AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮೊಬೈಲ್​ ಶಾಪ್​ ಮಾಲೀಕನ ಮೇಲೆ ಹಲ್ಲೆ ಪ್ರಕರಣ; ಹಲ್ಲೆಗೊಳಗಾದವನ ವಿರುದ್ಧವೂ ದಾಖಲಾಯ್ತು ಎಫ್​ಐಆರ್

ಗರತ್​ಪೇಟೆ(Nagarathpet)ಯಲ್ಲಿ ಮಾ.17ರಂದು ಮೊಬೈಲ್​ ಶಾಪ್​ ಮಾಲೀಕನ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ಲೆಗೊಳಗಾದ ಮುಖೇಶ್ ವಿರುದ್ಧವೂ ಎಫ್​ಐಆರ್(FIR) ದಾಖಲು ಮಾಡಲಾಗಿದ್ದು, ಕೋರ್ಟ್ ಅನುಮತಿ ಪಡೆದು ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ.

ಬೆಂಗಳೂರಿನಲ್ಲಿ ಮೊಬೈಲ್​ ಶಾಪ್​ ಮಾಲೀಕನ ಮೇಲೆ ಹಲ್ಲೆ ಪ್ರಕರಣ; ಹಲ್ಲೆಗೊಳಗಾದವನ ವಿರುದ್ಧವೂ ದಾಖಲಾಯ್ತು ಎಫ್​ಐಆರ್
ಬೆಂಗಳೂರಿನಲ್ಲಿ ಮೊಬೈಲ್​ ಶಾಪ್​ ಮಾಲೀಕನ ಮೇಲೆ ಹಲ್ಲೆ
Jagadisha B
| Edited By: |

Updated on:Apr 05, 2024 | 8:57 AM

Share

ಬೆಂಗಳೂರು, ಏ.05: ನಗರತ್​ಪೇಟೆ(Nagarathpet)ಯಲ್ಲಿ ಮಾ.17ರಂದು ಮೊಬೈಲ್​ ಶಾಪ್​ ಮಾಲೀಕನ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ಲೆಗೊಳಗಾದ ಮುಖೇಶ್ ವಿರುದ್ಧವೂ ಎಫ್​ಐಆರ್(FIR) ದಾಖಲು ಮಾಡಲಾಗಿದೆ. ಕೋರ್ಟ್ ಅನುಮತಿ ಪಡೆದು ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ. ಘಟನೆ ಬಳಿಕ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಬಂಧಿತರಲ್ಲಿ ಒಬ್ಬನಾದ ಸುಲೇಮಾನ್ ಎಂಬಾತನ ತಾಯಿ ಅವರು ಮುಖೇಶ್ ವಿರುದ್ಧ ಪ್ರತಿ ದೂರು ನೀಡಿದ್ದರು. ನಂತರ ದೂರು ಆಧರಿಸಿ ಪೊಲೀಸರು ಎನ್​ಸಿಆರ್ ದಾಖಲಿಸಿಕೊಂಡಿದ್ದರು. ಇದೀಗ ಕೋರ್ಟ್ ಅನುಮತಿ ಪಡೆದು ಮುಖೇಶ್ ವಿರುದ್ಧ FIR ದಾಖಲು ಮಾಡಲಾಗಿದೆ.

ದೂರಿನಲ್ಲೇನಿದೆ?

ಮುಖೇಶ್ ಮೂರರಿಂದ ನಾಲ್ಕು ದಿನಗಳಿಂದ ಜೊರಾಗಿ ಸೌಂಡ್ ಸಿಸ್ಟಂ ಹಾಕಿದ್ದ. ಸೌಂಡ್ ಸಿಸ್ಟಂನಿಂದ ರಂಜಾನ್ ಹಿನ್ನಲೆ ಪ್ರಾರ್ಥನೆ ಮಾಡುವ 3 ಸಾವಿರ ಮಂದಿಗೆ ತೊಂದರೆಯಾಗಿದೆ. ಹೀಗಾಗಿ ಏಕೆ ಸೌಂಡ್ ಸಿಸ್ಟಂ ಜೋರಾಗಿ ಕೊಟ್ಟಿದ್ದೀಯ ಎಂದು ನನ್ನ ಮಗ ಹಾಗೂ ಆತನ ಸ್ನೇಹಿತರು ಹೇಳಿದಕ್ಕೆ ಮುಖೇಶ್​ನಿಂದ ಐವರ ಮೇಲೆ ಹಲ್ಲೆ ಮಾಡಿ ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಘಟನೆಯ ಮರುದಿನವೇ ಬಂಧಿತ ಸುಲೇಮಾನ್ ತಾಯಿ ದೂರು ನೀಡಿದ್ದರು.

ಇದನ್ನೂ ಓದಿ:ನಗರತ್​ಪೇಟೆ ಗಲಾಟೆ, ಹನುಮಭಕ್ತರ ಪ್ರತಿಭಟನೆಯಲ್ಲಿ ಶಾಸಕ ಸುರೇಶ್ ಕುಮಾರ್​ರನ್ನು ಎಳೆದಾಡಿದ ಪೊಲೀಸರು

ಘಟನೆ ವಿವರ

ಕಳೆದ ಮಾ.17 ರಂದು ನಗರತ್​ಪೇಟೆಯಲ್ಲಿ ಮೊಬೈಲ್ ಅಂಗಡಿಯಲ್ಲಿ ಹನುಮಾನ್ ಚಾಲಿಸಾ ಹಾಡು ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಲಾಗಿತ್ತು. ಇದು ದೊಡ್ಡಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಅಷ್ಟೇ ಅಲ್ಲ, ಇದನ್ನು ಖಂಡಿಸಿ ಘಟನಾ ಸ್ಥಳದಲ್ಲಿ ಹನುಮ ಭಕ್ತರು ರ್‍ಯಾಲಿ ನಡೆಸಿದ್ದರು. ಈ ರ್‍ಯಾಲಿಯಲ್ಲಿ ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಸಿ.ಕೆ ರಾಮಮೂರ್ತಿ, ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ , ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್ ಹರೀಶ್, ಬಿಜೆಪಿ ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ ಸೇರಿದಂತೆ ಶಾಸಕರು ಹಾಗೂ ಹಲವು ನಾಯಕರು ಮತ್ತು ಹನುಮ ಭಕ್ತರು ಪಾಲ್ಗೊಂಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:52 am, Fri, 5 April 24

Follow Us
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ