AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಹಾಳಾದ ರಸ್ತೆಗೆ ಮತ್ತೊಂದು ಬಲಿ: ಇದಕ್ಕೆ ಯಾರು ಹೊಣೆ?

ಬೆಂಗಳೂರು ನಗರದಲ್ಲಿನ ರಸ್ತೆ ಗುಂಡಿಗಳನ್ನ ಮುಚ್ಚುವ ಬಗ್ಗೆ ಸಿಎಂ, ಡಿಸಿಎಂ ತಾಕೀತು ಮಾಡಿದರೂ ಸಹ ಇನ್ನೂ ಸಮಸ್ಯೆ ಬಗೆಹರಿದಿಲ್ಲ. ರಸ್ತೆಗಳಲ್ಲಿ ಗುಂಡಿಗಳು ಮಾಯವಾಗಿಲ್ಲ. ಇತ್ತೀಚೆಗೆಷ್ಟೇ ಬೆಂಗಳೂರು ಹೊರ ವಲಯದಲ್ಲಿ ರಸ್ತೆ ಗುಂಡಿಗೆ ಪದವೀಧರೆ ಬಲಿಯಾಗಿದ್ದಳು. ಈ ಘಟನೆ ಮಾಡುವ ಮುನ್ನವೇ ಬೆಂಗಳೂರಿನ ರಸ್ತೆ ಗುಂಡಿಗೆ ಮತ್ತೊಂದು ಬಲಿಯಾಗಿದೆ.

ಬೆಂಗಳೂರಿನಲ್ಲಿ ಹಾಳಾದ ರಸ್ತೆಗೆ ಮತ್ತೊಂದು ಬಲಿ:  ಇದಕ್ಕೆ ಯಾರು ಹೊಣೆ?
ರಮೇಶ್ ಬಿ. ಜವಳಗೇರಾ
|

Updated on:Oct 10, 2025 | 10:25 PM

Share

ಬೆಂಗಳೂರು, (ಅಕ್ಟೋಬರ್ 10): ಬೆಂಗಳೂರಿನ ರಸ್ತೆ ಗುಂಡಿಗೆ (Pothole) ಮತ್ತೊಂದು ಪ್ರಾಣ ಹೋಗಿದೆ. ಮೊನ್ನೇ ಅಂದರೆ ಸೆಪ್ಟೆಂಬರ್ 29ರಂದು ಬೆಂಗಳೂರಿನ ಬೂದಿಗೆರೆ ಕ್ರಾಸ್‌ ಬಳಿ ರಕ್ಕಸ ರಸ್ತೆ ಗುಂಡಿಯನ್ನು ತಪ್ಪಿಸಲು ಹೋಗಿ ಟಿಪ್ಪರ್‌ , ಕಾಲೇಜಿಗೆ ತೆರಳುತ್ತಿದ್ದ ಧನುಶ್ರೀ ಎಂಬ ಯುವತಿಯ ಸ್ಕೂಟಿಗೆ ಡಿಕ್ಕಿ ಹೊಡೆದಿತ್ತು. ಪರಿಣಾಮ ಧನುಶ್ರೀ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಳು. ಈ ಪ್ರಕರಣ ಮಾಸುವ ಮುನ್ನವೇ ಗುಂಜೂರಿನ ಡೀನ್ಸ್ ಅಕಾಡೆಮಿ ಬಳಿ ಮತ್ತೊಂದು ದುರ್ಘಟನೆ ನಡೆದಿದೆ. ಹೌದು.. ರಸ್ತೆ ಹದಗೆಟ್ಟಿದ್ದರಿಂದ ನಿಯಂತ್ರಣ ತಪ್ಪಿದ ಶಾಲಾ ವಾಹನ ಬೈಕ್‌ಗೆ ಡಿಕ್ಕಿಯಾಗಿದೆ. ಈ ಹಿನ್ನೆಲೆಯಲ್ಲಿ ಬೈಕ್ ಸವಾರ ದುರ್ಮರಣ ಹೊಂದಿದ್ದಾನೆ.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸ್ಥಳೀಯ ಬಿಜೆಪಿ ಶಾಸಕಿ ಮಂಜುಳಾ ಲಿಂಬಾವಳಿ ಹಾಗೂ ನೂತನವಾಗಿ ಜಾರಿಗೆ ಬಂದಿರುವ ಜಿಬಿಎಗೆ ಟ್ವಿಟ್ಟರ್ ಎಕ್ಸ್​​ ನಲ್ಲಿ ಫೋಟೋ ಟ್ಯಾಗ್‌ ಮಾಡಿ ಸಿವಿಕ್ ಅಸೋಸಿಯೇಷನ್ ಫೋರಂ ಆಕ್ರೋಶ ಹೊರಹಾಕಿದೆ.

ಇದನ್ನೂ ಓದಿ: ಬೆಂಗಳೂರು ರಸ್ತೆ ಗುಂಡಿ ಅವಾಂತರಕ್ಕೆ ವಿದ್ಯಾರ್ಥಿನಿ ಬಲಿ

ಬೆಂಗಳೂರಿನಲ್ಲಿ ಎಲ್ಲಿ ನೋಡಿದ್ರೂ ರಸ್ತೆ ಗುಂಡಿಗಳದ್ದೇ ಸಮಸ್ಯೆ. ಗುಂಡಿ ಬಿದ್ದ ರಸ್ತೆಗಳ ಕಾರಣದಿಂದಾಗಿ ವಾಹನ ಸವಾರರು ಪ್ರತಿನಿತ್ಯ ಪರದಾಡುತ್ತಿದ್ದಾರೆ. ಹಾಳಾದ ರಸ್ತೆಗಳಿಂದಾಗಿ ಟ್ರಾಫಿಕ್ ಜಾಮ್, ಧೂಳು ಮತ್ತು ಅಪಘಾತಗಳು ಕೂಡ ಸಂಭವಿಸುತ್ತಿವೆ. ಇನ್ನು ಬೆಂಗಳೂರು ರಸ್ತೆಗಳ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಯಾಗಿತ್ತು. ಅಲ್ಲದೇ ಕೆಲ ಸಾಫ್ಟ್​ ವೇರ್ ಕಂಪನಿಗಳು ರಸ್ತೆಗಳಿಂದ ಬೇಸತ್ತು ಬೆಂಗಳೂರು ತೊರೆಯುವುದಾಗಿ ಸಹ ಹೇಳಿದ್ದವು.

ಹೀಗೆ ಬೆಂಗಳೂರು ರಸ್ತೆ ಬಗ್ಗೆ ಜನಾಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಎಚ್ಚೆತ್ತ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದರು. ಎಲ್ಲೆಲ್ಲಿ ಕಾಮಗಾರಿ ನಡೆಯುತ್ತಿರುವ ರಸ್ತೆಗಳು ಹಾಳಾಗಿವೆಯೋ ಅಲ್ಲಿ ತಾತ್ಕಾಲಿಕವಾಗಿ ಡಾಂಬರು ಹಾಕಿ ಸರಿಪಡಿಸುವಂತೆ ತಾಕೀತು ಮಾಡಿದ್ದರು. ಇಷ್ಟಾದರೂ ಸಹ ಕೆಲ ರಸ್ತೆಗಳಲ್ಲಿ ಹಾಗೇ ಗುಂಡಿಗಳು ಉಳಿದುಕೊಂಡಿವೆ.

Published On - 10:22 pm, Fri, 10 October 25

Follow Us
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು