AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

New Year 2024: ಹೊಸ ವರ್ಷಕ್ಕೆ ಕೆಲವೇ ದಿನಗಳು ಬಾಕಿ, ಅಲರ್ಟ್​ ಆದ ಪೊಲೀಸರು; ಅಹಿತಕರ ಘಟನೆ ನಡೆಯದಂತೆ ಪ್ಲ್ಯಾನ್​

ಮುಖ್ಯವಾಗಿ ರಾಜಧಾನಿ ಬೆಂಗಳೂರಿನಲ್ಲಿ ಹೊಸ ವರ್ಷದ ಮೋಜು ಮಸ್ತಿ ಜಾಸ್ತಿಯಾಗಿಯೇ ಇರುತ್ತದೆ. ಅದರಲ್ಲೂ ಬ್ರಿಗೇಡ್​ ರೋಡ್​, ಎಂಜಿ ರೋಡ್​ಗಳಲ್ಲಿ ಇದರ ಎಫೆಕ್ಟ್​ ತುಸು ಹೆಚ್ಚು ಇರುತ್ತದೆ. ಈ ಹಿನ್ನಲೆ ಎಚ್ಚೆತ್ತ ಬೆಂಗಳೂರು ನಗರ ಪೊಲೀಸರು(Bangalore City Police) ಅಲರ್ಟ್ ಆಗಿದ್ದಾರೆ.  ಅಹಿತಕರ ಘಟನೆ ನಡೆಯದಂತೆ ಪ್ಲ್ಯಾನಿಂಗ್​ ನಡೆಸಿದ್ದಾರೆ.

New Year 2024: ಹೊಸ ವರ್ಷಕ್ಕೆ ಕೆಲವೇ ದಿನಗಳು ಬಾಕಿ, ಅಲರ್ಟ್​ ಆದ ಪೊಲೀಸರು; ಅಹಿತಕರ ಘಟನೆ ನಡೆಯದಂತೆ ಪ್ಲ್ಯಾನ್​
ಹೊಸ ವರ್ಷ ಆಚರಣೆಗೆ ಬೆಂಗಳೂರಿನಲ್ಲಿ ಪೊಲೀಸ್​ ಬಂದೋಬಸ್ತ್​
ರಾಚಪ್ಪಾಜಿ ನಾಯ್ಕ್
| Edited By: |

Updated on:Dec 20, 2023 | 3:34 PM

Share

ಬೆಂಗಳೂರು, ಡಿ.15: ಇನ್ನೇನು ಹೊಸ ವರ್ಷ(New Year) ಸಮೀಪಿಸುತ್ತಿದೆ. ಈ ಹಿನ್ನಲೆ ಎಚ್ಚೆತ್ತ ಬೆಂಗಳೂರು ನಗರ ಪೊಲೀಸರು(Bangalore City Police) ಅಲರ್ಟ್ ಆಗಿದ್ದಾರೆ.  ಅಹಿತಕರ ಘಟನೆ ನಡೆಯದಂತೆ ಪ್ಲ್ಯಾನಿಂಗ್​ ನಡೆಸಿದ್ದಾರೆ. ನಗರದ ಬ್ರಿಗೇಡ್ ರೋಡ್(Brigade Road)​, ಎಂಜಿ ರಸ್ತೆ(MG Road)ಯಲ್ಲಿ ಹೊಸ ಅಲೆಯ ವರ್ಷಾಚರಣೆಗೆ ಹೆಚ್ಚಿನ ಜನ ಸೇರುತ್ತಾರೆ. ಹಾಗಾಗಿ ಪ್ರತಿ ಬಾರಿ ಒಂದಷ್ಟು ಗೊಂದಲ ಮತ್ತು ಅಹಿತಕರ ಘಟನೆ ನಡೆಯುತ್ತದೆ. ಈ ಬಾರಿ ಆ ರೀತಿ ಆಗದಂತೆ ಕೇಂದ್ರ ವಿಭಾಗ ಪೊಲೀಸರು, ಪ್ಲ್ಯಾನ್ ಮಾಡಿಕೊಳ್ಳುತ್ತಿದ್ದಾರೆ.

ಕೇಂದ್ರ ವಿಭಾಗ ಡಿಸಿಪಿ ಶೇಖರ್ ನೇತೃತ್ವದಲ್ಲಿ ಸಿದ್ಧತೆ

ಇನ್ನು ಮುಖ್ಯವಾಗಿ ರಾಜಧಾನಿ ಬೆಂಗಳೂರಿನಲ್ಲಿ ಹೊಸ ವರ್ಷದ ಮೋಜು ಮಸ್ತಿ ಜಾಸ್ತಿಯಾಗಿಯೇ ಇರುತ್ತದೆ. ಅದರಲ್ಲೂ ಬ್ರಿಗೇಡ್​ ರೋಡ್​, ಎಂಜಿ ರೋಡ್​ಗಳಲ್ಲಿ ಇದರ ಎಫೆಕ್ಟ್​ ತುಸು ಹೆಚ್ಚು ಇರುತ್ತದೆ. ಈ ಹಿನ್ನಲೆ ಪ್ರತಿಯೊಬ್ಬರಿಗೂ ಪ್ರತ್ಯೇಕ ಸಾಲು ಮಾಡಲು ಚಿಂತನೆ ನಡೆಸಲಾಗಿದೆ. ಪುರುಷರು, ಮಹಿಳೆಯರು, ಪ್ರೇಮಿಗಳು ಹಾಗೂ ವೃದ್ಧರಿಗೆ ಪ್ರತ್ಯೇಕ‌ ಸಾಲು ಮಾಡಿ, ಅದೇ ಸಾಲಿನಲ್ಲಿ ಸಂಚರಿಸಲು ಮಾತ್ರ ಅವಕಾಶ ನೀಡುವ ಬಗ್ಗೆ ಕೇಂದ್ರ ವಿಭಾಗ ಡಿಸಿಪಿ ಶೇಖರ್ ನೇತೃತ್ವದಲ್ಲಿ ಸಿದ್ಧತೆ ನಡೆಸಲಾಗುತ್ತಿದೆ.

ಇದನ್ನೂ ಓದಿ:ಹೊಸ ವರ್ಷ ಹೊಸ್ತಿಲಲ್ಲಿ ಹೆಚ್ಚಾದ ಡ್ರಗ್ಸ್ ದಂಧೆ; ಪೊಲೀಸ್ ಆಯುಕ್ತರಿಂದ ಸಿಟಿ ಪೊಲೀಸರಿಗೆ ಹೊಸ ಟಾಸ್ಕ್

ಹೊಸ ವರ್ಷಾಚರಣೆಗೆ ಬೆಂಗಳೂರಿನಲ್ಲಿ ಭರ್ಜರಿ ತಯಾರಿ ನಡೆಸಲಾಗುತ್ತಿದ್ದು, ಮಾದಕ ಲೋಕ ಕೂಡ ಸಿದ್ಧವಾಗಿದೆ. ಈ ಹಿನ್ನಲೆ ಬೆಂಗಳೂರಿನಲ್ಲಿ ಸಿಂಥೆಟಿಕ್ ಡ್ರಗ್ಸ್​ಗೆ ಭಾರೀ ಬೇಡಿಕೆ ಇರುವುದರಿಂದ ನಗರಕ್ಕೆ 100 ಕೋಟಿಗೂ ಅಧಿಕ ಮೌಲ್ಯದ ಡ್ರಗ್ಸ್ ಸಾಗಿಸಲು ಏಳೆಂಟು ಗುಂಪುಗಳಿಂದ ಪ್ಲ್ಯಾನ್ ಮಾಡಲಾಗಿದೆ ಎಂಬ ಮಾಹಿತಿಯು ಪೊಲೀಸರಿಗೆ ಸಿಕ್ಕಿದ್ದು, ಈಗಾಗಲೇ ಪೊಲೀಸರು ಅಲರ್ಟ್​ ಆಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:11 pm, Fri, 15 December 23

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ