AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಹಾಳಾದ ರಸ್ತೆಗೆ ಮತ್ತೊಂದು ಬಲಿ: ಇದಕ್ಕೆ ಯಾರು ಹೊಣೆ?

ಬೆಂಗಳೂರು ನಗರದಲ್ಲಿನ ರಸ್ತೆ ಗುಂಡಿಗಳನ್ನ ಮುಚ್ಚುವ ಬಗ್ಗೆ ಸಿಎಂ, ಡಿಸಿಎಂ ತಾಕೀತು ಮಾಡಿದರೂ ಸಹ ಇನ್ನೂ ಸಮಸ್ಯೆ ಬಗೆಹರಿದಿಲ್ಲ. ರಸ್ತೆಗಳಲ್ಲಿ ಗುಂಡಿಗಳು ಮಾಯವಾಗಿಲ್ಲ. ಇತ್ತೀಚೆಗೆಷ್ಟೇ ಬೆಂಗಳೂರು ಹೊರ ವಲಯದಲ್ಲಿ ರಸ್ತೆ ಗುಂಡಿಗೆ ಪದವೀಧರೆ ಬಲಿಯಾಗಿದ್ದಳು. ಈ ಘಟನೆ ಮಾಡುವ ಮುನ್ನವೇ ಬೆಂಗಳೂರಿನ ರಸ್ತೆ ಗುಂಡಿಗೆ ಮತ್ತೊಂದು ಬಲಿಯಾಗಿದೆ.

ಬೆಂಗಳೂರಿನಲ್ಲಿ ಹಾಳಾದ ರಸ್ತೆಗೆ ಮತ್ತೊಂದು ಬಲಿ:  ಇದಕ್ಕೆ ಯಾರು ಹೊಣೆ?
ರಮೇಶ್ ಬಿ. ಜವಳಗೇರಾ
|

Updated on:Oct 10, 2025 | 10:25 PM

Share

ಬೆಂಗಳೂರು, (ಅಕ್ಟೋಬರ್ 10): ಬೆಂಗಳೂರಿನ ರಸ್ತೆ ಗುಂಡಿಗೆ (Pothole) ಮತ್ತೊಂದು ಪ್ರಾಣ ಹೋಗಿದೆ. ಮೊನ್ನೇ ಅಂದರೆ ಸೆಪ್ಟೆಂಬರ್ 29ರಂದು ಬೆಂಗಳೂರಿನ ಬೂದಿಗೆರೆ ಕ್ರಾಸ್‌ ಬಳಿ ರಕ್ಕಸ ರಸ್ತೆ ಗುಂಡಿಯನ್ನು ತಪ್ಪಿಸಲು ಹೋಗಿ ಟಿಪ್ಪರ್‌ , ಕಾಲೇಜಿಗೆ ತೆರಳುತ್ತಿದ್ದ ಧನುಶ್ರೀ ಎಂಬ ಯುವತಿಯ ಸ್ಕೂಟಿಗೆ ಡಿಕ್ಕಿ ಹೊಡೆದಿತ್ತು. ಪರಿಣಾಮ ಧನುಶ್ರೀ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಳು. ಈ ಪ್ರಕರಣ ಮಾಸುವ ಮುನ್ನವೇ ಗುಂಜೂರಿನ ಡೀನ್ಸ್ ಅಕಾಡೆಮಿ ಬಳಿ ಮತ್ತೊಂದು ದುರ್ಘಟನೆ ನಡೆದಿದೆ. ಹೌದು.. ರಸ್ತೆ ಹದಗೆಟ್ಟಿದ್ದರಿಂದ ನಿಯಂತ್ರಣ ತಪ್ಪಿದ ಶಾಲಾ ವಾಹನ ಬೈಕ್‌ಗೆ ಡಿಕ್ಕಿಯಾಗಿದೆ. ಈ ಹಿನ್ನೆಲೆಯಲ್ಲಿ ಬೈಕ್ ಸವಾರ ದುರ್ಮರಣ ಹೊಂದಿದ್ದಾನೆ.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸ್ಥಳೀಯ ಬಿಜೆಪಿ ಶಾಸಕಿ ಮಂಜುಳಾ ಲಿಂಬಾವಳಿ ಹಾಗೂ ನೂತನವಾಗಿ ಜಾರಿಗೆ ಬಂದಿರುವ ಜಿಬಿಎಗೆ ಟ್ವಿಟ್ಟರ್ ಎಕ್ಸ್​​ ನಲ್ಲಿ ಫೋಟೋ ಟ್ಯಾಗ್‌ ಮಾಡಿ ಸಿವಿಕ್ ಅಸೋಸಿಯೇಷನ್ ಫೋರಂ ಆಕ್ರೋಶ ಹೊರಹಾಕಿದೆ.

ಇದನ್ನೂ ಓದಿ: ಬೆಂಗಳೂರು ರಸ್ತೆ ಗುಂಡಿ ಅವಾಂತರಕ್ಕೆ ವಿದ್ಯಾರ್ಥಿನಿ ಬಲಿ

ಬೆಂಗಳೂರಿನಲ್ಲಿ ಎಲ್ಲಿ ನೋಡಿದ್ರೂ ರಸ್ತೆ ಗುಂಡಿಗಳದ್ದೇ ಸಮಸ್ಯೆ. ಗುಂಡಿ ಬಿದ್ದ ರಸ್ತೆಗಳ ಕಾರಣದಿಂದಾಗಿ ವಾಹನ ಸವಾರರು ಪ್ರತಿನಿತ್ಯ ಪರದಾಡುತ್ತಿದ್ದಾರೆ. ಹಾಳಾದ ರಸ್ತೆಗಳಿಂದಾಗಿ ಟ್ರಾಫಿಕ್ ಜಾಮ್, ಧೂಳು ಮತ್ತು ಅಪಘಾತಗಳು ಕೂಡ ಸಂಭವಿಸುತ್ತಿವೆ. ಇನ್ನು ಬೆಂಗಳೂರು ರಸ್ತೆಗಳ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಯಾಗಿತ್ತು. ಅಲ್ಲದೇ ಕೆಲ ಸಾಫ್ಟ್​ ವೇರ್ ಕಂಪನಿಗಳು ರಸ್ತೆಗಳಿಂದ ಬೇಸತ್ತು ಬೆಂಗಳೂರು ತೊರೆಯುವುದಾಗಿ ಸಹ ಹೇಳಿದ್ದವು.

ಹೀಗೆ ಬೆಂಗಳೂರು ರಸ್ತೆ ಬಗ್ಗೆ ಜನಾಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಎಚ್ಚೆತ್ತ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದರು. ಎಲ್ಲೆಲ್ಲಿ ಕಾಮಗಾರಿ ನಡೆಯುತ್ತಿರುವ ರಸ್ತೆಗಳು ಹಾಳಾಗಿವೆಯೋ ಅಲ್ಲಿ ತಾತ್ಕಾಲಿಕವಾಗಿ ಡಾಂಬರು ಹಾಕಿ ಸರಿಪಡಿಸುವಂತೆ ತಾಕೀತು ಮಾಡಿದ್ದರು. ಇಷ್ಟಾದರೂ ಸಹ ಕೆಲ ರಸ್ತೆಗಳಲ್ಲಿ ಹಾಗೇ ಗುಂಡಿಗಳು ಉಳಿದುಕೊಂಡಿವೆ.

Published On - 10:22 pm, Fri, 10 October 25

Follow Us
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ