Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಯಮಿಗಳಿಗೆ ವಿವಿಧ ರೀತಿಯಲ್ಲಿ ವಂಚಿಸುವ ವಂಚಕ! ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೆಸರಲ್ಲೂ ವಂಚನೆ

ಉದ್ಯಮಿಗಳಿಗೆ ವಿವಿಧ ರೀತಿಯಲ್ಲಿ ವಂಚನೆ ಎಸಗುತ್ತಿದ್ದ ವಂಚನಕ ವಿರುದ್ಧ ಬೆಂಗಳೂರು ನಗರದಲ್ಲಿ ಸಾಲು ಸಾಲು ಪ್ರಕರಣಗಳು ದಾಖಲವಾಗಿವೆ. ಸದ್ಯ, ದಾಖಲಾದ ಪ್ರಕರಣಗಳಲ್ಲಿ ಒಂದು ವಂಚನೆ ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿದೆ. ಬಿಜೆಪಿ ರಾಜ್ಯ ಅದ್ಯಕ್ಷ ವಿಜಯೇಂದ್ರ, ಬಿಜೆಪಿ ಹೈ ಕಮಾಂಡ್ ಪರಿಚಯ ಇದೆ ಎಂದು ಹೇಳಿಕೊಂಡೂ ವಂಚನೆ ಎಸಗಿದ್ದಾಗಿ ತಿಳಿದುಬಂದಿದೆ.

ಉದ್ಯಮಿಗಳಿಗೆ ವಿವಿಧ ರೀತಿಯಲ್ಲಿ ವಂಚಿಸುವ ವಂಚಕ! ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೆಸರಲ್ಲೂ ವಂಚನೆ
ವಂಚಕ ಯೂಸೂಫ್
Follow us
Prajwal Kumar NY
| Updated By: Rakesh Nayak Manchi

Updated on:Nov 26, 2023 | 8:51 AM

ಬೆಂಗಳೂರು, ನ.26: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಹಾಗೂ ಪಕ್ಷದ ಹೈಕಮಾಂಡ್ ಪರಿಚಯ ಇದೆ ಎಂದು ಪರಿಚಯ ಮಾಡಿ ವಂಚನೆ ಎಸಗುತ್ತಿದ್ದ ಯೂಸೂಫ್ ಎಂಬಾತನ ಮುಖವಾಡ ಕಳಚಿಬಿದ್ದಿದೆ. ಉದ್ಯಮಿಗಳಿಗೆ ವಿವಿಧ ರೀತಿಯಲ್ಲಿ ವಂಚನೆ ಎಸಗುತ್ತಿದ್ದ ಯೂಸೂಫ್ ವಿರುದ್ಧ ಸಾಲುಸಾಲು ಪ್ರಕರಣಗಳು ದಾಖಲಾಗಿವೆ.

ಆರೋಪಿ ಯೂಸೂಫ್, ತನಗೆ ಬಿಜೆಪಿ ರಾಜ್ಯ ಅದ್ಯಕ್ಷ ವಿಜಯೇಂದ್ರ ಪರಿಚಯ ಇದೆ, ಬಿಜೆಪಿ ಹೈ ಕಮಾಂಡ್ ಪರಿಚಯ ಇದೆ, ಅವರನ್ನು ಪರಿಚಯ ಮಾಡಿಸುತ್ತೇನೆ. ನಂತರ ನಿಮಗೆ ರಾಜಕೀಯ ಕೆಲಸ ಮಾಡಿಸಿಕೊಡುತ್ತೇನೆ ಎಂದು ನಂಬಿಸಿ ಹಣ ಪಡೆದು ವಿಜಯೇಂದ್ರಗೆ ನೀಡುತ್ತೇನೆ ಎಂದು ಹೇಳಿ ಹಣ ಪಡೆದು ವಂಚನೆ ಎಸಗಿದ್ದಾನೆ.

ಉದ್ಯಮಿಗಳನ್ನು ಪರಿಚಯ ಮಾಡಿಕೊಳ್ಳುತ್ತಿದ್ದ ಆರೋಪಿ ಯೂಸೂಫ್, ಅವರ ವಿಚಾರವನ್ನು ತಿಳಿದುಕೊಂಡ ಅವರ ಅವಶ್ಯಕತೆಗೆ ತಕ್ಕಂತೆ ತನ್ನ ವೃತ್ತಿಯನ್ನು ಹೇಳಿಕೊಳ್ಳುತ್ತಿದ್ದನು. ಆರಂಭದಲ್ಲಿ ಉದ್ಯಮಗಳ ಪರಿಚಯ ಮಾಡಿಕೊಳ್ಳುತ್ತಿದ್ದ ಯೂಸೂಫ್, ಬಳಿಕ ಆ ಉದ್ಯಮಿಗಳಿಗೆ ಏನು ಯಾವ ವಿಚಾರಕ್ಕೆ ಪ್ರಯತ್ನ ಮಾಡುತ್ತಿದ್ದಾರೆ ಎಂದು ತಿಳಿದುಕೊಳ್ಳುತ್ತಿದ್ದನು.

ಇದನ್ನೂ ಓದಿ; 100 ಕೋಟಿ ಹಣ ವಂಚನೆ ಪ್ರಕರಣ: ಪ್ರಕಾಶ್ ರೈಗೆ ಸಮನ್ಸ್

ನಂತರ ಉದ್ಯಮಿಗಳಿಗ ಅವಶ್ಯಕತೆಗೆ ತಕ್ಕಂತ ಯುಸೂಫ್ ತನ್ನ ವೃತಿಯನ್ನು ಹೇಳಿಕೊಳ್ಳುತ್ತಿದ್ದ. ಅದೇ ರೀತಿ, ಟ್ರಾವಲ್ ಕಂಪನಿ ಮಾಲಿಕರಿಗೆ ಜಿಎಸ್​ಟಿ ಕಮಿಷನರ್ ಹೆಸರಲ್ಲಿ ವಂಚನೆ ಎಸಗಿದ್ದಾನೆ. ಹೌದು, ಟ್ರಾವಲ್ ಕಂಪನಿ ಮಾಲಿಕರು ಕೋಟ್ಯಾಂತರ ರೂಪಾಯಿ ಜಿಎಸ್​ಟಿ ಕಟ್ಟಬೇಕಿತ್ತು. ಈ ಬಗ್ಗೆ ಯೂಸೂಫ್ ಜೊತೆ ಮಾಲೀಕರು ಮಾತಾನಾಡಿದ್ದರು.

ಈ ವೇಳೆ ಜಿಎಸ್​ಟಿ ಕಮಿಷನರ್ ತನಗೆ ಪರಿಚಯ ಎಂದು ಕಚೇರಿಗೆ ಕರೆದುಕೊಂಡು ಹೋಗಿದ್ದ ಯುಸೂಫ್, ಸಾರ್ ಇವರು ನಮ್ಮ ಸ್ನೇಹಿತರು ಎಂದು ಪರಿಚಯ ಮಾಡಿಸಿದ್ದ. ಬಳಿಕ ಹೊರ ಬಂದ ಮೇಲೆ ತಾನು ಮಾತನಾಡಿದ್ದೇನೆ. ನಿಮ್ಮ ಜಿಎಸ್​ಟಿ ಬಿಲ್ ಐವತ್ತು ಪರ್ಸೆಂಟ್ ಕಡಿಮೆ ಮಾಡುತ್ತೇವೆ ಎಂದು ಹೇಳಿದ್ದ. ಹೀಗೆ ಟ್ರಾವೆಲ್ ಕಂಪನಿ ಮಾಲೀಕರನ್ನು ನಂಬಿಸಿ ಅವರಿಂದ ಅಡ್ವಾನ್ಸ್ ಎಂದು 15 ಲಕ್ಷಕ್ಕೂ ಅಧಿಕ ಹಣ ಪಡೆದು ವಂಚನೆ ಎಸಗಿದ್ದನು.

ಬ್ಯಾಂಕ್ ಲೋನ್ ಪಡೆಯಲು ಯತ್ನಿಸುತ್ತಿದ್ದವರಿಗೂ ವಂಚನೆ

ಬ್ಯಾಂಕ್ ಲೋನ್ ಪಡೆಯಲು ಪ್ರಯತ್ನ ಮಾಡುತ್ತಿದ್ದವರು ಕೂಡ ಯೂಸಫ್ ಟಾರ್ಗೆಟ್ ಮಾಡಿಕೊಂಡಿದ್ದನು. ಲೋನ್​ಗಾಗಿ ಯತ್ನಿಸುತ್ತಿದ್ದವರನ್ನು ಪರಿಚಯ ಮಾಡಿಕೊಂಡು ಬ್ಯಾಂಕ್ ಮ್ಯಾನೇಜರ್ ಪರಿಚಯ ಎಂದು ನಂಬಿಸುತ್ತಿದ್ದನು. ಬಳಿಕ ಬ್ಯಾಂಕ್​ಗೆ ಕರೆದುಕೊಂಡು ಹೋಗಿ ಮ್ಯಾನೇಜರ್ ಜೊತೆ ಮಾತಾಡಿಸಿದ್ದ.

ಬಳಿಕ ಲೋನ್ ಮಾಡಿಸಿಕೊಡುತ್ತೇನೆ ಎಂದು ಹೇಳಿ ಸಹಿ ಪಡೆದುಕೊಂಡಿದ್ದನು. ಬಳಿಕ ಲೋನ್ ಮಾಡಿಸಿಕೊಡುತ್ತೇನೆ ಎಂದು ಹೇಳಿ ಸಹಿ ಪಡೆದುಕೊಂಡ. ಆದರೆ, ಆಗಿದ್ದೇ ಬೇರೆ. ಹೌದು, ಯುಸೂಫ್ ತಾನು ಹಣ ಪಡೆದು ಬ್ಯಾಂಕ್​ಗೆ ಕರೆದುಕೊಂಡು ಹೋಗಿದ್ದವರನ್ನು ಎರಡು ಕೋಟಿ ನಲವತ್ತು ಲಕ್ಷ ಲೋನ್​ಗೆ ಶುರುಟಿ ಮಾಡಿಸಿದ್ದ. ಬ್ಯಾಂಕ್ ನೋಟಿಸ್ ಬಂದಾಗಲೇ ಆ ವ್ಯಕ್ತಿಗೆ ತಾನು ವಂಚನೆಗೊಳಗಾಗಿರುವುದು ತಿಳಿದುಬಂದಿದೆ.

ಸದ್ಯ, ದೊಡ್ಡ ವ್ಯಕ್ತಿಗಳನ್ನೇ ಟಾರ್ಗೆಟ್ ಮಾಡುತ್ತಾ ಬಣ್ಣಬಣ್ಣದ ಮಾತುಗಳನ್ನಾಡಿ ಅವಶ್ಯಕತೆಗೆ ತಕ್ಕಂತೆ ವೃತ್ತಿಯನ್ನು ಹೇಳಿಕೊಳ್ಳುತ್ತಾ ನೆರವಾಗುವ ನೆಪದಲ್ಲಿ ಹಣ ಪಡೆದು ವಂಚನೆ ಎಸಗುತ್ತಿದ್ದ ಯೂಸೂಫ್ ವಿರುದ್ಧ ಮಲ್ಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಆರೋಪಿಯನ್ನು ಬಂಧಿಸಲಾಗಿದ್ದು, ಈತನ ವಿರುದ್ಧ ದಾಖಲಾದ ವಿವಿಧ ಪ್ರಕರಣದಲ್ಲಿ ಒಂದನ್ನು ಸಿಸಿಬಿಗೆ ವರ್ಗಾವಣೆಯಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:49 am, Sun, 26 November 23

ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ