AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟೋನಲ್ಲಿ ಬ್ಯಾಗ್ ಇಡುವ ನೆಪದಲ್ಲಿ ಯುವತಿಯ ಖಾಸಗಿ ಅಂಗಕ್ಕೆ ಕೈ ಹಾಕಿದ ಕಾಮುಕ ಚಾಲಕ

ಬೆಂಗಳೂರಿನಲ್ಲಿ ಕಾಮುಕರ ಅಟ್ಟಹಾಸ ಮುಂದುವರೆದಿದೆ. ದಾರಿಯಲ್ಲಿ ಹೋಗುತ್ತಿರುವ ಮಹಿಳೆ, ಯುವತಿಯರ ಮೇಲೆ ಕಾಮುಕರು ಲೈಂಗಿಕ ದೌರ್ಜನ್ಯ ಎಸಗುತ್ತಿರುವ ಪ್ರಕರಣಗಳು ನಡೆಯುತ್ತಲೇ ಇದ್ದು, ತಮ್ಮ ಪಾಡಿಗೆ ಹೋಗುತ್ತಿರುವ ಮಹಿಳೆಯರ ಖಾಸಗಿ ಅಂಗಾಂಗಳನ್ನು ಮುಟ್ಟಿ ವಿಕೃತಿ ಮೆರೆದು ಪರಾರಿಯಾಗುತ್ತಾರೆ. ಅದರಂತೆ ಬೆಂಗಳೂರಿನಲ್ಲಿ ಆಟೋ ಚಾಲಕನೋರ್ವ ಬ್ಯಾಗ್ ಇಡುವ ನೆಪದಲ್ಲಿ ಯುವತಿಯ ಖಾಸಗಿ ಅಂಗಕ್ಕೆ ಕೈಹಾಕಿರುವ ಘಟನೆ ಬೆಳಕಿಗೆ ಬಂದಿದೆ.

ಆಟೋನಲ್ಲಿ ಬ್ಯಾಗ್ ಇಡುವ ನೆಪದಲ್ಲಿ ಯುವತಿಯ ಖಾಸಗಿ ಅಂಗಕ್ಕೆ ಕೈ ಹಾಕಿದ ಕಾಮುಕ ಚಾಲಕ
ಪ್ರಾತಿನಿಧಿಕ ಚಿತ್ರ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Sep 16, 2025 | 9:42 PM

Share

ಬೆಂಗಳೂರು, (ಸೆಪ್ಟೆಂಬರ್ 16): ಆಟೋ ಚಾಲಕನೋರ್ವ (Auto Driver) ಬ್ಯಾಗ್ ಇಡುವ ನೆಪದಲ್ಲಿ ಯುವತಿಯ ಖಾಸಗಿ ಅಂಗಕ್ಕೆ ಕೈ ಹಾಕಿ ವಿಕೃತಿ ಮೆರೆದಿರುವ ಘಟನೆ ಬೆಂಗಳೂರಿನ (Bengaluru) ಜೆಪಿ ನಗರದ (JP Nagar) 7ನೇ ಹಂತದಲ್ಲಿ ನಡೆದಿದೆ. ಯುವತಿಯೋರ್ವಳು ಜೆಪಿ ನಗರದ ಏಳನೇ ಸ್ಟೇಜ್​ ನಿಂದ ಆಟೋ ಬುಕ್ ಮಾಡಿದ್ದಳು. ಈ ವೇಳೆ ಸ್ಥಳಕ್ಕೆ ಬಂದ ಆಟೋ ಚಾಲಕ ಒಳಗೆ ಬ್ಯಾಗ್ ಇಡುವ ನೆಪದಲ್ಲಿ ಯುವತಿಯ ಮೈ ಮುಟ್ಟಿದ್ದಾನೆ. ಅಲ್ಲದೇ ನಿಮಗೆ ಜ್ವರ ಬಂದಿದ್ಯಾ ಎಂದು ನಾಟಕ ಮಾಡುತ್ತ ಆಕೆಯ ಹಣೆ ಮುಟ್ಟಿ ಬಳಿಕ ಏಕಾಏಕಿ ಖಾಸಗಿ ಅಂಗಕ್ಕೆ ಕೈ ಹಾಕಿದ್ದಾನೆ. ಈ ಸಂಬಂಧ ಯುವತಿ ಕೊಟ್ಟ ದೂರಿನ ಮೇರೆಗೆ ಆಟೋ ಚಾಲಕ ಹನುಮಂತಪ್ಪ ಹೆಚ್ ತಳವಾರ ಎನ್ನುವಾತನ್ನು ಪುಟ್ಟೇನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಯುವತಿ ಬುಕ್ ಮಾಡಿದ್ದ ಆಟೋ ಲೋಕೇಶನ್‌ಗೆ ಬಂದ ತಕ್ಷಣ ಚಾಲಕ ಮೊದಲಿಗೆ ಬ್ಯಾಗ್ ಇಡುವ ನೆಪದಲ್ಲಿ ಯುವತಿಯ ಮೈ ಮುಟ್ಟಿದ್ದಾನೆ. ಅಲ್ಲದೇ ನೀನು ಸಿನಿಮಾ ಹಿರೋಯಿನ್ ತರಾ ಇದೀಯಾ ಎಂದು ಬೆಣ್ಣೆಯ ಮಾತುಗಳನ್ನಾಡಿದ್ದಾನೆ. ಬಳಿಕ ಯುವತಿ ಆಟೋ ಒಳಗೆ ಕುಳಿತುಕೊಳ್ಳುತ್ತಿದ್ದಂತೆ ಜ್ವರ ಬಂದಿದೆಯಾ ಎಂದು ಹಣೆ ಮುಟ್ಟಿದ್ದಾನೆ. ಇದಾದ ಬಳಿಕ ಆಕೆಯ ಖಾಸಗಿ ಅಂಗಕ್ಕೆ ಕೈ ಹಾಕಿದ್ದಾನೆ. ಇದರಿಂದ ವಿಚಲಿತಗೊಂಡ ಯುವತಿ ಆಟೋದಿಂದ ಜಿಗಿದು ಓಡಿಹೋಗಿ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಇದೆಂಥಾ ಕೃತ್ಯ: ಯುವತಿಯ ಖಾಸಗಿ ಭಾಗ ಮುಟ್ಟಿ ಬರ್ತಿಯಾ ಎಂದ ಕಾಮುಕರು!

ಈ ದೂರಿನ ಆಧಾರದ ಮೇಲೆ ಪೊಲೀಸರು ಕಾಮುಕನನ್ನು ಬಂಧಿಸಿದ್ದಾರೆ. ಜೊತೆಗೆ ಆತ ಕೆಲಸ ಮಾಡುತ್ತಿದ್ದ ಕ್ಯಾಬ್ ಕಂಪನಿಗೂ ಮಾಹಿತಿ ನೀಡಿ, ಆತನ ಲೈಸೆನ್ಸ್ ವಿರುದ್ಧ ಕ್ರಮ ತೆಗದುಕೊಳ್ಳಲು ಸೂಚಿಸಿದ್ದಾರೆ. ಸದ್ಯ ಪುಟ್ಟೇನಹಳ್ಳಿ ಪೊಲೀಸರು ತನಿಖೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:40 pm, Tue, 16 September 25

ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ
ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ