AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಗಂಡ-ಹೆಂಡ್ತಿ ಜಗಳ: ಗಲಾಟೆಯಲ್ಲಿ ಪತ್ನಿ ಕೈ ಬೆರಳನ್ನೇ ಕಚ್ಚಿತಿಂದ ಪತಿ, ದೂರು ದಾಖಲು

ಬೆಂಗಳೂರಿನಲ್ಲಿ ಗಂಡ ಹೆಂಡತಿ ಗಲಾಟೆಯಲ್ಲಿ ಪತಿರಾಯ ತನ್ನ ಪತ್ನಿಯ ಬೆರಳನ್ನೇ ಕಚ್ಚಿತಿಂದ ಘಟನೆ ಕೊಣನಕುಂಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಕುರಿತು ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ಬೆಂಗಳೂರಿನಲ್ಲಿ ಗಂಡ-ಹೆಂಡ್ತಿ ಜಗಳ: ಗಲಾಟೆಯಲ್ಲಿ ಪತ್ನಿ ಕೈ ಬೆರಳನ್ನೇ ಕಚ್ಚಿತಿಂದ ಪತಿ, ದೂರು ದಾಖಲು
ಬೆಂಗಳೂರಿನಲ್ಲಿ ಪತ್ನಿ ಕೈ ಬೆರಳನ್ನೇ ಕಚ್ಚಿತಿಂದ ಪತಿ
Jagadisha B
| Edited By: |

Updated on: Aug 03, 2023 | 8:30 AM

Share

ಬೆಂಗಳೂರು, ಆ.3: ಗಂಡ-ಹೆಂಡತಿ(Husband-Wife) ಜಗಳದ ನಡುವೆ ಕೂಸು ಬಡವಾಯ್ತು ಅನ್ನೋ ಮಾತಿದೆ. ಆದರಿಲ್ಲಿ ಇವರಿಬ್ಬರ ಗಲಾಟೆಯಲ್ಲಿ ಪತಿರಾಯ ತನ್ನ ಪತ್ನಿಯ ಬೆರಳನ್ನೇ ಕಚ್ಚಿತಿಂದ ಘಟನೆ ಬೆಂಗಳೂರಿನ ಕೊಣನಕುಂಟೆ (Konanakunte) ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಕುರಿತು ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಇನ್ನು ಪುಷ್ಪಾ ಎಂಬ ಮಹಿಳೆಯು ಗಂಡನ ಕಾಟ ತಾಳಲಾರದೇ ತನ್ನ ಮಗನ ಜೊತೆಗೆ ಬೇರೆ ಮನೆ ಮಾಡಿ ವಾಸವಿದ್ದರು. ಆದರೂ ಕೂಡ ಆಕೆಗೆ ಗಂಡನ ಕಾಟದಿಂದ ಮುಕ್ತಿ ಸಿಕ್ಕಿರಲಿಲ್ಲ. ಅದರಂತೆ ಇಬ್ಬರು ಜಗಳ ಮಾಡುತ್ತಿದ್ದಾರೆ. ಈ ವೇಳೆ ಏಕಾಎಕಿ ಪತಿ ವಿಜಯಕುಮಾರ್ ಪತ್ನಿಯ ಬೆರಳನ್ನೇ ಕಚ್ಚಿ ತಿಂದಿದ್ದಾನೆ. ನಂತರ ನಿನ್ನನ್ನೂ ಕೂಡ ಕೊಂದು ಇದೇ ರೀತಿಯಾಗಿ ತಿನ್ನುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ.

ಇನ್ನು ಪುಷ್ಪಾ ಮತ್ತು ವಿಜಯ್​ಕುಮಾರ್​ಗೆ 23 ವರ್ಷಗಳ ಹಿಂದೆ ಮದುವೆಯಾಗಿತ್ತು. ಮದುವೆಯಾದ ಕೆಲ ವರ್ಷಗಳಿಂದ ಪತ್ನಿಗೆ ಮಾನಸಿಕ ಮತ್ತು ದೈಹಿಕವಾಗಿ ಹಿಂಸೆ ನೀಡುತ್ತಿದ್ದನಂತೆ. ಈ ಹಿನ್ನಲೆ ಗಂಡನಿಂದ ಬೇಸತ್ತು ತನ್ನ ಮಗನ ಜೊತೆ ಬೇರೆಡೆ ಮನೆ ಮಾಡಿಕೊಂಡಿದ್ದರು. ಕಳೆದ‌ ತಿಂಗಳ ಜುಲೈ 28ನೇ ತಾರೀಖು ಪತಿ ವಿಜಯಕುಮಾರ್ ಪತ್ನಿ ಇದ್ದ ಮನೆಗೆ ಹೋಗಿ ಜಗಳ ತೆಗೆದಿದ್ದ. ಈ ವೇಳೆ ಪತ್ನಿಯ ಎಡಗೈ ಬೆರಳನ್ನೇ ಕಚ್ಚಿ ಕಚ್ಚಿ ತಿಂದಿದ್ದಾನಂತೆ. ಅಲ್ಲದೇ ರೌಡಿಶೀಟರ್​ಗಳನ್ನ ಬಿಟ್ಟು ಕೊಲೆ ಬೆದರಿಕೆ ಹಾಕಿರುವ ಆರೋಪದ ಮೇಲೆ ಪತ್ನಿ ಪುಷ್ಪ ಸದ್ಯ ಪತಿಯ ವಿರುದ್ಧ ಕೋಣನಕುಂಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ:ಬೆಂಗಳೂರು: ವಿದ್ಯಾರ್ಥಿನಿಯೊಂದಿಗೆ ಮಾತನಾಡಿದ್ದಕ್ಕೆ ಸಹಪಾಠಿಗಳಿಂದ ಹಲ್ಲೆ; ದೂರು ದಾಖಲು

ಬೈಕ್ ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಬೈಕ್ ಸವಾರ

ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಶೆಟ್ಟಿಕೆರೆ ರಸ್ತೆಯ ಬಳಿ ನಿಯಂತ್ರಣ ತಪ್ಪಿ ಬೈಕ್​ ಸವಾರನೊಬ್ಬ ಕೆಳಗೆ ಬಿದ್ದು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಬೈಕ್ ಸ್ಕಿಡ್ ಆಗಿ ಬಿದ್ದಿರುವ ಶಂಕೆ ವ್ಯಕ್ತವಾಗಿದ್ದು, ಗಾಯಾಳು ಬೈಕ್​ ಸವಾರನನ್ನು ಚಿಕ್ಕನಾಯಕನಹಳ್ಳಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಈ ಘಟನೆ ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು