AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಬಂದ್ ವೇಳೆ ಹೋಟೆಲ್​ ಮೇಲೆ ದಾಳಿ ಪ್ರಕರಣ; ಬಿಜೆಪಿ ಕಾರ್ಯಕರ್ತರ ಬಂಧನ

ಜಯನಗರ(Jayanagara)ದಲ್ಲಿ ನಡೆದಿದ್ದ ಹೋಟೆಲ್ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಜಯನಗರ ಪೊಲೀಸರು ಇಬ್ಬರು ಅರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಯೋಗಿಶ್ ಮತ್ತು ಸೋಮಶೇಖರ್ ಬಂಧಿತ ಅರೋಪಿಗಳು. ಹೌದು, ಬಂದ್​ ವೇಳೆ ಏಂಟಕ್ಕು ಹೆಚ್ಚು ಜನರು  ಗುಂಪಾಗಿ ಬಂದು ಹೋಟೆಲ್ ಸೇರಿ ನಾಲ್ಕು ಕಡೆ ಕಲ್ಲು ತೂರಿದ್ದರು.

ಬೆಂಗಳೂರು ಬಂದ್ ವೇಳೆ ಹೋಟೆಲ್​ ಮೇಲೆ ದಾಳಿ ಪ್ರಕರಣ; ಬಿಜೆಪಿ ಕಾರ್ಯಕರ್ತರ ಬಂಧನ
ಬಂಧಿತ ಆರೋಪಿಗಳು
Follow us
Prajwal Kumar NY
| Updated By: ಕಿರಣ್ ಹನುಮಂತ್​ ಮಾದಾರ್

Updated on:Sep 28, 2023 | 8:48 AM

ಬೆಂಗಳೂರು, ಸೆ.28: ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸಬೇಕು ಎಂದು ಸುಪ್ರೀಂಕೊರ್ಟ್​ ಆದೇಶ ನೀಡಿದ ಹಿನ್ನಲೆ ಬೆಂಗಳೂರು ಬಂದ್ ಮಾಡಲಾಗಿತ್ತು. ಅಂದು ಜಯನಗರ(Jayanagara)ದಲ್ಲಿ ನಡೆದಿದ್ದ ಹೋಟೆಲ್ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಜಯನಗರ ಪೊಲೀಸರು ಇಬ್ಬರು ಅರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಯೋಗಿಶ್ ಮತ್ತು ಸೋಮಶೇಖರ್ ಬಂಧಿತ ಅರೋಪಿಗಳು. ಹೌದು, ಬಂದ್​ ವೇಳೆ ಏಂಟಕ್ಕು ಹೆಚ್ಚು ಜನರು  ಗುಂಪಾಗಿ ಬಂದು ಹೋಟೆಲ್ ಸೇರಿ ನಾಲ್ಕು ಕಡೆ ಕಲ್ಲು ತೂರಿದ್ದರು.

ಈ ಹಿನ್ನಲೆ ಜಯನಗರ ಪೋಲೀಸ್ ಠಾಣೆಯಲ್ಲಿ ಪ್ರತ್ಯೇಕ ನಾಲ್ಕು ಕೇಸ್ ದಾಖಲು ಮಾಡಲಾಗಿತ್ತು. ಸದ್ಯ ಇಬ್ಬರು ಅರೋಪಿಗಳು ಅರೆಸ್ಟ್ ಮಾಡಿ ಜೈಲಿಗಟ್ಟಿರುವ ಪೊಲೀಸರು, ಉಳಿದ ಹಲವಾರು ಅರೋಪಿಗಳಿಗೆ ಹುಡುಕಾಟ ನಡೆಸಿದ್ದಾರೆ. ಇನ್ನು ತನಿಖೆ ವೇಳೆ ಬಂಧಿತ ಇಬ್ಬರು ಆರೋಪಿಗಳು ಬಿಜೆಪಿ ಕಾರ್ಯಕರ್ತರಾಗಿದ್ದು, ಜಯನಗರ ಎಂ ಎಲ್ ಎ ರಾಮಮೂರ್ತಿ ಶಿಷ್ಯರು ಎಂಬುದು ಪತ್ತೆಯಾಗಿದೆ.

ಇದನ್ನೂ ಓದಿ:ಬೆಂಗಳೂರಿನಲ್ಲಿ ಪ್ರತಿಭಟನೆ ಹೆಸರಲ್ಲಿ ಹೋಟೆಲ್​ಗೆ ನುಗ್ಗಿ ದಾಂಧಲೆ; ವಿಡಿಯೋ ಇಲ್ಲಿದೆ

ಹೌದು, ಬೆಂಗಳೂರು ಬಂದ್​ ದಿನ ಹೋರಾಟದ ಹೆಸರಿನಲ್ಲಿ ಹೋಟೆಲ್​ಗೆ ನುಗ್ಗಿ ಧಾಂದಲೆ ಮಾಡಿದ್ದ ಹಿನ್ನಲೆ ಇಬ್ಬರನ್ನು ವಶಕ್ಕೆ ಪಡೆಯಲಾಗಿತ್ತು. ಹೌದು, ಬಂದ್​ ಇದ್ರೂ ಬಾಗಿಲು ಮುಚ್ಚಿಲ್ಲ ಎಂದು ಇಬ್ಬರಿಂದ ಜಯನಗರ(Jayanagara)ದಲ್ಲಿರುವ ಉಡುಪಿ ಹಬ್​ಗೆ ನುಗ್ಗಿ ಪೀಠೋಪಕರಣ ಧ್ವಂಸ ಮಾಡಿದ ಘಟನೆ ನಡೆದಿತ್ತು. ಬೈಕ್​​ನಲ್ಲಿ ಬಂದಿದ್ದ ಶಿವು, ವಿಶ್ವ ಹಾಗೂ ಇತರರಿಂದ ಈ ಕೃತ್ಯ ನಡೆದಿದ್ದು, ಈ ಕುರಿತು ಹೋಟೆಲ್​ ಮಾಲೀಕರು ಠಾಣೆಗೆ ದೂರು ನೀಡಿದ್ದರು. ಅವರ ದೂರಿನನ್ವಯ ಪ್ರಕರಣ ದಾಖಲು ಮಾಡಿಕೊಂಡ ಪೊಲೀಸರು ಬಳಿಕ ಶಿವು, ವಿಶ್ವ ಎಂಬಾತನನ್ನು ವಶಕ್ಕೆ ಪಡೆದಿದ್ದರು. ಇದೀಗ ಮತ್ತಿಬ್ಬರನ್ನು ವಶಕ್ಕೆ ಪಡೆಯಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:31 am, Thu, 28 September 23

ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ
Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ
‘ಬಾಯ್ಸ್ vs ಗರ್ಲ್ಸ್’ನಲ್ಲಿ ಹೆಚ್ಚು ವೋಟ್ ಬಿದ್ದಿದ್ದು ಯಾರಿಗೆ?
‘ಬಾಯ್ಸ್ vs ಗರ್ಲ್ಸ್’ನಲ್ಲಿ ಹೆಚ್ಚು ವೋಟ್ ಬಿದ್ದಿದ್ದು ಯಾರಿಗೆ?
VIDEO: ಏಟಿಗೆ ಎದಿರೇಟು... ಆಕ್ರೋಶಭರಿತರಾಗಿ ಸಂಭ್ರಮಿಸಿದ ವಿರಾಟ್ ಕೊಹ್ಲಿ
VIDEO: ಏಟಿಗೆ ಎದಿರೇಟು... ಆಕ್ರೋಶಭರಿತರಾಗಿ ಸಂಭ್ರಮಿಸಿದ ವಿರಾಟ್ ಕೊಹ್ಲಿ
VIDEO: ಇದು ನನ್ನ ಗ್ರೌಂಡ್... ಕೆಎಲ್ ರಾಹುಲ್​ಗೆ ವಿರಾಟ್ ಕೊಹ್ಲಿ ತಿರುಗೇಟು
VIDEO: ಇದು ನನ್ನ ಗ್ರೌಂಡ್... ಕೆಎಲ್ ರಾಹುಲ್​ಗೆ ವಿರಾಟ್ ಕೊಹ್ಲಿ ತಿರುಗೇಟು