತ್ರೆ ಕರೆದುಕೊಂಡು ಹೋಗಿದ್ದಾರೆ.

ಆದರೆ, ದುರಾದೃಷ್ಟವಶಾತ್​ ಚಿಕಿತ್ಸೆ ಫಲಿಸದೇ ಮಗು ಕೊನೆಯುಸಿರೆಳೆದಿದೆ. ಮೃತ ನಿರಂಜನ್​ ಮಲ್ಲೆಶ್ವರಂನ ಬಿಬಿಎಂಪಿ ಶಾಲೆಯಲ್ಲಿ 5 ನೇ ತರಗತಿಯಲ್ಲಿ ಓದುತ್ತಿದ್ದ. ಜೊತೆಗೆ ತಂದೆ ವಿಜಯಕುಮಾರ್ ಆಟೋ ಚಾಲಕರಾಗಿದ್ದು, ಮಲ್ಲೇಶ್ವರನ ಫೈಪ್ ಲೈನ್​ನಲ್ಲಿ ಈ ಕುಟುಂಬ ವಾಸವಾಗಿತ್ತು. ಇನ್ನು ಘಟನೆ ಬಳಿಕ ಸ್ಥಳಕ್ಕೆ‌ ಮಲ್ಲೇಶ್ವರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:ಆಂಬ್ಯುಲೆನ್ಸ್ ಬರುವಷ್ಟರಲ್ಲೇ ಮಗು ಸಾವು, 4 ದಿನ ಆಸ್ಪತ್ರೆಯಲ್ಲಿಟ್ಟುಕೊಂಡಿದ್ದ ವೈದ್ಯನ ವಿರುದ್ಧ ಆಕ್ರೋಶ

ಈ ಕುರಿತು ಪ್ರತ್ಯಕ್ಷದರ್ಶಿಯೊಬ್ಬರು ಮಾತನಾಡಿ, ‘ನಾವು ಇಲ್ಲಿ ಕ್ರಿಕೆಟ್ ಆಡುತ್ತಿದ್ದೇವೋ, ಆಗ ಸೈಕಲ್ ಜೊತೆಗೆ ಮೃತ ಬಾಲಕ ಗ್ರೌಂಡ್​ಗೆ ಬಂದು ಗೇಟ್​ ತಗೆಯುತ್ತಿದ್ದಂತೆ ಆ ಹುಡುನ ಮೇಲೆ ಗೇಟ್ ಬಿತ್ತು. ನಾವು ಗೇಟ್ ಮೇಲಕ್ಕೆ ಎತ್ತಿದೇವು. ಆ ಮೇಲೆ ಎಳನೀರು ಅಂಗಡಿ ಅವರು ಆಸ್ಪತ್ರೆಗೆ ಕರೆದುಕೊಂಡು ಹೋದರು. ಈ ವೇಳೆ ಹುಡುಗನಿಗೆ ತಲೆ ಮತ್ತು ಕಿವಿಗೆ ಗಾಯವಾಗಿತ್ತು ಎಂದಿದ್ದಾರೆ.

ಸಿಡಿಲು ಬಡಿದು 65 ವರ್ಷದ ರೈತ ದುರ್ಮರಣ

ಧಾರವಾಡ: ಜಿಲ್ಲೆಯಲ್ಲಿ ಭರ್ಜರಿ ಮಳೆಯಾಗುತ್ತಿದ್ದು, ಇದೀಗ ತಾಲೂಕಿನ ಹನುಮನಾಳದಲ್ಲಿ ಸಿಡಿಲಿನ ಹೊಡೆತಕ್ಕ ಓರ್ವ ರೈತ ಸಾವನ್ನಪ್ಪಿದ್ದಾನೆ. ಸಿಡಿಲಿಗೆ ರೈತ ಭೀಮನಗೌಡ ಪಾಟೀಲ್​​(65) ಬಲಿ. ಹೊಲದಿಂದ ಮನೆಗೆ ಬರುವಾಗ ಸಿಡಿಲು ಬಡಿದು ದುರಂತ ಸಂಭವಿಸಿದೆ. ಈ ಕುರಿತು ಗರಗ ಪೊಲೀಸ್​ ಠಾಣೆಯಲ್ಲಿ ಪ್ರಕರಣ​ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:18 pm, Sun, 22 September 24

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು