AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮೊಬೈಲ್​ ಶಾಪ್​ ಮಾಲೀಕನ ಮೇಲೆ ಹಲ್ಲೆ ಪ್ರಕರಣ; ಹಲ್ಲೆಗೊಳಗಾದವನ ವಿರುದ್ಧವೂ ದಾಖಲಾಯ್ತು ಎಫ್​ಐಆರ್

ಗರತ್​ಪೇಟೆ(Nagarathpet)ಯಲ್ಲಿ ಮಾ.17ರಂದು ಮೊಬೈಲ್​ ಶಾಪ್​ ಮಾಲೀಕನ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ಲೆಗೊಳಗಾದ ಮುಖೇಶ್ ವಿರುದ್ಧವೂ ಎಫ್​ಐಆರ್(FIR) ದಾಖಲು ಮಾಡಲಾಗಿದ್ದು, ಕೋರ್ಟ್ ಅನುಮತಿ ಪಡೆದು ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ.

ಬೆಂಗಳೂರಿನಲ್ಲಿ ಮೊಬೈಲ್​ ಶಾಪ್​ ಮಾಲೀಕನ ಮೇಲೆ ಹಲ್ಲೆ ಪ್ರಕರಣ; ಹಲ್ಲೆಗೊಳಗಾದವನ ವಿರುದ್ಧವೂ ದಾಖಲಾಯ್ತು ಎಫ್​ಐಆರ್
ಬೆಂಗಳೂರಿನಲ್ಲಿ ಮೊಬೈಲ್​ ಶಾಪ್​ ಮಾಲೀಕನ ಮೇಲೆ ಹಲ್ಲೆ
ಜಗದೀಶ ಬಿ.
| Edited By: ಕಿರಣ್ ಹನುಮಂತ್​ ಮಾದಾರ್|

Updated on:Apr 05, 2024 | 8:57 AM

Share

ಬೆಂಗಳೂರು, ಏ.05: ನಗರತ್​ಪೇಟೆ(Nagarathpet)ಯಲ್ಲಿ ಮಾ.17ರಂದು ಮೊಬೈಲ್​ ಶಾಪ್​ ಮಾಲೀಕನ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ಲೆಗೊಳಗಾದ ಮುಖೇಶ್ ವಿರುದ್ಧವೂ ಎಫ್​ಐಆರ್(FIR) ದಾಖಲು ಮಾಡಲಾಗಿದೆ. ಕೋರ್ಟ್ ಅನುಮತಿ ಪಡೆದು ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ. ಘಟನೆ ಬಳಿಕ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಬಂಧಿತರಲ್ಲಿ ಒಬ್ಬನಾದ ಸುಲೇಮಾನ್ ಎಂಬಾತನ ತಾಯಿ ಅವರು ಮುಖೇಶ್ ವಿರುದ್ಧ ಪ್ರತಿ ದೂರು ನೀಡಿದ್ದರು. ನಂತರ ದೂರು ಆಧರಿಸಿ ಪೊಲೀಸರು ಎನ್​ಸಿಆರ್ ದಾಖಲಿಸಿಕೊಂಡಿದ್ದರು. ಇದೀಗ ಕೋರ್ಟ್ ಅನುಮತಿ ಪಡೆದು ಮುಖೇಶ್ ವಿರುದ್ಧ FIR ದಾಖಲು ಮಾಡಲಾಗಿದೆ.

ದೂರಿನಲ್ಲೇನಿದೆ?

ಮುಖೇಶ್ ಮೂರರಿಂದ ನಾಲ್ಕು ದಿನಗಳಿಂದ ಜೊರಾಗಿ ಸೌಂಡ್ ಸಿಸ್ಟಂ ಹಾಕಿದ್ದ. ಸೌಂಡ್ ಸಿಸ್ಟಂನಿಂದ ರಂಜಾನ್ ಹಿನ್ನಲೆ ಪ್ರಾರ್ಥನೆ ಮಾಡುವ 3 ಸಾವಿರ ಮಂದಿಗೆ ತೊಂದರೆಯಾಗಿದೆ. ಹೀಗಾಗಿ ಏಕೆ ಸೌಂಡ್ ಸಿಸ್ಟಂ ಜೋರಾಗಿ ಕೊಟ್ಟಿದ್ದೀಯ ಎಂದು ನನ್ನ ಮಗ ಹಾಗೂ ಆತನ ಸ್ನೇಹಿತರು ಹೇಳಿದಕ್ಕೆ ಮುಖೇಶ್​ನಿಂದ ಐವರ ಮೇಲೆ ಹಲ್ಲೆ ಮಾಡಿ ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಘಟನೆಯ ಮರುದಿನವೇ ಬಂಧಿತ ಸುಲೇಮಾನ್ ತಾಯಿ ದೂರು ನೀಡಿದ್ದರು.

ಇದನ್ನೂ ಓದಿ:ನಗರತ್​ಪೇಟೆ ಗಲಾಟೆ, ಹನುಮಭಕ್ತರ ಪ್ರತಿಭಟನೆಯಲ್ಲಿ ಶಾಸಕ ಸುರೇಶ್ ಕುಮಾರ್​ರನ್ನು ಎಳೆದಾಡಿದ ಪೊಲೀಸರು

ಘಟನೆ ವಿವರ

ಕಳೆದ ಮಾ.17 ರಂದು ನಗರತ್​ಪೇಟೆಯಲ್ಲಿ ಮೊಬೈಲ್ ಅಂಗಡಿಯಲ್ಲಿ ಹನುಮಾನ್ ಚಾಲಿಸಾ ಹಾಡು ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಲಾಗಿತ್ತು. ಇದು ದೊಡ್ಡಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಅಷ್ಟೇ ಅಲ್ಲ, ಇದನ್ನು ಖಂಡಿಸಿ ಘಟನಾ ಸ್ಥಳದಲ್ಲಿ ಹನುಮ ಭಕ್ತರು ರ್‍ಯಾಲಿ ನಡೆಸಿದ್ದರು. ಈ ರ್‍ಯಾಲಿಯಲ್ಲಿ ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಸಿ.ಕೆ ರಾಮಮೂರ್ತಿ, ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ , ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್ ಹರೀಶ್, ಬಿಜೆಪಿ ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ ಸೇರಿದಂತೆ ಶಾಸಕರು ಹಾಗೂ ಹಲವು ನಾಯಕರು ಮತ್ತು ಹನುಮ ಭಕ್ತರು ಪಾಲ್ಗೊಂಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:52 am, Fri, 5 April 24

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ