AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಪಾಲರ ಭೇಟಿ ಮಾಡಿದ ಪತ್ರಕರ್ತರ ಸಂಘದ ನಿಯೋಗ; ಮಾಧ್ಯಮ ಜವಾಬ್ದಾರಿಯನ್ನ ಶ್ಲಾಘಿಸಿದ ಥಾವರ್‌ಚಂದ್ ಗೆಹ್ಲೋಟ್

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ(KUWJ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದ ನಿಯೋಗವು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್(Thawar Chand Gehlot) ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿತ್ತು. ಕೆಯುಡಬ್ಲೂಜೆ ಹೊರನಾಡಿನ ಘಟಕವಾಗಿರುವ ಕಾಸರಗೋಡು ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘವು ಆಯೋಜಿಸಲಿರುವ ಪತ್ರಕರ್ತರ ಸಮಾರಂಭಕ್ಕೆ ಆಗಮಿಸಬೇಕು ಎಂದು ವಿನಂತಿಸಿತು.

ರಾಜ್ಯಪಾಲರ ಭೇಟಿ ಮಾಡಿದ ಪತ್ರಕರ್ತರ ಸಂಘದ ನಿಯೋಗ; ಮಾಧ್ಯಮ ಜವಾಬ್ದಾರಿಯನ್ನ ಶ್ಲಾಘಿಸಿದ ಥಾವರ್‌ಚಂದ್ ಗೆಹ್ಲೋಟ್
ರಾಜ್ಯಪಾಲರ ಭೇಟಿ ಮಾಡಿದ ಪತ್ರಕರ್ತರ ಸಂಘದ ನಿಯೋಗ
TV9 Web
| Updated By: ಕಿರಣ್ ಹನುಮಂತ್​ ಮಾದಾರ್|

Updated on: May 23, 2024 | 7:03 PM

Share

ಬೆಂಗಳೂರು, ಮೇ.23: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ(KUWJ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದ ನಿಯೋಗವು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್(Thawar Chand Gehlot) ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿತ್ತು. ಕೆಯುಡಬ್ಲೂಜೆ ಹೊರನಾಡಿನ ಘಟಕವಾಗಿರುವ ಕಾಸರಗೋಡು ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘವು ಆಯೋಜಿಸಲಿರುವ ಪತ್ರಕರ್ತರ ಸಮಾರಂಭಕ್ಕೆ ಆಗಮಿಸಬೇಕು ಎಂದು ವಿನಂತಿಸಿತು. ಈ ವೇಳೆ ಸರ್ಕಾರ ಮತ್ತು ಜನರ ಮಧ್ಯೆ ಕೊಂಡಿಯಾಗಿ ಕೆಲಸ ಮಾಡುತ್ತಿರುವ ಮಾಧ್ಯಮ ಮತ್ತು ಪತ್ರಕರ್ತರು, ತಮ್ಮದೇ ಆದ ಮಹತ್ವದ ಜವಾಬ್ದಾರಿಯನ್ನು ಹೊಂದಿದ್ದು, ಸಾಮಾಜದ ಸ್ವಾಸ್ತ್ಯ ಕಾಪಾಡುತ್ತಿದ್ದಾರೆ ಎಂದು ಶ್ಲಾಸಿದರು.

ಕೆಯುಡಬ್ಲೂಜೆ ಹುಟ್ಟು ಹಾಕಿದ ಸಾಹಿತಿ ಮತ್ತು ಪತ್ರಕರ್ತ ಡಿ.ವಿ.ಗುಂಡಪ್ಪ ಅವರ ಬಗ್ಗೆ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ನೀಡಿದ ಮಾಹಿತಿ ತಿಳಿದುಕೊಂಡ ರಾಜ್ಯಪಾಲರು, ಅವರ ಆದರ್ಶದಲ್ಲಿ ಈಗಲೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನಡೆಯುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಮುಂದೆ ಕೆಯುಡಬ್ಲೂಜೆ ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ತಿಳಿಸಿದರು.

ಇದನ್ನೂ ಓದಿ:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ವಾರ್ಷಿಕ ಪ್ರಶಸ್ತಿ ಘೋಷಣೆ; ಬೆಂಗಳೂರಿನ ಐವರಿಗೆ ಪ್ರಶಸ್ತಿ

ತಾವು ಕೇಂದ್ರ ಸಚಿವರಾಗಿದ್ದ ಸಂದರ್ಭದಲ್ಲಿ ಕೇರಳ ಮತ್ತು ಕಾಸರಗೋಡು ಭಾಗಕ್ಕೆ ಭೇಟಿ ನೀಡಿದ ನೆನಪುಗಳನ್ನು ಮೆಲುಕು ಹಾಕಿದ ರಾಜ್ಯಪಾಲರು, ಗಡಿನಾಡು ಕಾಸರಗೋಡಿನ ಬಹುಭಾಷಾ ನೆಲದಲ್ಲಿ ಆಯೋಜನೆಗೊಳ್ಳುವ ಕಾರ್ಯಕ್ರಮ ಅಪೂರ್ವವಾಗಿ ಮೂಡಿಬರಲಿ ಎಂದು ಶುಭ ಹಾರೈಸಿದರು. ಕನ್ನಡಿಗರು ಹೆಚ್ಚಾಗಿರುವ ಮತ್ತು ಕನ್ನಡದ ಪತ್ರಿಕೆಗಳನ್ನು ಓದುವ ಜನರಿರುವ ಪ್ರದೇಶವಾಗಿರುವ ಕಾಸರಗೋಡು ಜನರು ಈಗಲೂ ಭಾವನಾತ್ಮಕವಾಗಿ ಕನ್ನಡಿಗರ ಜೊತೆಗೆ ಅವಿನಾಭಾವ ಸಂಬಂಧ ಹೊಂದಿದ್ದಾರೆ. ಆದ್ದರಿಂದ ಕಾಸರಗೋಡಿನಲ್ಲಿ ಕನ್ನಡ ಪತ್ರಕರ್ತರ ಬಳಗವೇ ಈ ಕಾರ್ಯಕ್ರಮ ಆಯೋಜನೆ ಮಾಡುತ್ತಿದೆ ಎಂದು ಕಾಸರಗೋಡು ಜಿಲ್ಲಾ ಸಂಘದ ಅಧ್ಯಕ್ಷ ಎ.ಆರ್.ಸುಬ್ಬಯ್ಯಕಟ್ಟಿ ವಿವರಿಸಿದರು.

ಈ ವೇಳೆ ರಾಜ್ಯ ಘಟಕದ ಖಜಾಂಜಿ ವಾಸುದೇವ ಹೊಳ್ಳ, ಬೆಂಗಳೂರು ನಗರ ಜಿಲ್ಲಾ ಘಟಕ ಪ್ರಧಾನ ಕಾರ್ಯದರ್ಶಿ ನರೇಂದ್ರ ಪಾರೆಕಟ್, ಕಾಸರಗೋಡು ಘಟಕದ ಜಿಲ್ಲಾಧ್ಯಕ್ಷ ಎ.ಆರ್.ಸುಬ್ಬಯ್ಯಕಟ್ಟೆ, ಕಾರ್ಯದರ್ಶಿ ಪುರುಷೋತ್ತಮ ಭಟ್ ಕೆ. , ಖ್ಯಾತ ಗಾಯಕ, ಹವ್ಯಾಸಿ ಬರಹಗಾರ ಗೋ.ನಾ.ಸ್ವಾಮಿ ನಿಯೋಗದಲ್ಲಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ