AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೋಷಕರು ಬೈದಿದ್ದಕ್ಕೆ ಮನೆ ಬಿಟ್ಟು ಹೋಗಿದ್ದ ಬೆಂಗಳೂರಿನ ಬಾಲಕಿ ಗೋವಾದಲ್ಲಿ ಪತ್ತೆ

ಪರೀಕ್ಷೆಯಲ್ಲಿ ಗಣಿತ ವಿಷಯದಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಪೋಷಕರು ಬೈಯ್ಯುತ್ತಾರೆ ಎಂದು ಹೆದರಿ ಮನೆ ಬಿಟ್ಟು ಹೋಗಿದ್ದ ಬಾಲಕಿ ಗೋವಾದಲ್ಲಿ ಪತ್ತೆಯಾಗಿರುವಂತಹ ಘಟನೆ ನಂದಿನಿ ಲೇಔಟ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪೋಷಕರು ಬೈದಿದ್ದಕ್ಕೆ ಮನೆ ಬಿಟ್ಟು ಹೋಗಿದ್ದ ಬೆಂಗಳೂರಿನ ಬಾಲಕಿ ಗೋವಾದಲ್ಲಿ ಪತ್ತೆ
ಸಿಸಿಟಿವಿ ದೃಶ್ಯ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Oct 19, 2022 | 11:02 PM

Share

ಬೆಂಗಳೂರು: ಗಣಿತ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಪೋಷಕರು ಬೈಯ್ಯುತ್ತಾರೆ ಎಂದು ಹೆದರಿ ಮನೆ ಬಿಟ್ಟು ಹೋಗಿದ್ದ ಬಾಲಕಿ (girl) ಗೋವಾ (Goa) ದಲ್ಲಿ ಪತ್ತೆಯಾಗಿದ್ದಾಳೆ. 9ನೇ ತರಗತಿ ವಿದ್ಯಾರ್ಥಿನಿ ಭಾರ್ಗವಿ ಮನೆ ಬಿಟ್ಟುಹೋದ ಬಾಲಕಿ. ಸದ್ಯ ಬಾಲಕಿ ಕರೆತರಲು ಬೆಂಗಳೂರಿನಿಂದ ಪೋಷಕರು ತೆರಳಿದ್ದಾರೆ. ಭಾರ್ಗವಿ ಪತ್ತೆಗಾಗಿ ರಾಜ್ಯದಾದ್ಯಂತ ಪೊಲೀಸ್‌ ಠಾಣೆಗಳು ಹಾಗೂ ಹೊರ ರಾಜ್ಯದ ಪೊಲೀಸ್ ಠಾಣೆಗಳಿಗೆ ಮಾಹಿತಿ ರವಾನಿಸಲಾಗಿತ್ತು. ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಹಲವು ಜನರು ಬಾಲಕಿಯ ಪತ್ತೆಗೆ ನೆರವಾಗಲು ಕೋರಿ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದರು. ಬುಧವಾರ ಭಾರ್ಗವಿ ಗೋವಾದಲ್ಲಿರುವುದು ಖಚಿತವಾಗಿದೆ. ಈ ಕುರಿತಾಗಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್‌ ಅವರು ತಮ್ಮ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ.

ಘಟನೆ ಹಿನ್ನೆಲೆ:

ಕೆಲ ದಿನಗಳ ಹಿಂದೆ ಮೆಜೆಸ್ಟಿಕ್​ನಿಂದ ಬಾಲಕಿ ಮಂಗಳೂರು ಬಸ್ ಹತ್ತಿ ಹೋಗಿರುವುದು ಬೆಳಕಿಗೆ ಬಂದಿತ್ತು. ಘಟನೆ ಕುರಿತಾಗಿ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಬಳಿಕ ಬಾಲಕಿ ಪತ್ತೆಗೆ ಮಂಗಳೂರಿನಲ್ಲಿ ಪೊಲೀಸರಿಂದ ನಾಲ್ಕು ತಂಡ ರಚಿಸಿ ತಲಾಶ್ ನಡೆಸಲಾಗಿತ್ತು. ಬಾಲಕಿ ಗೋವಾದಲ್ಲಿ ಪತ್ತೆಯಾಗುವುದಕ್ಕೂ ಮುಂಚೆ ಮಂಗಳೂರಿನ ಹಲವೆಡೆ ತಿರುಗಾಡಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿದೆ.

ಸೋಮವಾರ ಬೆಳಗ್ಗಿನ ಜಾವ 3 ಗಂಟೆಗೆ ಮಂಗಳೂರು ಕೆಎಸ್​ಆರ್​ಟಿಸಿ ಬಸ್ ನಿಲ್ದಾಣಕ್ಕೆ ಬಾಲಕಿ ಬಂದಿಳಿದಿದ್ದಾಳೆ. ಅಲ್ಲಿಂದ ರಿಕ್ಷಾವೊಂದರಲ್ಲಿ ಮುಕ್ಕ ಬೀಚ್​ಗೆ ತೆರಳಿದ್ದು, ಅಲ್ಲಿಂದ ಮತ್ತೆ ಅದೇ ರಿಕ್ಷಾದಲ್ಲಿ ಕದ್ರಿ ಪಾರ್ಕ್​ಗೆ ಹೋಗಿರುವುದು ಪೊಲೀಸರ ತನಿಖೆಯಿಂದ ಬಯಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:35 pm, Wed, 19 October 22

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?