AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಮಾಲಯ ಪರ್ವತಕ್ಕೆ ಹೋಗಿದ್ದ ಬೆಂಗಳೂರು ಮಣಿಪಾಲ್ ಆಸ್ಪತ್ರೆ ವೈದ್ಯ ನಾಪತ್ತೆ! ಪೊಲೀಸರಿಂದ ಹುಡುಕಾಟ

ವೈದ್ಯ ಚಂದ್ರಮೋಹನ್ ಹಿಮಾಲಯ ಪರ್ವತಕ್ಕೆ ಚಾರಣ ಹೋಗಿದ್ದರು. ಜೂನ್ 20ರ ನಂತರ ಅವರ ಮೊಬೈಲ್ ಸ್ವಿಚ್ ಆಫ್ ಆಗಿದೆ. ಈವರೆಗೆ ಯಾರ ಸಂಪರ್ಕಕ್ಕೂ ಸಿಗಲಿಲ್ಲ.

ಹಿಮಾಲಯ ಪರ್ವತಕ್ಕೆ ಹೋಗಿದ್ದ ಬೆಂಗಳೂರು ಮಣಿಪಾಲ್ ಆಸ್ಪತ್ರೆ ವೈದ್ಯ ನಾಪತ್ತೆ! ಪೊಲೀಸರಿಂದ ಹುಡುಕಾಟ
ನಾಪತ್ತೆಯಾಗಿರುವ ವೈದ್ಯ ಚಂದ್ರಮೋಹನ್
TV9 Web
| Edited By: |

Updated on:Jun 27, 2022 | 11:20 AM

Share

ಬೆಂಗಳೂರು: ಟ್ರೆಕ್ಕಿಂಗ್ (Trekking) ಹೋಗಿದ್ದ ಮಣಿಪಾಲ್ ಆಸ್ಪತ್ರೆಯ (Manipal Hospital) ವೈದ್ಯ ನಾಪತ್ತೆಯಾಗಿದ್ದು, ವೈದ್ಯನ ಮೊಬೈಲ್ ಸ್ವಿಚ್ ಆಫ್ ಆಗಿದೆ. ವೈದ್ಯ ಚಂದ್ರಮೋಹನ್ ಹಿಮಾಲಯ ಪರ್ವತಕ್ಕೆ ಚಾರಣ ಹೋಗಿದ್ದರು. ಜೂನ್ 20ರ ನಂತರ ಅವರ ಮೊಬೈಲ್ ಸ್ವಿಚ್ ಆಫ್ ಆಗಿದೆ. ಈವರೆಗೆ ಯಾರ ಸಂಪರ್ಕಕ್ಕೂ ಸಿಗಲಿಲ್ಲ. ಸದ್ಯ ಈ ಬಗ್ಗೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಹುಡುಕಾಟ ನಡೆಸುತ್ತಿದ್ದಾರೆ. ನಾಪತ್ತೆಯಾಗಿರುವ ಚಂದ್ರಮೋಹನ್ ವಸಂತನಗರದ ನಿವಾಸಿ.

ವೈದ್ಯ ಚಂದ್ರಮೋಹನ್ ಮೇ 3ರಂದು ಬೆಂಗಳೂರಿನಿಂದ ಹೊರಟಿದ್ದರು. ಬೆಂಗಳೂರಿನಿಂದ ಕಠ್ಮಂಡು ಫ್ಲೈಟ್​ನಲ್ಲಿ ತೆರಳಿದ್ದರು. 31 ವರ್ಷದ ಚಂದ್ರಮೋಹನ್​ಗೆ ಇನ್ನೂ ಮದುವೆಯಾಗಿರಲಿಲ್ಲ. ಆಧ್ಯಾತ್ಮಿಕತೆ ಕಡೆ ಅತಿಯಾದ ಒಲವು ಹೊಂದಿದ್ದರು ಎಂದು ತಿಳಿದುಬಂದಿದೆ. ಯಾವುದೇ ಪ್ರವಾಸಿ ಸಲಹೆ ತೆಗೆದುಕೊಳ್ಳದೇ ವೈದ್ಯ ಏಕಾಂಗಿಯಾಗಿ ಚಾರಣ ಹೋಗುವ ಹವ್ಯಾಸ ಹೊಂದಿದ್ದರು.

ಇದನ್ನೂ ಓದಿ: Ashadha Amavasya 2022: ಆಷಾಢ ಅಮಾವಾಸ್ಯೆ ಯಾವಾಗ? ಪೂಜಾ ವಿಧಾನ ಹಾಗೂ ಶುಭ ಮುಹೂರ್ತ

ಇದನ್ನೂ ಓದಿ
Image
ಇಂಡಿಯಲ್ಲಿರುವ ಗುರುದೇವ್ ರಾನಡೆ ಆಶ್ರಮದಲ್ಲಿ ಎರಡು ದಿನ ವಿಶ್ರಾಂತಿ ಪಡೆದ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್
Image
Alia Bhatt Pregnant: ಆಲಿಯಾ ಭಟ್​ ಪ್ರೆಗ್ನೆಂಟ್​; ರಣಬೀರ್​ ಕಪೂರ್​ ಜತೆ ಮದುವೆ ಆಗಿ ಎರಡೂವರೆ ತಿಂಗಳಲ್ಲಿ ಗುಡ್​ ನ್ಯೂಸ್​
Image
Ashadha Amavasya 2022: ಆಷಾಢ ಅಮಾವಾಸ್ಯೆ ಯಾವಾಗ? ಪೂಜಾ ವಿಧಾನ ಹಾಗೂ ಶುಭ ಮುಹೂರ್ತ
Image
IKEA Nagasandra Store:  9 ಫುಟ್​ಬಾಲ್​ ಸ್ಟೇಡಿಯಂನಷ್ಟು ದೊಡ್ಡ IKEA ಸ್ಟೋರ್ ನಾಗಸಂದ್ರದಲ್ಲಿ ಆರಂಭ; 2ರಿಂದ 3 ಗಂಟೆ ಕಾಯೋದು ತಪ್ಪಿಲ್ಲ!

ನೇಪಾಳದ ಮೂಲಕ ಹಿಮಾಲಯ ಹತ್ತಲು ಹೋಗಿದ್ದ ವೈದ್ಯ, ಆಗಾಗ ಚಾರಣ ಹೋಗಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಳ್ಳುತ್ತಿದ್ದರಂತೆ. ಶಿವನ ಪರಮ ಭಕ್ತನಾಗಿದ್ದು, ಸಾಧು ಸಂತರ ಜೊತೆ ಹೋಗಿ ಕಾಲ ಕಳೆಯುತ್ತಿದ್ದರಂತೆ. ಕೊವಿಡ್ ಸಮಯದಲ್ಲೂ ಒಂದು ತಿಂಗಳು ಮನೆ ತ್ಯಜಿಸಿದ್ದರಂತೆ. ಆ ಸಮಯದಲ್ಲೂ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದ್ದು, ಈ ಬಾರಿಯೂ ಅದೇ ರೀತಿ ಆಗಿರಬಹುದು ಎನ್ನುವ ಅನುಮಾನ ಇದೆ.

ಹೊಸ ಹೊಸ ಸ್ಥಳಗಳನ್ನು ಅನ್ವೇಷಿಸಲು ಚಂದ್ರಮೋಹನ್ ಒಂಟಿಯಾಗಿ ಹೋಗುತ್ತಿದ್ದರಂತೆ. ಸದ್ಯ ಮಗನನ್ನ ಹುಡುಕಿಕೊಂಡು ಪೋಷಕರು ನೇಪಾಳಕ್ಕೆ ಹೋಗಿದ್ದಾರೆ. ನೇಪಾಳ ಪೊಲೀಸರ ಸಹಾಯದಿಂದ ಪೋಷಕರು ಹುಡುಕುತ್ತಿದ್ದಾರೆ. ಹೈಗ್ರೌಂಡ್ ಪೊಲೀಸರು ಕೂಡಾ ಪೋಷಕರ ಸಂಪರ್ಕದಲ್ಲಿದ್ದಾರೆ.

ಇದನ್ನೂ ಓದಿ: Alia Bhatt Pregnant: ಆಲಿಯಾ ಭಟ್​ ಪ್ರೆಗ್ನೆಂಟ್​; ರಣಬೀರ್​ ಕಪೂರ್​ ಜತೆ ಮದುವೆ ಆಗಿ ಎರಡೂವರೆ ತಿಂಗಳಲ್ಲಿ ಗುಡ್​ ನ್ಯೂಸ್​

Published On - 11:09 am, Mon, 27 June 22

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ