AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಮಹಾಲಕ್ಷ್ಮಿ ಲೇಔಟ್​ನಲ್ಲಿ ವೃದ್ದೆ ಕೊಲೆ ಮಾಡಿ ಬಂಗಾರ ದೋಚಿದ್ದ ಪ್ರಕರಣ; ಮೂವರು ಅರೋಪಿಗಳು ಅರೆಸ್ಟ್

ನಗರದ ಮಹಾಲಕ್ಷ್ಮಿ ಲೇಔಟ್ ಫೋಸ್ಟ್​ ಆಫೀಸ್​ ಹತ್ತಿರದ ಮನೆಯಲ್ಲಿ ಒಂಟಿಯಾಗಿ ವಾಸವಿದ್ದ 82 ವರ್ಷದ ಕಮಲಮ್ಮ ಎಂಬುವವರನ್ನ ಕೈ ಕಾಲು ಕಟ್ಟಿ ಹಾಕಿ ಮೇ.28ರಂದು ಕೊಲೆ ಮಾಡಿ, ಬಂಗಾರ ದೋಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನ ಅರೆಸ್ಟ್​ ಮಾಡಲಾಗಿದೆ.

Bengaluru News: ಮಹಾಲಕ್ಷ್ಮಿ ಲೇಔಟ್​ನಲ್ಲಿ ವೃದ್ದೆ ಕೊಲೆ ಮಾಡಿ ಬಂಗಾರ ದೋಚಿದ್ದ ಪ್ರಕರಣ; ಮೂವರು ಅರೋಪಿಗಳು ಅರೆಸ್ಟ್
ಮೃತ ಕಮಲಮ್ಮ
Follow us
ಕಿರಣ್ ಹನುಮಂತ್​ ಮಾದಾರ್
|

Updated on: Jun 02, 2023 | 8:37 AM

ಬೆಂಗಳೂರು: ನಗರದ ಮಹಾಲಕ್ಷ್ಮಿ ಲೇಔಟ್(Mahalakshmi Layout) ಫೋಸ್ಟ್​ ಆಫೀಸ್​ ಹತ್ತಿರದ ಮನೆಯಲ್ಲಿ ಒಂಟಿಯಾಗಿ ವಾಸವಿದ್ದ 82 ವರ್ಷದ ಕಮಲಮ್ಮ ಎಂಬುವವರನ್ನ ಕೈ ಕಾಲು ಕಟ್ಟಿ ಹಾಕಿ ಮೇ.28ರಂದು ಕೊಲೆ ಮಾಡಿ, ಬಂಗಾರ ದೋಚಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಮೂವರು ಅರೋಪಿಗಳನ್ನ ಇದೀಗ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸಿದ್ದರಾಜು, ಆಶೋಕ್ ಸೇರಿ ಮೂವರು ಬಂಧಿತ ಆರೋಪಿಗಳು. ಮೂರು ತಿಂಗಳ ಹಿಂದೆ ಪ್ಲಂಬರ್ ಕೆಲಸ ಮಾಡ್ತಿದ್ದ ಸಿದ್ದರಾಜು, ಮೃತ ವೃದ್ದೆ ಮನೆಯಲ್ಲಿ ಕೆಲಸ ಮಾಡಿದ್ದ. ಬಳಿಕ ಮನೆಯಲ್ಲಿ ವೃದ್ದೆ ಒಬ್ಬರೆ ಇದ್ದು, ಅವರ ಬಳಿ ಬಂಗಾರವಿದೆ. ಅದನ್ನ ದೋಚಿದರೇ ಸೆಟಲ್​ ಆಗಬಹುದು ಎಂದು ಯೋಚಿಸಿದ್ದ ಆರೋಪಿ ಸಿದ್ದರಾಜು.

ಇನ್ನು ಈ ವಿಷಯವನ್ನ ಸಿದ್ದರಾಜು ತನ್ನ ಗೆಳೆಯ ಆಶೋಕ್ ಬಳಿ ಪ್ರಸ್ತಾಪ ಮಾಡಿ ಪ್ಲಾನ್ ಮಾಡಿದ್ದರು. ಕೊಲೆ ನಡೆದ ದಿನ ಎರಡು ಬಾರಿ ಮನೆ ಹತ್ತಿರ ಹೋಗಿದ್ದಾರೆ. ಮೊದಲು ಸಂಜೆ ನಾಲ್ಕು ಘಂಟೆಗೆ ಹೋಗಿ, ಖಾಲಿ ಇದ್ದ ಒಂದು ಮನೆ ಬಾಡಿಗೆ ಕೊಡ್ತಿರಾ ಬಿಸ್ಕಟ್ ಗೋಡನ್ ಮಾಡ್ತಿವಿ ಎಂದು ಕೇಳಿದ್ದಾರೆ. ಅಜ್ಜಿ ಇಲ್ಲವೆಂದು ಬಾಗಿಲು ತೆಗೆದಿಲ್ಲ. ಮತ್ತೆ ಸಂಜೆ ಆರು ಘಂಟೆಗೆ ವಾಪಸ್ಸು ಹೋಗಿದ್ದಾರೆ. ಈ ವೇಳೆ ಈ ಹಿಂದೆ ಬಂದಿದ್ದವರೆ ಅಲ್ಲವಾ ಎಂದು ಅಜ್ಜಿ ಬಾಗಿಲು ತೆಗೆದಿದ್ದಾರೆ. ಬಾಗಿಲು ತೆಗೆಯುತಿದ್ದಂತೆ ಅಜ್ಜಿಗೆ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ. ನಂತರ ಅಜ್ಜಿ ಬಳಿಯಿದ್ದ ಎರಡು ಚಿನ್ನದ ಸರ ಮತ್ತು ಎರಡು ಬಂಗಾರದ ಬಳೆ ದೋಚಿ ಎಸ್ಕೇಪ್ ಆಗಿದ್ದರು.

ಇದನ್ನೂ ಓದಿ:ನನ್ನ ಹೆಂಡತಿಯನ್ನು ಕೊಂದಿರುವೆ, ನೀನೂ ಸಾಯಿ! ಅದರಿಂದ ನಿನ್ನ ಹೆಂಡತಿ ನನ್ನವಳಾಗುತ್ತಾಳೆ- ಎಂದು ಜೋಡಿ ಕೊಲೆ ಮಾಡಿದ ಆರೋಪಿ

ಇನ್ನು ಈ ವಿಷಯ ಗೊತ್ತಾಗುತ್ತಿದ್ದಂತೆ ಮಹಾಲಕ್ಷ್ಮೀ ಲೇಔಟ್​ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡು ಆರೋಪಿ ಸೆರೆಗೆ ಬಲೆ ಬಿಸಿದ್ದರು. ಈ ಕೊಲೆ ಪಾತಕಿಗಳ ಜಾಡು ಹಿಡಿದು ಹೊರಟ ಪೊಲೀಸರಿಗೆ ಆರೋಪಿಗಳು ಮೈಸೂರಿನಲ್ಲಿ ಇರುವ ಮಾಹಿತಿ ಆಧಾರದ ಮೇಲೆ ಮೈಸೂರಿಗೆ ಹೋಗಿ ಅಲ್ಲಿ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಮೂವರು ಅರೋಪಿಗಳನ್ನ ಬಂಧಿಸಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ