ಬೆಂಗಳೂರು ಬಂದ್ ವೇಳೆ ಹೋಟೆಲ್​ ಮೇಲೆ ದಾಳಿ ಪ್ರಕರಣ; ಬಿಜೆಪಿ ಕಾರ್ಯಕರ್ತರ ಬಂಧನ

ಜಯನಗರ(Jayanagara)ದಲ್ಲಿ ನಡೆದಿದ್ದ ಹೋಟೆಲ್ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಜಯನಗರ ಪೊಲೀಸರು ಇಬ್ಬರು ಅರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಯೋಗಿಶ್ ಮತ್ತು ಸೋಮಶೇಖರ್ ಬಂಧಿತ ಅರೋಪಿಗಳು. ಹೌದು, ಬಂದ್​ ವೇಳೆ ಏಂಟಕ್ಕು ಹೆಚ್ಚು ಜನರು  ಗುಂಪಾಗಿ ಬಂದು ಹೋಟೆಲ್ ಸೇರಿ ನಾಲ್ಕು ಕಡೆ ಕಲ್ಲು ತೂರಿದ್ದರು.

ಬೆಂಗಳೂರು ಬಂದ್ ವೇಳೆ ಹೋಟೆಲ್​ ಮೇಲೆ ದಾಳಿ ಪ್ರಕರಣ; ಬಿಜೆಪಿ ಕಾರ್ಯಕರ್ತರ ಬಂಧನ
ಬಂಧಿತ ಆರೋಪಿಗಳು
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Sep 28, 2023 | 8:48 AM

ಬೆಂಗಳೂರು, ಸೆ.28: ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸಬೇಕು ಎಂದು ಸುಪ್ರೀಂಕೊರ್ಟ್​ ಆದೇಶ ನೀಡಿದ ಹಿನ್ನಲೆ ಬೆಂಗಳೂರು ಬಂದ್ ಮಾಡಲಾಗಿತ್ತು. ಅಂದು ಜಯನಗರ(Jayanagara)ದಲ್ಲಿ ನಡೆದಿದ್ದ ಹೋಟೆಲ್ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಜಯನಗರ ಪೊಲೀಸರು ಇಬ್ಬರು ಅರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಯೋಗಿಶ್ ಮತ್ತು ಸೋಮಶೇಖರ್ ಬಂಧಿತ ಅರೋಪಿಗಳು. ಹೌದು, ಬಂದ್​ ವೇಳೆ ಏಂಟಕ್ಕು ಹೆಚ್ಚು ಜನರು  ಗುಂಪಾಗಿ ಬಂದು ಹೋಟೆಲ್ ಸೇರಿ ನಾಲ್ಕು ಕಡೆ ಕಲ್ಲು ತೂರಿದ್ದರು.

ಈ ಹಿನ್ನಲೆ ಜಯನಗರ ಪೋಲೀಸ್ ಠಾಣೆಯಲ್ಲಿ ಪ್ರತ್ಯೇಕ ನಾಲ್ಕು ಕೇಸ್ ದಾಖಲು ಮಾಡಲಾಗಿತ್ತು. ಸದ್ಯ ಇಬ್ಬರು ಅರೋಪಿಗಳು ಅರೆಸ್ಟ್ ಮಾಡಿ ಜೈಲಿಗಟ್ಟಿರುವ ಪೊಲೀಸರು, ಉಳಿದ ಹಲವಾರು ಅರೋಪಿಗಳಿಗೆ ಹುಡುಕಾಟ ನಡೆಸಿದ್ದಾರೆ. ಇನ್ನು ತನಿಖೆ ವೇಳೆ ಬಂಧಿತ ಇಬ್ಬರು ಆರೋಪಿಗಳು ಬಿಜೆಪಿ ಕಾರ್ಯಕರ್ತರಾಗಿದ್ದು, ಜಯನಗರ ಎಂ ಎಲ್ ಎ ರಾಮಮೂರ್ತಿ ಶಿಷ್ಯರು ಎಂಬುದು ಪತ್ತೆಯಾಗಿದೆ.

ಇದನ್ನೂ ಓದಿ:ಬೆಂಗಳೂರಿನಲ್ಲಿ ಪ್ರತಿಭಟನೆ ಹೆಸರಲ್ಲಿ ಹೋಟೆಲ್​ಗೆ ನುಗ್ಗಿ ದಾಂಧಲೆ; ವಿಡಿಯೋ ಇಲ್ಲಿದೆ

ಹೌದು, ಬೆಂಗಳೂರು ಬಂದ್​ ದಿನ ಹೋರಾಟದ ಹೆಸರಿನಲ್ಲಿ ಹೋಟೆಲ್​ಗೆ ನುಗ್ಗಿ ಧಾಂದಲೆ ಮಾಡಿದ್ದ ಹಿನ್ನಲೆ ಇಬ್ಬರನ್ನು ವಶಕ್ಕೆ ಪಡೆಯಲಾಗಿತ್ತು. ಹೌದು, ಬಂದ್​ ಇದ್ರೂ ಬಾಗಿಲು ಮುಚ್ಚಿಲ್ಲ ಎಂದು ಇಬ್ಬರಿಂದ ಜಯನಗರ(Jayanagara)ದಲ್ಲಿರುವ ಉಡುಪಿ ಹಬ್​ಗೆ ನುಗ್ಗಿ ಪೀಠೋಪಕರಣ ಧ್ವಂಸ ಮಾಡಿದ ಘಟನೆ ನಡೆದಿತ್ತು. ಬೈಕ್​​ನಲ್ಲಿ ಬಂದಿದ್ದ ಶಿವು, ವಿಶ್ವ ಹಾಗೂ ಇತರರಿಂದ ಈ ಕೃತ್ಯ ನಡೆದಿದ್ದು, ಈ ಕುರಿತು ಹೋಟೆಲ್​ ಮಾಲೀಕರು ಠಾಣೆಗೆ ದೂರು ನೀಡಿದ್ದರು. ಅವರ ದೂರಿನನ್ವಯ ಪ್ರಕರಣ ದಾಖಲು ಮಾಡಿಕೊಂಡ ಪೊಲೀಸರು ಬಳಿಕ ಶಿವು, ವಿಶ್ವ ಎಂಬಾತನನ್ನು ವಶಕ್ಕೆ ಪಡೆದಿದ್ದರು. ಇದೀಗ ಮತ್ತಿಬ್ಬರನ್ನು ವಶಕ್ಕೆ ಪಡೆಯಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:31 am, Thu, 28 September 23

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ