AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಗಂಡ-ಹೆಂಡ್ತಿ ಜಗಳ: ಗಲಾಟೆಯಲ್ಲಿ ಪತ್ನಿ ಕೈ ಬೆರಳನ್ನೇ ಕಚ್ಚಿತಿಂದ ಪತಿ, ದೂರು ದಾಖಲು

ಬೆಂಗಳೂರಿನಲ್ಲಿ ಗಂಡ ಹೆಂಡತಿ ಗಲಾಟೆಯಲ್ಲಿ ಪತಿರಾಯ ತನ್ನ ಪತ್ನಿಯ ಬೆರಳನ್ನೇ ಕಚ್ಚಿತಿಂದ ಘಟನೆ ಕೊಣನಕುಂಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಕುರಿತು ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ಬೆಂಗಳೂರಿನಲ್ಲಿ ಗಂಡ-ಹೆಂಡ್ತಿ ಜಗಳ: ಗಲಾಟೆಯಲ್ಲಿ ಪತ್ನಿ ಕೈ ಬೆರಳನ್ನೇ ಕಚ್ಚಿತಿಂದ ಪತಿ, ದೂರು ದಾಖಲು
ಬೆಂಗಳೂರಿನಲ್ಲಿ ಪತ್ನಿ ಕೈ ಬೆರಳನ್ನೇ ಕಚ್ಚಿತಿಂದ ಪತಿ
Jagadisha B
| Edited By: |

Updated on: Aug 03, 2023 | 8:30 AM

Share

ಬೆಂಗಳೂರು, ಆ.3: ಗಂಡ-ಹೆಂಡತಿ(Husband-Wife) ಜಗಳದ ನಡುವೆ ಕೂಸು ಬಡವಾಯ್ತು ಅನ್ನೋ ಮಾತಿದೆ. ಆದರಿಲ್ಲಿ ಇವರಿಬ್ಬರ ಗಲಾಟೆಯಲ್ಲಿ ಪತಿರಾಯ ತನ್ನ ಪತ್ನಿಯ ಬೆರಳನ್ನೇ ಕಚ್ಚಿತಿಂದ ಘಟನೆ ಬೆಂಗಳೂರಿನ ಕೊಣನಕುಂಟೆ (Konanakunte) ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಕುರಿತು ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಇನ್ನು ಪುಷ್ಪಾ ಎಂಬ ಮಹಿಳೆಯು ಗಂಡನ ಕಾಟ ತಾಳಲಾರದೇ ತನ್ನ ಮಗನ ಜೊತೆಗೆ ಬೇರೆ ಮನೆ ಮಾಡಿ ವಾಸವಿದ್ದರು. ಆದರೂ ಕೂಡ ಆಕೆಗೆ ಗಂಡನ ಕಾಟದಿಂದ ಮುಕ್ತಿ ಸಿಕ್ಕಿರಲಿಲ್ಲ. ಅದರಂತೆ ಇಬ್ಬರು ಜಗಳ ಮಾಡುತ್ತಿದ್ದಾರೆ. ಈ ವೇಳೆ ಏಕಾಎಕಿ ಪತಿ ವಿಜಯಕುಮಾರ್ ಪತ್ನಿಯ ಬೆರಳನ್ನೇ ಕಚ್ಚಿ ತಿಂದಿದ್ದಾನೆ. ನಂತರ ನಿನ್ನನ್ನೂ ಕೂಡ ಕೊಂದು ಇದೇ ರೀತಿಯಾಗಿ ತಿನ್ನುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ.

ಇನ್ನು ಪುಷ್ಪಾ ಮತ್ತು ವಿಜಯ್​ಕುಮಾರ್​ಗೆ 23 ವರ್ಷಗಳ ಹಿಂದೆ ಮದುವೆಯಾಗಿತ್ತು. ಮದುವೆಯಾದ ಕೆಲ ವರ್ಷಗಳಿಂದ ಪತ್ನಿಗೆ ಮಾನಸಿಕ ಮತ್ತು ದೈಹಿಕವಾಗಿ ಹಿಂಸೆ ನೀಡುತ್ತಿದ್ದನಂತೆ. ಈ ಹಿನ್ನಲೆ ಗಂಡನಿಂದ ಬೇಸತ್ತು ತನ್ನ ಮಗನ ಜೊತೆ ಬೇರೆಡೆ ಮನೆ ಮಾಡಿಕೊಂಡಿದ್ದರು. ಕಳೆದ‌ ತಿಂಗಳ ಜುಲೈ 28ನೇ ತಾರೀಖು ಪತಿ ವಿಜಯಕುಮಾರ್ ಪತ್ನಿ ಇದ್ದ ಮನೆಗೆ ಹೋಗಿ ಜಗಳ ತೆಗೆದಿದ್ದ. ಈ ವೇಳೆ ಪತ್ನಿಯ ಎಡಗೈ ಬೆರಳನ್ನೇ ಕಚ್ಚಿ ಕಚ್ಚಿ ತಿಂದಿದ್ದಾನಂತೆ. ಅಲ್ಲದೇ ರೌಡಿಶೀಟರ್​ಗಳನ್ನ ಬಿಟ್ಟು ಕೊಲೆ ಬೆದರಿಕೆ ಹಾಕಿರುವ ಆರೋಪದ ಮೇಲೆ ಪತ್ನಿ ಪುಷ್ಪ ಸದ್ಯ ಪತಿಯ ವಿರುದ್ಧ ಕೋಣನಕುಂಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ:ಬೆಂಗಳೂರು: ವಿದ್ಯಾರ್ಥಿನಿಯೊಂದಿಗೆ ಮಾತನಾಡಿದ್ದಕ್ಕೆ ಸಹಪಾಠಿಗಳಿಂದ ಹಲ್ಲೆ; ದೂರು ದಾಖಲು

ಬೈಕ್ ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಬೈಕ್ ಸವಾರ

ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಶೆಟ್ಟಿಕೆರೆ ರಸ್ತೆಯ ಬಳಿ ನಿಯಂತ್ರಣ ತಪ್ಪಿ ಬೈಕ್​ ಸವಾರನೊಬ್ಬ ಕೆಳಗೆ ಬಿದ್ದು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಬೈಕ್ ಸ್ಕಿಡ್ ಆಗಿ ಬಿದ್ದಿರುವ ಶಂಕೆ ವ್ಯಕ್ತವಾಗಿದ್ದು, ಗಾಯಾಳು ಬೈಕ್​ ಸವಾರನನ್ನು ಚಿಕ್ಕನಾಯಕನಹಳ್ಳಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಈ ಘಟನೆ ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು