Bengaluru News: ಮಹಾಲಕ್ಷ್ಮಿ ಲೇಔಟ್​ನಲ್ಲಿ ವೃದ್ದೆ ಕೊಲೆ ಮಾಡಿ ಬಂಗಾರ ದೋಚಿದ್ದ ಪ್ರಕರಣ; ಮೂವರು ಅರೋಪಿಗಳು ಅರೆಸ್ಟ್

ನಗರದ ಮಹಾಲಕ್ಷ್ಮಿ ಲೇಔಟ್ ಫೋಸ್ಟ್​ ಆಫೀಸ್​ ಹತ್ತಿರದ ಮನೆಯಲ್ಲಿ ಒಂಟಿಯಾಗಿ ವಾಸವಿದ್ದ 82 ವರ್ಷದ ಕಮಲಮ್ಮ ಎಂಬುವವರನ್ನ ಕೈ ಕಾಲು ಕಟ್ಟಿ ಹಾಕಿ ಮೇ.28ರಂದು ಕೊಲೆ ಮಾಡಿ, ಬಂಗಾರ ದೋಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನ ಅರೆಸ್ಟ್​ ಮಾಡಲಾಗಿದೆ.

Bengaluru News: ಮಹಾಲಕ್ಷ್ಮಿ ಲೇಔಟ್​ನಲ್ಲಿ ವೃದ್ದೆ ಕೊಲೆ ಮಾಡಿ ಬಂಗಾರ ದೋಚಿದ್ದ ಪ್ರಕರಣ; ಮೂವರು ಅರೋಪಿಗಳು ಅರೆಸ್ಟ್
ಮೃತ ಕಮಲಮ್ಮ
Follow us
|

Updated on: Jun 02, 2023 | 8:37 AM

ಬೆಂಗಳೂರು: ನಗರದ ಮಹಾಲಕ್ಷ್ಮಿ ಲೇಔಟ್(Mahalakshmi Layout) ಫೋಸ್ಟ್​ ಆಫೀಸ್​ ಹತ್ತಿರದ ಮನೆಯಲ್ಲಿ ಒಂಟಿಯಾಗಿ ವಾಸವಿದ್ದ 82 ವರ್ಷದ ಕಮಲಮ್ಮ ಎಂಬುವವರನ್ನ ಕೈ ಕಾಲು ಕಟ್ಟಿ ಹಾಕಿ ಮೇ.28ರಂದು ಕೊಲೆ ಮಾಡಿ, ಬಂಗಾರ ದೋಚಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಮೂವರು ಅರೋಪಿಗಳನ್ನ ಇದೀಗ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸಿದ್ದರಾಜು, ಆಶೋಕ್ ಸೇರಿ ಮೂವರು ಬಂಧಿತ ಆರೋಪಿಗಳು. ಮೂರು ತಿಂಗಳ ಹಿಂದೆ ಪ್ಲಂಬರ್ ಕೆಲಸ ಮಾಡ್ತಿದ್ದ ಸಿದ್ದರಾಜು, ಮೃತ ವೃದ್ದೆ ಮನೆಯಲ್ಲಿ ಕೆಲಸ ಮಾಡಿದ್ದ. ಬಳಿಕ ಮನೆಯಲ್ಲಿ ವೃದ್ದೆ ಒಬ್ಬರೆ ಇದ್ದು, ಅವರ ಬಳಿ ಬಂಗಾರವಿದೆ. ಅದನ್ನ ದೋಚಿದರೇ ಸೆಟಲ್​ ಆಗಬಹುದು ಎಂದು ಯೋಚಿಸಿದ್ದ ಆರೋಪಿ ಸಿದ್ದರಾಜು.

ಇನ್ನು ಈ ವಿಷಯವನ್ನ ಸಿದ್ದರಾಜು ತನ್ನ ಗೆಳೆಯ ಆಶೋಕ್ ಬಳಿ ಪ್ರಸ್ತಾಪ ಮಾಡಿ ಪ್ಲಾನ್ ಮಾಡಿದ್ದರು. ಕೊಲೆ ನಡೆದ ದಿನ ಎರಡು ಬಾರಿ ಮನೆ ಹತ್ತಿರ ಹೋಗಿದ್ದಾರೆ. ಮೊದಲು ಸಂಜೆ ನಾಲ್ಕು ಘಂಟೆಗೆ ಹೋಗಿ, ಖಾಲಿ ಇದ್ದ ಒಂದು ಮನೆ ಬಾಡಿಗೆ ಕೊಡ್ತಿರಾ ಬಿಸ್ಕಟ್ ಗೋಡನ್ ಮಾಡ್ತಿವಿ ಎಂದು ಕೇಳಿದ್ದಾರೆ. ಅಜ್ಜಿ ಇಲ್ಲವೆಂದು ಬಾಗಿಲು ತೆಗೆದಿಲ್ಲ. ಮತ್ತೆ ಸಂಜೆ ಆರು ಘಂಟೆಗೆ ವಾಪಸ್ಸು ಹೋಗಿದ್ದಾರೆ. ಈ ವೇಳೆ ಈ ಹಿಂದೆ ಬಂದಿದ್ದವರೆ ಅಲ್ಲವಾ ಎಂದು ಅಜ್ಜಿ ಬಾಗಿಲು ತೆಗೆದಿದ್ದಾರೆ. ಬಾಗಿಲು ತೆಗೆಯುತಿದ್ದಂತೆ ಅಜ್ಜಿಗೆ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ. ನಂತರ ಅಜ್ಜಿ ಬಳಿಯಿದ್ದ ಎರಡು ಚಿನ್ನದ ಸರ ಮತ್ತು ಎರಡು ಬಂಗಾರದ ಬಳೆ ದೋಚಿ ಎಸ್ಕೇಪ್ ಆಗಿದ್ದರು.

ಇದನ್ನೂ ಓದಿ:ನನ್ನ ಹೆಂಡತಿಯನ್ನು ಕೊಂದಿರುವೆ, ನೀನೂ ಸಾಯಿ! ಅದರಿಂದ ನಿನ್ನ ಹೆಂಡತಿ ನನ್ನವಳಾಗುತ್ತಾಳೆ- ಎಂದು ಜೋಡಿ ಕೊಲೆ ಮಾಡಿದ ಆರೋಪಿ

ಇನ್ನು ಈ ವಿಷಯ ಗೊತ್ತಾಗುತ್ತಿದ್ದಂತೆ ಮಹಾಲಕ್ಷ್ಮೀ ಲೇಔಟ್​ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡು ಆರೋಪಿ ಸೆರೆಗೆ ಬಲೆ ಬಿಸಿದ್ದರು. ಈ ಕೊಲೆ ಪಾತಕಿಗಳ ಜಾಡು ಹಿಡಿದು ಹೊರಟ ಪೊಲೀಸರಿಗೆ ಆರೋಪಿಗಳು ಮೈಸೂರಿನಲ್ಲಿ ಇರುವ ಮಾಹಿತಿ ಆಧಾರದ ಮೇಲೆ ಮೈಸೂರಿಗೆ ಹೋಗಿ ಅಲ್ಲಿ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಮೂವರು ಅರೋಪಿಗಳನ್ನ ಬಂಧಿಸಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ