AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಮಷಿನ್‌ಗೆ ಸಿಲುಕಿ ತುಂಡಾಗಿದ್ದ ಕೈ ಮಣಿಕಟ್ಟನ್ನು ಯಶಸ್ವಿಯಾಗಿ ಮರುಜೋಡಿಸಿದ ವೈದ್ಯರು

ಕಾರ್ಖಾನೆಯಲ್ಲಿ ಹೊಸ ಮಷಿನ್‌ ಪರೀಕ್ಷಿಸುವ ವೇಳೆ ಅಚಾನಕ್ಕಾಗಿ ಮಷಿನ್‌ಗೆ ಸಿಲುಕಿ ತುಂಡರಿಸಿದ್ದ ಕೈ ಮಣಿಕಟ್ಟನ್ನು ಫೋರ್ಟಿಸ್‌ ಆಸ್ಪತ್ರೆ ವೈದ್ಯರು ಯಶಸ್ವಿಯಾಗಿ ಮರುಜೋಡಣೆ ಮಾಡಿದ್ದಾರೆ.

Bengaluru: ಮಷಿನ್‌ಗೆ ಸಿಲುಕಿ ತುಂಡಾಗಿದ್ದ ಕೈ ಮಣಿಕಟ್ಟನ್ನು ಯಶಸ್ವಿಯಾಗಿ ಮರುಜೋಡಿಸಿದ ವೈದ್ಯರು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Feb 21, 2023 | 4:48 PM

Share

ಬೆಂಗಳೂರು: ಕಾರ್ಖಾನೆಯಲ್ಲಿ ಹೊಸ ಮಷಿನ್‌ ಪರೀಕ್ಷಿಸುವ ವೇಳೆ ಅಚಾನಕ್ಕಾಗಿ ಮಷಿನ್‌ಗೆ ಸಿಲುಕಿ ತುಂಡರಿಸಿದ್ದ ಕೈ ಮಣಿಕಟ್ಟನ್ನು ಫೋರ್ಟಿಸ್‌ ಆಸ್ಪತ್ರೆ ವೈದ್ಯರು ಯಶಸ್ವಿಯಾಗಿ ಮರುಜೋಡಣೆ ಮಾಡಿದ್ದಾರೆ. ಮೈಕ್ರೊ ವಾಸ್ಕುಲರ್ ಸರ್ಜರಿ ಸಮಾಲೋಚಕರಾದ ಡಾ. ಸತ್ಯ ವಂಶಿ ಕೃಷ್ಣ ಅವರ ತಂಡವು ಈ ಸರ್ಜರಿಯನ್ನು ಯಶಸ್ವಿಯಾಗಿ ನಡೆಸಿದೆ. 51 ವರ್ಷದ ವ್ಯಕ್ತಿಯೂ ಕಾರ್ಖಾನೆ ಒಂದರಲ್ಲಿ ಮ್ಯಾನೇಜರ್‌ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಕಾರ್ಖಾನೆಗೆ ಹೊಸ ಮಷಿನ್‌ ಬಂದ ಹಿನ್ನೆಲೆಯಲ್ಲಿ ಅದರ ಪರಿಶೀಲನೆಗೆ ಮುಂದಾದರು. ಆದರೆ, ಅಚಾನಕ್ಕಾಗಿ ಅವರ ಕೈ ಮಣಿಕಟ್ಟು ಮಷಿನ್‌ಗೆ ಸಿಲುಕಿ ಎರಡು ಭಾಗವಾಗಿ ತುಂಡಾಗಿತ್ತು. ಕೂಡಲೇ ಅವರನ್ನು ಫೊರ್ಟಿಸ್‌ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಈ ಕುರಿತು ಮಾತನಾಡಿದ ಡಾ. ಸತ್ಯ ವಂಶಿ ಕೃಷ್ಣ, ಇದೊಂದು ಅಪರೂಪದ ಪ್ರಕರಣ, ಮಷಿನ್‌ಗೆ ಸಿಲುಕಿ ಆ ವ್ಯಕ್ತಿಯ ಕೈಯ ಮಣಿಕಟ್ಟು ಸಂಪೂರ್ಣವಾಗಿ ಬೇರ್ಪಟ್ಟಿತ್ತು. ಆದರೆ, ಅದೃಷ್ಟವಷಾತ್‌ ಅವರ ಕೈ ಮಣಿಕಟ್ಟನ್ನು ಜೊತೆಯಲ್ಲಿಯೇ ಜೋಪಾನವಾಗಿ ಆಸ್ಪತ್ರೆಗೆ ತೆಗೆದುಕೊಂಡು ಬಂದ ಹಿನ್ನೆಲೆಯಲ್ಲಿ ಕೂಡಲೇ ಶಸ್ತ್ರಚಿಕಿತ್ಸೆ ನಡೆಸಿ ಮೊದಲಿನಂತೆಯೇ ಕೈನನ್ನು ಮರುಜೋಡಣೆ ಮಾಡಲಾಯಿತು. ಕೇವಲ 7 ಗಂಟೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಿದ್ದರ ಪರಿಣಾಮವಾಗಿ ತುಂಡಾಗಿದ್ದ ಮಣಿಕಟ್ಟಿನ ಸ್ನಾಯುಗಳು ಬದುಕಿದ್ದವು ಎಂದು ವಿವರಿಸಿದರು. ಪ್ರಸ್ತುತ ರೋಗಿಯ ಕೈ ಮರುಜೋಡಣೆ ಮಾಡಿದ್ದು, ರಕ್ತಸಂಚಾರವಾಗುತ್ತಿದೆ. ಒಂದೆರಡು ತಿಂಗಳ ನಂತರ ಮೊದಲಿನಂತೆಯೇ ಕೈ ಕಾರ್ಯನಿರ್ವಹಿಸಲಿದೆ ಎಂದು ಹೇಳಿದರು.

ಮಷಿನ್‌ಗೆ ಸಿಲುಕಿ ತುಂಡಾಗಿದ್ದ ಕೈ ಮಣಿಕಟ್ಟನ್ನು ಯಶಸ್ವಿಯಾಗಿ ಮರುಜೋಡಿಸಿದ ವೈದ್ಯರು

ಇದನ್ನೂ ಓದಿ:ಫೋರ್ಟಿಸ್ ಆಸ್ಪತ್ರೆಯಲ್ಲಿ ನೈಜೀರಿಯಾದ ಬಾಲಕನಿಗೆ ಗುಪ್ತಾಂಗ ಮರುಜೋಡಣೆ ಅಪರೂಪದ ಶಸ್ತ್ರಚಿಕಿತ್ಸೆ ಯಶಸ್ವಿ

ಯಾವುದೇ ಪ್ರಕರಣವಾಗಲಿ, ತುಂಡಾದ ಅಂಗವು ಕೆಲ ಗಂಟೆಗಳ ವರೆಗೂ ಬದುಕಿರಲಿದೆ. ಆ ಅವಧಿಯೊಳಗೆ ಅಂಗವನ್ನು ತೇವಾಂಶವಿರುವ ಬಟ್ಟೆಯಲ್ಲಿ ಸುತ್ತಿ ಜೋಪಾನವಾಗಿ ಆಸ್ಪತ್ರೆಗೆ ತಂದು ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ಮರುಜೋಡಣೆ ಮಾಡಬಹುದು. ಕೆಲವರು ತುಂಡಾದ ಅಂಗವನ್ನು ಜೋಪಾನವಾಗಿಡಲು ಕೋಲ್ಡ್‌ ವಾಟರ್‌ ಅಥವಾ ಐಸ್‌ ಕ್ಯೂಬ್‌ ಇರುವ ಡಬ್ಬದಲ್ಲಿ ಇಟ್ಟು ತರುತ್ತಾರೆ. ಇದು ತಪ್ಪು, ಹೀಗೆ ಮಾಡುವುದರಿಂದ ಅಂಗದಲ್ಲಿನ ಸ್ನಾಯುಗಳು ಬೇಗ ಸಾಯುವ ಅಪಾಯವಿರುತ್ತದೆ ಎಂದು ಹೇಳಿದರು.

Published On - 4:48 pm, Tue, 21 February 23

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!