AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮೊಬೈಲ್​ ಶಾಪ್​ ಮಾಲೀಕನ ಮೇಲೆ ಹಲ್ಲೆ ಪ್ರಕರಣ; ಹಲ್ಲೆಗೊಳಗಾದವನ ವಿರುದ್ಧವೂ ದಾಖಲಾಯ್ತು ಎಫ್​ಐಆರ್

ಗರತ್​ಪೇಟೆ(Nagarathpet)ಯಲ್ಲಿ ಮಾ.17ರಂದು ಮೊಬೈಲ್​ ಶಾಪ್​ ಮಾಲೀಕನ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ಲೆಗೊಳಗಾದ ಮುಖೇಶ್ ವಿರುದ್ಧವೂ ಎಫ್​ಐಆರ್(FIR) ದಾಖಲು ಮಾಡಲಾಗಿದ್ದು, ಕೋರ್ಟ್ ಅನುಮತಿ ಪಡೆದು ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ.

ಬೆಂಗಳೂರಿನಲ್ಲಿ ಮೊಬೈಲ್​ ಶಾಪ್​ ಮಾಲೀಕನ ಮೇಲೆ ಹಲ್ಲೆ ಪ್ರಕರಣ; ಹಲ್ಲೆಗೊಳಗಾದವನ ವಿರುದ್ಧವೂ ದಾಖಲಾಯ್ತು ಎಫ್​ಐಆರ್
ಬೆಂಗಳೂರಿನಲ್ಲಿ ಮೊಬೈಲ್​ ಶಾಪ್​ ಮಾಲೀಕನ ಮೇಲೆ ಹಲ್ಲೆ
ಜಗದೀಶ ಬಿ.
| Edited By: ಕಿರಣ್ ಹನುಮಂತ್​ ಮಾದಾರ್|

Updated on:Apr 05, 2024 | 8:57 AM

Share

ಬೆಂಗಳೂರು, ಏ.05: ನಗರತ್​ಪೇಟೆ(Nagarathpet)ಯಲ್ಲಿ ಮಾ.17ರಂದು ಮೊಬೈಲ್​ ಶಾಪ್​ ಮಾಲೀಕನ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ಲೆಗೊಳಗಾದ ಮುಖೇಶ್ ವಿರುದ್ಧವೂ ಎಫ್​ಐಆರ್(FIR) ದಾಖಲು ಮಾಡಲಾಗಿದೆ. ಕೋರ್ಟ್ ಅನುಮತಿ ಪಡೆದು ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ. ಘಟನೆ ಬಳಿಕ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಬಂಧಿತರಲ್ಲಿ ಒಬ್ಬನಾದ ಸುಲೇಮಾನ್ ಎಂಬಾತನ ತಾಯಿ ಅವರು ಮುಖೇಶ್ ವಿರುದ್ಧ ಪ್ರತಿ ದೂರು ನೀಡಿದ್ದರು. ನಂತರ ದೂರು ಆಧರಿಸಿ ಪೊಲೀಸರು ಎನ್​ಸಿಆರ್ ದಾಖಲಿಸಿಕೊಂಡಿದ್ದರು. ಇದೀಗ ಕೋರ್ಟ್ ಅನುಮತಿ ಪಡೆದು ಮುಖೇಶ್ ವಿರುದ್ಧ FIR ದಾಖಲು ಮಾಡಲಾಗಿದೆ.

ದೂರಿನಲ್ಲೇನಿದೆ?

ಮುಖೇಶ್ ಮೂರರಿಂದ ನಾಲ್ಕು ದಿನಗಳಿಂದ ಜೊರಾಗಿ ಸೌಂಡ್ ಸಿಸ್ಟಂ ಹಾಕಿದ್ದ. ಸೌಂಡ್ ಸಿಸ್ಟಂನಿಂದ ರಂಜಾನ್ ಹಿನ್ನಲೆ ಪ್ರಾರ್ಥನೆ ಮಾಡುವ 3 ಸಾವಿರ ಮಂದಿಗೆ ತೊಂದರೆಯಾಗಿದೆ. ಹೀಗಾಗಿ ಏಕೆ ಸೌಂಡ್ ಸಿಸ್ಟಂ ಜೋರಾಗಿ ಕೊಟ್ಟಿದ್ದೀಯ ಎಂದು ನನ್ನ ಮಗ ಹಾಗೂ ಆತನ ಸ್ನೇಹಿತರು ಹೇಳಿದಕ್ಕೆ ಮುಖೇಶ್​ನಿಂದ ಐವರ ಮೇಲೆ ಹಲ್ಲೆ ಮಾಡಿ ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಘಟನೆಯ ಮರುದಿನವೇ ಬಂಧಿತ ಸುಲೇಮಾನ್ ತಾಯಿ ದೂರು ನೀಡಿದ್ದರು.

ಇದನ್ನೂ ಓದಿ:ನಗರತ್​ಪೇಟೆ ಗಲಾಟೆ, ಹನುಮಭಕ್ತರ ಪ್ರತಿಭಟನೆಯಲ್ಲಿ ಶಾಸಕ ಸುರೇಶ್ ಕುಮಾರ್​ರನ್ನು ಎಳೆದಾಡಿದ ಪೊಲೀಸರು

ಘಟನೆ ವಿವರ

ಕಳೆದ ಮಾ.17 ರಂದು ನಗರತ್​ಪೇಟೆಯಲ್ಲಿ ಮೊಬೈಲ್ ಅಂಗಡಿಯಲ್ಲಿ ಹನುಮಾನ್ ಚಾಲಿಸಾ ಹಾಡು ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಲಾಗಿತ್ತು. ಇದು ದೊಡ್ಡಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಅಷ್ಟೇ ಅಲ್ಲ, ಇದನ್ನು ಖಂಡಿಸಿ ಘಟನಾ ಸ್ಥಳದಲ್ಲಿ ಹನುಮ ಭಕ್ತರು ರ್‍ಯಾಲಿ ನಡೆಸಿದ್ದರು. ಈ ರ್‍ಯಾಲಿಯಲ್ಲಿ ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಸಿ.ಕೆ ರಾಮಮೂರ್ತಿ, ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ , ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್ ಹರೀಶ್, ಬಿಜೆಪಿ ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ ಸೇರಿದಂತೆ ಶಾಸಕರು ಹಾಗೂ ಹಲವು ನಾಯಕರು ಮತ್ತು ಹನುಮ ಭಕ್ತರು ಪಾಲ್ಗೊಂಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:52 am, Fri, 5 April 24

Follow Us
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್