AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೋಷಕರು ಬೈದಿದ್ದಕ್ಕೆ ಮನೆ ಬಿಟ್ಟು ಹೋಗಿದ್ದ ಬೆಂಗಳೂರಿನ ಬಾಲಕಿ ಗೋವಾದಲ್ಲಿ ಪತ್ತೆ

ಪರೀಕ್ಷೆಯಲ್ಲಿ ಗಣಿತ ವಿಷಯದಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಪೋಷಕರು ಬೈಯ್ಯುತ್ತಾರೆ ಎಂದು ಹೆದರಿ ಮನೆ ಬಿಟ್ಟು ಹೋಗಿದ್ದ ಬಾಲಕಿ ಗೋವಾದಲ್ಲಿ ಪತ್ತೆಯಾಗಿರುವಂತಹ ಘಟನೆ ನಂದಿನಿ ಲೇಔಟ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪೋಷಕರು ಬೈದಿದ್ದಕ್ಕೆ ಮನೆ ಬಿಟ್ಟು ಹೋಗಿದ್ದ ಬೆಂಗಳೂರಿನ ಬಾಲಕಿ ಗೋವಾದಲ್ಲಿ ಪತ್ತೆ
ಸಿಸಿಟಿವಿ ದೃಶ್ಯ
TV9 Web
| Edited By: |

Updated on:Oct 19, 2022 | 11:02 PM

Share

ಬೆಂಗಳೂರು: ಗಣಿತ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಪೋಷಕರು ಬೈಯ್ಯುತ್ತಾರೆ ಎಂದು ಹೆದರಿ ಮನೆ ಬಿಟ್ಟು ಹೋಗಿದ್ದ ಬಾಲಕಿ (girl) ಗೋವಾ (Goa) ದಲ್ಲಿ ಪತ್ತೆಯಾಗಿದ್ದಾಳೆ. 9ನೇ ತರಗತಿ ವಿದ್ಯಾರ್ಥಿನಿ ಭಾರ್ಗವಿ ಮನೆ ಬಿಟ್ಟುಹೋದ ಬಾಲಕಿ. ಸದ್ಯ ಬಾಲಕಿ ಕರೆತರಲು ಬೆಂಗಳೂರಿನಿಂದ ಪೋಷಕರು ತೆರಳಿದ್ದಾರೆ. ಭಾರ್ಗವಿ ಪತ್ತೆಗಾಗಿ ರಾಜ್ಯದಾದ್ಯಂತ ಪೊಲೀಸ್‌ ಠಾಣೆಗಳು ಹಾಗೂ ಹೊರ ರಾಜ್ಯದ ಪೊಲೀಸ್ ಠಾಣೆಗಳಿಗೆ ಮಾಹಿತಿ ರವಾನಿಸಲಾಗಿತ್ತು. ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಹಲವು ಜನರು ಬಾಲಕಿಯ ಪತ್ತೆಗೆ ನೆರವಾಗಲು ಕೋರಿ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದರು. ಬುಧವಾರ ಭಾರ್ಗವಿ ಗೋವಾದಲ್ಲಿರುವುದು ಖಚಿತವಾಗಿದೆ. ಈ ಕುರಿತಾಗಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್‌ ಅವರು ತಮ್ಮ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ.

ಘಟನೆ ಹಿನ್ನೆಲೆ:

ಕೆಲ ದಿನಗಳ ಹಿಂದೆ ಮೆಜೆಸ್ಟಿಕ್​ನಿಂದ ಬಾಲಕಿ ಮಂಗಳೂರು ಬಸ್ ಹತ್ತಿ ಹೋಗಿರುವುದು ಬೆಳಕಿಗೆ ಬಂದಿತ್ತು. ಘಟನೆ ಕುರಿತಾಗಿ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಬಳಿಕ ಬಾಲಕಿ ಪತ್ತೆಗೆ ಮಂಗಳೂರಿನಲ್ಲಿ ಪೊಲೀಸರಿಂದ ನಾಲ್ಕು ತಂಡ ರಚಿಸಿ ತಲಾಶ್ ನಡೆಸಲಾಗಿತ್ತು. ಬಾಲಕಿ ಗೋವಾದಲ್ಲಿ ಪತ್ತೆಯಾಗುವುದಕ್ಕೂ ಮುಂಚೆ ಮಂಗಳೂರಿನ ಹಲವೆಡೆ ತಿರುಗಾಡಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿದೆ.

ಸೋಮವಾರ ಬೆಳಗ್ಗಿನ ಜಾವ 3 ಗಂಟೆಗೆ ಮಂಗಳೂರು ಕೆಎಸ್​ಆರ್​ಟಿಸಿ ಬಸ್ ನಿಲ್ದಾಣಕ್ಕೆ ಬಾಲಕಿ ಬಂದಿಳಿದಿದ್ದಾಳೆ. ಅಲ್ಲಿಂದ ರಿಕ್ಷಾವೊಂದರಲ್ಲಿ ಮುಕ್ಕ ಬೀಚ್​ಗೆ ತೆರಳಿದ್ದು, ಅಲ್ಲಿಂದ ಮತ್ತೆ ಅದೇ ರಿಕ್ಷಾದಲ್ಲಿ ಕದ್ರಿ ಪಾರ್ಕ್​ಗೆ ಹೋಗಿರುವುದು ಪೊಲೀಸರ ತನಿಖೆಯಿಂದ ಬಯಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:35 pm, Wed, 19 October 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ