AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆ ಸಮೀಪ 2 ಎಕರೆ ಜಾಗ ಖರೀದಿಸಿ ತುಳಸಿ ಕೃಷಿ ಮಾಡಿದ ಬೆಂಗಳೂರಿನ ಭಕ್ತ; ಪ್ರಭು ಶ್ರೀರಾಮನಿಗೆ ಸಿದ್ಧವಾಗುತ್ತಿದೆ ವಿಶೇಷ ತುಳಸಿ ಮಾಲೆ

ಅಯೋಧ್ಯೆಯ ಪ್ರಭು ಶ್ರೀರಾಮನಿಗೆ ತುಳಸಿ ಸೇವೆ ಮಾಡಲು ಬೆಂಗಳೂರಿನ ಭಕ್ತರೊಬ್ಬರು ಅಯೋಧ್ಯೆಯಲ್ಲಿ 2 ಎಕರೆ ಜಾಗ ಖರೀದಿಸಿ ತುಳಸಿ ಬೆಳೆದಿದ್ದಾರೆ. ಇದೀಗ, ರಾಮ ಮಂದಿರ ಉದ್ಘಾಟನೆ ದಿನ ಸಮೀಪಿಸುತ್ತಿರುವ ಹಿನ್ನೆಲೆ ಶ್ರೀರಾಮನಿಗಾಗಿ ಬೆಳೆದ ತುಳಸಿಗಳಿಂದ ವಿಶೇಷ ಮಾಲೆ ಸಿದ್ಧಪಡಿಸಲಾಗಿತ್ತಿದ್ದು, ನಿನ್ನೆಯಿಂದ ನಿರಂತರ ತುಳಸಿ ಸೇವೆ ಮಾಡಲಾಗುತ್ತಿದೆ.

ಅಯೋಧ್ಯೆ ಸಮೀಪ 2 ಎಕರೆ ಜಾಗ ಖರೀದಿಸಿ ತುಳಸಿ ಕೃಷಿ ಮಾಡಿದ ಬೆಂಗಳೂರಿನ ಭಕ್ತ; ಪ್ರಭು ಶ್ರೀರಾಮನಿಗೆ ಸಿದ್ಧವಾಗುತ್ತಿದೆ ವಿಶೇಷ ತುಳಸಿ ಮಾಲೆ
ಶ್ರೀರಾಮನಿಗೆ ತುಳಸಿ ಸೇವೆ ಮಾಡಲು ಅಯೋಧ್ಯೆ ಸಮೀಪ 2 ಎಕರೆ ಜಾಗ ಖರೀದಿಸಿದ ಬೆಂಗಳೂರಿನ ಭಕ್ತ; ಸಿದ್ಧವಾಗುತ್ತಿದೆ ವಿಶೇಷ ತುಳಸಿ ಮಾಲೆ
Vinay Kashappanavar
| Edited By: |

Updated on:Jan 18, 2024 | 12:56 PM

Share

ಬೆಂಗಳೂರು, ಜ.18: ಅಯೋಧ್ಯೆ ಶ್ರೀರಾಮ ಮಂದಿರ (Ayodhya Ram Mandir) ಉದ್ಘಾಟನೆಗೆ ಬೆರಳೆಣಿಕೆಯ ದಿನಗಳಷ್ಟೇ ಬಾಕಿ ಉಳಿದಿವೆ. ಈಗಾಗಲೇ ಪೂಜಾ ಕೈಂಕರ್ಯಗಳು ಆರಂಭವಾಗಿವೆ. ಐದು ಶತಮಾನಗಳ ಕನಸು ಈಡೇರುತ್ತಿರುವ ಸನಿಹದಲ್ಲಿ ರಾಮ ಭಕ್ತರು ವಿವಿಧ ರೀತಿಯಲ್ಲಿ ಭಕ್ತಿಯನ್ನು ಅರ್ಪಿಸುತ್ತಿದ್ದಾರೆ. ಇದೀಗ ಬೆಂಗಳೂರು (Bengaluru) ನಗರದ ಭಕ್ತರೊಬ್ಬರು ಪ್ರಭು ಶ್ರೀರಾಮನಿಗೆ ತುಳಸಿ ಸೇವೆ ಮಾಡಲೆಂದೇ ಅಯೋಧ್ಯೆ ಸಮೀಪ ಎರಡು ಎಕರೆ ಜಾಗ ಖರೀದಿಸಿ ತುಳಸಿ ಬೆಳೆದಿದ್ದು, ನಿನ್ನೆಯಿಂದ ನಿರಂತರವಾಗಿ ತುಳಸಿ ಸೇವೆ ನಡೆಸುತ್ತಿದ್ದಾರೆ.

ಬೆಂಗಳೂರು ನಗರದ ಜಯನಗರದ ನಿವಾಸಿಯಾಗಿರುವ ರಾಮ ಭಕ್ತ ಡಾ. ಶಿವಕಜಮಾರ್ ಅವರು ಪ್ರಭು ಶ್ರೀರಾಮನಿಗೆ ತುಳಸಿ ಸೇವೆ ಮಾಡಲೆಂದೇ ಅಯೋಧ್ಯೆ ಸಮೀಪ 60 ಕಿಲೋಮೀಟರ್ ದೂರದಲ್ಲಿ 2 ಎಕರೆ ಜಾಗ ಖರೀದಿ ಮಾಡಿದ್ದಾರೆ. ಕಳೆದ ಸಪ್ಟೆಂಬರ್​ ತಿಂಗಳಲ್ಲಿ ಗುಜರಾತ್​ನ ತುಳಸಿ ವನದಿಂದ ಕೃಷ್ಣ ತುಳಸಿ ಬೀಜಗಳನ್ನು ತಂದು ನಾಟಿ ಮಾಡಲಾಗಿದೆ.

ಇದನ್ನೂ ಓದಿ: ಅಯೋಧ್ಯೆ, ಮಂಡ್ಯದಲ್ಲಿ ಒಂದೇ ದಿನ ರಾಮ ಮಂದಿರ ಉದ್ಘಾಟನೆ; ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆಯ ವಿಗ್ರಹವೇ ಪ್ರತಿಷ್ಠಾಪನೆ

ಸದ್ಯ, ತುಳಸಿ ಗಿಡಗಳಾಗಿ ಬೆಳೆದು ನಿಂತಿದಿದ್ದು, ಶ್ರೀರಾಮನಿಗಾಗಿ ತುಳಸಿ ಮಾಲೆ ಕಟ್ಟಲು ಬೆಂಗಳೂರಿನ ಮೂವರು ಯುವಕರನ್ನು ಕಳುಹಿಸಲಾಗಿದೆ. ವಿಮಾನದ ಮೂಲಕ ತೆರಳಿದ ಯುವಕರು ಅಯೋಧ್ಯೆ ತಲುಪಿದ್ದು, ಹೂವು ಕಟ್ಟುವ ಕಾರ್ಯ ಆರಂಭಿಸಿದ್ದಾರೆ. ಜನವರಿ 17 ರಿಂದ ನಿರಂತರ ತುಳಸಿ ಸೇವೆ ಮಾಡಲಾಗುತ್ತಿದ್ದು, ಜನವರಿ 22 ಕ್ಕೆ ರಾಮಲಲ್ಲಾನಿಗೆ ವಿಶೇಷ ತುಳಸಿ ಮಾಲೆ ಸಿದ್ಧಪಡಿಸಲಾಗುತ್ತಿದೆ.

ರಾಮ ಮಂದಿರ ಉದ್ಘಾಟನೆ ಬಗ್ಗೆ ಮತ್ತಷ್ಟು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Published On - 12:51 pm, Thu, 18 January 24

ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!