AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಗಂಡ-ಹೆಂಡ್ತಿ ಜಗಳ: ಗಲಾಟೆಯಲ್ಲಿ ಪತ್ನಿ ಕೈ ಬೆರಳನ್ನೇ ಕಚ್ಚಿತಿಂದ ಪತಿ, ದೂರು ದಾಖಲು

ಬೆಂಗಳೂರಿನಲ್ಲಿ ಗಂಡ ಹೆಂಡತಿ ಗಲಾಟೆಯಲ್ಲಿ ಪತಿರಾಯ ತನ್ನ ಪತ್ನಿಯ ಬೆರಳನ್ನೇ ಕಚ್ಚಿತಿಂದ ಘಟನೆ ಕೊಣನಕುಂಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಕುರಿತು ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ಬೆಂಗಳೂರಿನಲ್ಲಿ ಗಂಡ-ಹೆಂಡ್ತಿ ಜಗಳ: ಗಲಾಟೆಯಲ್ಲಿ ಪತ್ನಿ ಕೈ ಬೆರಳನ್ನೇ ಕಚ್ಚಿತಿಂದ ಪತಿ, ದೂರು ದಾಖಲು
ಬೆಂಗಳೂರಿನಲ್ಲಿ ಪತ್ನಿ ಕೈ ಬೆರಳನ್ನೇ ಕಚ್ಚಿತಿಂದ ಪತಿ
ಜಗದೀಶ ಬಿ.
| Edited By: ಕಿರಣ್ ಹನುಮಂತ್​ ಮಾದಾರ್|

Updated on: Aug 03, 2023 | 8:30 AM

Share

ಬೆಂಗಳೂರು, ಆ.3: ಗಂಡ-ಹೆಂಡತಿ(Husband-Wife) ಜಗಳದ ನಡುವೆ ಕೂಸು ಬಡವಾಯ್ತು ಅನ್ನೋ ಮಾತಿದೆ. ಆದರಿಲ್ಲಿ ಇವರಿಬ್ಬರ ಗಲಾಟೆಯಲ್ಲಿ ಪತಿರಾಯ ತನ್ನ ಪತ್ನಿಯ ಬೆರಳನ್ನೇ ಕಚ್ಚಿತಿಂದ ಘಟನೆ ಬೆಂಗಳೂರಿನ ಕೊಣನಕುಂಟೆ (Konanakunte) ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಕುರಿತು ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಇನ್ನು ಪುಷ್ಪಾ ಎಂಬ ಮಹಿಳೆಯು ಗಂಡನ ಕಾಟ ತಾಳಲಾರದೇ ತನ್ನ ಮಗನ ಜೊತೆಗೆ ಬೇರೆ ಮನೆ ಮಾಡಿ ವಾಸವಿದ್ದರು. ಆದರೂ ಕೂಡ ಆಕೆಗೆ ಗಂಡನ ಕಾಟದಿಂದ ಮುಕ್ತಿ ಸಿಕ್ಕಿರಲಿಲ್ಲ. ಅದರಂತೆ ಇಬ್ಬರು ಜಗಳ ಮಾಡುತ್ತಿದ್ದಾರೆ. ಈ ವೇಳೆ ಏಕಾಎಕಿ ಪತಿ ವಿಜಯಕುಮಾರ್ ಪತ್ನಿಯ ಬೆರಳನ್ನೇ ಕಚ್ಚಿ ತಿಂದಿದ್ದಾನೆ. ನಂತರ ನಿನ್ನನ್ನೂ ಕೂಡ ಕೊಂದು ಇದೇ ರೀತಿಯಾಗಿ ತಿನ್ನುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ.

ಇನ್ನು ಪುಷ್ಪಾ ಮತ್ತು ವಿಜಯ್​ಕುಮಾರ್​ಗೆ 23 ವರ್ಷಗಳ ಹಿಂದೆ ಮದುವೆಯಾಗಿತ್ತು. ಮದುವೆಯಾದ ಕೆಲ ವರ್ಷಗಳಿಂದ ಪತ್ನಿಗೆ ಮಾನಸಿಕ ಮತ್ತು ದೈಹಿಕವಾಗಿ ಹಿಂಸೆ ನೀಡುತ್ತಿದ್ದನಂತೆ. ಈ ಹಿನ್ನಲೆ ಗಂಡನಿಂದ ಬೇಸತ್ತು ತನ್ನ ಮಗನ ಜೊತೆ ಬೇರೆಡೆ ಮನೆ ಮಾಡಿಕೊಂಡಿದ್ದರು. ಕಳೆದ‌ ತಿಂಗಳ ಜುಲೈ 28ನೇ ತಾರೀಖು ಪತಿ ವಿಜಯಕುಮಾರ್ ಪತ್ನಿ ಇದ್ದ ಮನೆಗೆ ಹೋಗಿ ಜಗಳ ತೆಗೆದಿದ್ದ. ಈ ವೇಳೆ ಪತ್ನಿಯ ಎಡಗೈ ಬೆರಳನ್ನೇ ಕಚ್ಚಿ ಕಚ್ಚಿ ತಿಂದಿದ್ದಾನಂತೆ. ಅಲ್ಲದೇ ರೌಡಿಶೀಟರ್​ಗಳನ್ನ ಬಿಟ್ಟು ಕೊಲೆ ಬೆದರಿಕೆ ಹಾಕಿರುವ ಆರೋಪದ ಮೇಲೆ ಪತ್ನಿ ಪುಷ್ಪ ಸದ್ಯ ಪತಿಯ ವಿರುದ್ಧ ಕೋಣನಕುಂಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ:ಬೆಂಗಳೂರು: ವಿದ್ಯಾರ್ಥಿನಿಯೊಂದಿಗೆ ಮಾತನಾಡಿದ್ದಕ್ಕೆ ಸಹಪಾಠಿಗಳಿಂದ ಹಲ್ಲೆ; ದೂರು ದಾಖಲು

ಬೈಕ್ ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಬೈಕ್ ಸವಾರ

ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಶೆಟ್ಟಿಕೆರೆ ರಸ್ತೆಯ ಬಳಿ ನಿಯಂತ್ರಣ ತಪ್ಪಿ ಬೈಕ್​ ಸವಾರನೊಬ್ಬ ಕೆಳಗೆ ಬಿದ್ದು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಬೈಕ್ ಸ್ಕಿಡ್ ಆಗಿ ಬಿದ್ದಿರುವ ಶಂಕೆ ವ್ಯಕ್ತವಾಗಿದ್ದು, ಗಾಯಾಳು ಬೈಕ್​ ಸವಾರನನ್ನು ಚಿಕ್ಕನಾಯಕನಹಳ್ಳಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಈ ಘಟನೆ ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ