AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಮಹಾಲಕ್ಷ್ಮಿ ಲೇಔಟ್​ನಲ್ಲಿ ವೃದ್ದೆ ಕೊಲೆ ಮಾಡಿ ಬಂಗಾರ ದೋಚಿದ್ದ ಪ್ರಕರಣ; ಮೂವರು ಅರೋಪಿಗಳು ಅರೆಸ್ಟ್

ನಗರದ ಮಹಾಲಕ್ಷ್ಮಿ ಲೇಔಟ್ ಫೋಸ್ಟ್​ ಆಫೀಸ್​ ಹತ್ತಿರದ ಮನೆಯಲ್ಲಿ ಒಂಟಿಯಾಗಿ ವಾಸವಿದ್ದ 82 ವರ್ಷದ ಕಮಲಮ್ಮ ಎಂಬುವವರನ್ನ ಕೈ ಕಾಲು ಕಟ್ಟಿ ಹಾಕಿ ಮೇ.28ರಂದು ಕೊಲೆ ಮಾಡಿ, ಬಂಗಾರ ದೋಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನ ಅರೆಸ್ಟ್​ ಮಾಡಲಾಗಿದೆ.

Bengaluru News: ಮಹಾಲಕ್ಷ್ಮಿ ಲೇಔಟ್​ನಲ್ಲಿ ವೃದ್ದೆ ಕೊಲೆ ಮಾಡಿ ಬಂಗಾರ ದೋಚಿದ್ದ ಪ್ರಕರಣ; ಮೂವರು ಅರೋಪಿಗಳು ಅರೆಸ್ಟ್
ಮೃತ ಕಮಲಮ್ಮ
ಕಿರಣ್ ಹನುಮಂತ್​ ಮಾದಾರ್
|

Updated on: Jun 02, 2023 | 8:37 AM

Share

ಬೆಂಗಳೂರು: ನಗರದ ಮಹಾಲಕ್ಷ್ಮಿ ಲೇಔಟ್(Mahalakshmi Layout) ಫೋಸ್ಟ್​ ಆಫೀಸ್​ ಹತ್ತಿರದ ಮನೆಯಲ್ಲಿ ಒಂಟಿಯಾಗಿ ವಾಸವಿದ್ದ 82 ವರ್ಷದ ಕಮಲಮ್ಮ ಎಂಬುವವರನ್ನ ಕೈ ಕಾಲು ಕಟ್ಟಿ ಹಾಕಿ ಮೇ.28ರಂದು ಕೊಲೆ ಮಾಡಿ, ಬಂಗಾರ ದೋಚಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಮೂವರು ಅರೋಪಿಗಳನ್ನ ಇದೀಗ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸಿದ್ದರಾಜು, ಆಶೋಕ್ ಸೇರಿ ಮೂವರು ಬಂಧಿತ ಆರೋಪಿಗಳು. ಮೂರು ತಿಂಗಳ ಹಿಂದೆ ಪ್ಲಂಬರ್ ಕೆಲಸ ಮಾಡ್ತಿದ್ದ ಸಿದ್ದರಾಜು, ಮೃತ ವೃದ್ದೆ ಮನೆಯಲ್ಲಿ ಕೆಲಸ ಮಾಡಿದ್ದ. ಬಳಿಕ ಮನೆಯಲ್ಲಿ ವೃದ್ದೆ ಒಬ್ಬರೆ ಇದ್ದು, ಅವರ ಬಳಿ ಬಂಗಾರವಿದೆ. ಅದನ್ನ ದೋಚಿದರೇ ಸೆಟಲ್​ ಆಗಬಹುದು ಎಂದು ಯೋಚಿಸಿದ್ದ ಆರೋಪಿ ಸಿದ್ದರಾಜು.

ಇನ್ನು ಈ ವಿಷಯವನ್ನ ಸಿದ್ದರಾಜು ತನ್ನ ಗೆಳೆಯ ಆಶೋಕ್ ಬಳಿ ಪ್ರಸ್ತಾಪ ಮಾಡಿ ಪ್ಲಾನ್ ಮಾಡಿದ್ದರು. ಕೊಲೆ ನಡೆದ ದಿನ ಎರಡು ಬಾರಿ ಮನೆ ಹತ್ತಿರ ಹೋಗಿದ್ದಾರೆ. ಮೊದಲು ಸಂಜೆ ನಾಲ್ಕು ಘಂಟೆಗೆ ಹೋಗಿ, ಖಾಲಿ ಇದ್ದ ಒಂದು ಮನೆ ಬಾಡಿಗೆ ಕೊಡ್ತಿರಾ ಬಿಸ್ಕಟ್ ಗೋಡನ್ ಮಾಡ್ತಿವಿ ಎಂದು ಕೇಳಿದ್ದಾರೆ. ಅಜ್ಜಿ ಇಲ್ಲವೆಂದು ಬಾಗಿಲು ತೆಗೆದಿಲ್ಲ. ಮತ್ತೆ ಸಂಜೆ ಆರು ಘಂಟೆಗೆ ವಾಪಸ್ಸು ಹೋಗಿದ್ದಾರೆ. ಈ ವೇಳೆ ಈ ಹಿಂದೆ ಬಂದಿದ್ದವರೆ ಅಲ್ಲವಾ ಎಂದು ಅಜ್ಜಿ ಬಾಗಿಲು ತೆಗೆದಿದ್ದಾರೆ. ಬಾಗಿಲು ತೆಗೆಯುತಿದ್ದಂತೆ ಅಜ್ಜಿಗೆ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ. ನಂತರ ಅಜ್ಜಿ ಬಳಿಯಿದ್ದ ಎರಡು ಚಿನ್ನದ ಸರ ಮತ್ತು ಎರಡು ಬಂಗಾರದ ಬಳೆ ದೋಚಿ ಎಸ್ಕೇಪ್ ಆಗಿದ್ದರು.

ಇದನ್ನೂ ಓದಿ:ನನ್ನ ಹೆಂಡತಿಯನ್ನು ಕೊಂದಿರುವೆ, ನೀನೂ ಸಾಯಿ! ಅದರಿಂದ ನಿನ್ನ ಹೆಂಡತಿ ನನ್ನವಳಾಗುತ್ತಾಳೆ- ಎಂದು ಜೋಡಿ ಕೊಲೆ ಮಾಡಿದ ಆರೋಪಿ

ಇನ್ನು ಈ ವಿಷಯ ಗೊತ್ತಾಗುತ್ತಿದ್ದಂತೆ ಮಹಾಲಕ್ಷ್ಮೀ ಲೇಔಟ್​ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡು ಆರೋಪಿ ಸೆರೆಗೆ ಬಲೆ ಬಿಸಿದ್ದರು. ಈ ಕೊಲೆ ಪಾತಕಿಗಳ ಜಾಡು ಹಿಡಿದು ಹೊರಟ ಪೊಲೀಸರಿಗೆ ಆರೋಪಿಗಳು ಮೈಸೂರಿನಲ್ಲಿ ಇರುವ ಮಾಹಿತಿ ಆಧಾರದ ಮೇಲೆ ಮೈಸೂರಿಗೆ ಹೋಗಿ ಅಲ್ಲಿ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಮೂವರು ಅರೋಪಿಗಳನ್ನ ಬಂಧಿಸಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!