AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಗಂಡ-ಹೆಂಡ್ತಿ ಜಗಳ: ಗಲಾಟೆಯಲ್ಲಿ ಪತ್ನಿ ಕೈ ಬೆರಳನ್ನೇ ಕಚ್ಚಿತಿಂದ ಪತಿ, ದೂರು ದಾಖಲು

ಬೆಂಗಳೂರಿನಲ್ಲಿ ಗಂಡ ಹೆಂಡತಿ ಗಲಾಟೆಯಲ್ಲಿ ಪತಿರಾಯ ತನ್ನ ಪತ್ನಿಯ ಬೆರಳನ್ನೇ ಕಚ್ಚಿತಿಂದ ಘಟನೆ ಕೊಣನಕುಂಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಕುರಿತು ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ಬೆಂಗಳೂರಿನಲ್ಲಿ ಗಂಡ-ಹೆಂಡ್ತಿ ಜಗಳ: ಗಲಾಟೆಯಲ್ಲಿ ಪತ್ನಿ ಕೈ ಬೆರಳನ್ನೇ ಕಚ್ಚಿತಿಂದ ಪತಿ, ದೂರು ದಾಖಲು
ಬೆಂಗಳೂರಿನಲ್ಲಿ ಪತ್ನಿ ಕೈ ಬೆರಳನ್ನೇ ಕಚ್ಚಿತಿಂದ ಪತಿ
ಜಗದೀಶ ಬಿ.
| Edited By: ಕಿರಣ್ ಹನುಮಂತ್​ ಮಾದಾರ್|

Updated on: Aug 03, 2023 | 8:30 AM

Share

ಬೆಂಗಳೂರು, ಆ.3: ಗಂಡ-ಹೆಂಡತಿ(Husband-Wife) ಜಗಳದ ನಡುವೆ ಕೂಸು ಬಡವಾಯ್ತು ಅನ್ನೋ ಮಾತಿದೆ. ಆದರಿಲ್ಲಿ ಇವರಿಬ್ಬರ ಗಲಾಟೆಯಲ್ಲಿ ಪತಿರಾಯ ತನ್ನ ಪತ್ನಿಯ ಬೆರಳನ್ನೇ ಕಚ್ಚಿತಿಂದ ಘಟನೆ ಬೆಂಗಳೂರಿನ ಕೊಣನಕುಂಟೆ (Konanakunte) ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಕುರಿತು ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಇನ್ನು ಪುಷ್ಪಾ ಎಂಬ ಮಹಿಳೆಯು ಗಂಡನ ಕಾಟ ತಾಳಲಾರದೇ ತನ್ನ ಮಗನ ಜೊತೆಗೆ ಬೇರೆ ಮನೆ ಮಾಡಿ ವಾಸವಿದ್ದರು. ಆದರೂ ಕೂಡ ಆಕೆಗೆ ಗಂಡನ ಕಾಟದಿಂದ ಮುಕ್ತಿ ಸಿಕ್ಕಿರಲಿಲ್ಲ. ಅದರಂತೆ ಇಬ್ಬರು ಜಗಳ ಮಾಡುತ್ತಿದ್ದಾರೆ. ಈ ವೇಳೆ ಏಕಾಎಕಿ ಪತಿ ವಿಜಯಕುಮಾರ್ ಪತ್ನಿಯ ಬೆರಳನ್ನೇ ಕಚ್ಚಿ ತಿಂದಿದ್ದಾನೆ. ನಂತರ ನಿನ್ನನ್ನೂ ಕೂಡ ಕೊಂದು ಇದೇ ರೀತಿಯಾಗಿ ತಿನ್ನುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ.

ಇನ್ನು ಪುಷ್ಪಾ ಮತ್ತು ವಿಜಯ್​ಕುಮಾರ್​ಗೆ 23 ವರ್ಷಗಳ ಹಿಂದೆ ಮದುವೆಯಾಗಿತ್ತು. ಮದುವೆಯಾದ ಕೆಲ ವರ್ಷಗಳಿಂದ ಪತ್ನಿಗೆ ಮಾನಸಿಕ ಮತ್ತು ದೈಹಿಕವಾಗಿ ಹಿಂಸೆ ನೀಡುತ್ತಿದ್ದನಂತೆ. ಈ ಹಿನ್ನಲೆ ಗಂಡನಿಂದ ಬೇಸತ್ತು ತನ್ನ ಮಗನ ಜೊತೆ ಬೇರೆಡೆ ಮನೆ ಮಾಡಿಕೊಂಡಿದ್ದರು. ಕಳೆದ‌ ತಿಂಗಳ ಜುಲೈ 28ನೇ ತಾರೀಖು ಪತಿ ವಿಜಯಕುಮಾರ್ ಪತ್ನಿ ಇದ್ದ ಮನೆಗೆ ಹೋಗಿ ಜಗಳ ತೆಗೆದಿದ್ದ. ಈ ವೇಳೆ ಪತ್ನಿಯ ಎಡಗೈ ಬೆರಳನ್ನೇ ಕಚ್ಚಿ ಕಚ್ಚಿ ತಿಂದಿದ್ದಾನಂತೆ. ಅಲ್ಲದೇ ರೌಡಿಶೀಟರ್​ಗಳನ್ನ ಬಿಟ್ಟು ಕೊಲೆ ಬೆದರಿಕೆ ಹಾಕಿರುವ ಆರೋಪದ ಮೇಲೆ ಪತ್ನಿ ಪುಷ್ಪ ಸದ್ಯ ಪತಿಯ ವಿರುದ್ಧ ಕೋಣನಕುಂಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ:ಬೆಂಗಳೂರು: ವಿದ್ಯಾರ್ಥಿನಿಯೊಂದಿಗೆ ಮಾತನಾಡಿದ್ದಕ್ಕೆ ಸಹಪಾಠಿಗಳಿಂದ ಹಲ್ಲೆ; ದೂರು ದಾಖಲು

ಬೈಕ್ ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಬೈಕ್ ಸವಾರ

ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಶೆಟ್ಟಿಕೆರೆ ರಸ್ತೆಯ ಬಳಿ ನಿಯಂತ್ರಣ ತಪ್ಪಿ ಬೈಕ್​ ಸವಾರನೊಬ್ಬ ಕೆಳಗೆ ಬಿದ್ದು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಬೈಕ್ ಸ್ಕಿಡ್ ಆಗಿ ಬಿದ್ದಿರುವ ಶಂಕೆ ವ್ಯಕ್ತವಾಗಿದ್ದು, ಗಾಯಾಳು ಬೈಕ್​ ಸವಾರನನ್ನು ಚಿಕ್ಕನಾಯಕನಹಳ್ಳಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಈ ಘಟನೆ ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್