AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Weather Report: ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ತಜ್ಞ ಸದಾನಂದ ಅಡಿಗ ಮಾಹಿತಿ

Bangalore Rains: ಎಲೆಕ್ಟ್ರಾನಿಕ್ ಸಿಟಿಯಲ್ಲಿ 6.5 ಮಿಲಿ ಮೀಟರ್ ಮಳೆಯಾಗಿದ್ದರೆ, ಜಿಕೆವಿಕೆಯಲ್ಲಿ 123 ಮಿಲಿ ಮೀಟರ್ ಮಳೆಯಾಗಿದೆ. ರಾಜಧಾನಿಯಲ್ಲಿ ಇನ್ನು ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ.

Bengaluru Weather Report: ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ತಜ್ಞ ಸದಾನಂದ ಅಡಿಗ ಮಾಹಿತಿ
ಬೆಂಗಳೂರಿನಲ್ಲಿ ಮಳೆ
TV9 Web
| Edited By: |

Updated on:Nov 22, 2021 | 3:11 PM

Share

ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಮಳೆಯಾಗುವ (Bangalore Rains) ಸಾಧ್ಯತೆಯಿದೆ ಅಂತ ಹವಾಮಾನ ಇಲಾಖೆ ತಜ್ಞ ಸದಾನಂದ ಅಡಿಗ ಮಾಹಿತಿ ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು (ನ.22) ಬೆಳಗ್ಗೆ 26.5 ರಷ್ಟು ಗರಿಷ್ಟ ಉಷ್ಣಾಂಶವಿದ್ದು. 20.5 ಕನಿಷ್ಠ ಉಷ್ಣಾಂಶ ದಾಖಾಲಾಗಿದೆ. ನಗರದಲ್ಲಿ 5.2 ಮಿಲಿ ಮೀಟರ್ ಮಳೆಯಾಗಿದೆ. ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 6.2 ಮಿಮೀ ಮಳೆಯಾಗಿದ್ದು, ಎಚ್ಎಎಲ್​ನಲ್ಲಿ 1.4 ಮಿಲಿ ಮೀಟರ್ ಮಳೆಯಾಗಿದೆ.

ಎಲೆಕ್ಟ್ರಾನಿಕ್ ಸಿಟಿಯಲ್ಲಿ 6.5 ಮಿಲಿ ಮೀಟರ್ ಮಳೆಯಾಗಿದ್ದರೆ, ಜಿಕೆವಿಕೆಯಲ್ಲಿ 123 ಮಿಲಿ ಮೀಟರ್ ಮಳೆಯಾಗಿದೆ. ರಾಜಧಾನಿಯಲ್ಲಿ (Bangalore Rains) ಇನ್ನು ಎರಡು ದಿನ ಮಳೆಯಾಗುವ ಸಾಧ್ಯತೆ ಇದ್ದು, ಮೋಡ ಕವಿದ ವಾತಾವಾರಣ ಇರಲಿದೆ ಅಂತ ಹವಾಮಾನ ಇಲಾಖೆ ತಜ್ಞ ಸದಾನಂದ ಅಡಿಗ ತಿಳಿಸಿದ್ದಾರೆ.

ನಿರಂತರ ಮಳೆಯಿಂದ ರಾಜ್ಯದಲ್ಲಿ ತೀರಾ ನಷ್ಟ ಉಂಟಾಗಿದೆ. ರೈತರು ಬೆಳೆದ ಬೆಳೆಗಳಿಂದ ಹಿಡಿದು ವಾಸವಿದ್ದ ಮನೆಗಳು ನಾಶವಾಗಿವೆ. ಬೆಂಗಳೂರಿನಲ್ಲೂ ಅಪಾರ ಪ್ರಮಾಣದ ನಷ್ಟವಾಗಿದೆ. ಅಪಾರ್ಟ್​ಮೆಂಟ್​ಗಳಿಗೆ ಮಳೆ ನೀರು ನುಗ್ಗಿದ ಪರಿಣಾಮ ನಿವಾಸಿಗಳು ಪರದಾಡಿದ್ದಾರೆ. ಮುಂದಿನ ಐದು ದಿನಗಳ ಕಾಲ ಕರ್ನಾಟಕದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಅಂತ ಭಾರತದ ಹವಾಮಾನ ಇಲಾಖೆ ತಿಳಿಸಿದೆ.

1 ಲಕ್ಷ ಪರಿಹಾರಕ್ಕೆ ಸಿಎಂ ಸೂಚನೆ ಮನೆ ಸಂಪೂರ್ಣ ಹಾನಿಯಾಗಿದ್ದರೆ ಶೀಘ್ರವೇ ಒಂದು ಲಕ್ಷ ರೂ. ಪರಿಹಾರ ನೀಡುವಂತೆ ಸಿಎಂ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಬೆಳೆ ನಷ್ಟಕ್ಕೆ ವಿಮಾ ಕಂಪನಿಗಳು ಪರಿಹಾರ ವಿತರಿಸಬೇಕು. ಶೀಘ್ರವೇ ಬೆಳೆ ನಷ್ಟ ಪರಿಹಾರ ನೀಡಬೇಕೆಂದು ಅಂತ ಬೊಮ್ಮಾಯಿ ಆದೇಶ ನೀಡಿದ್ದಾರೆ. ಅಲ್ಲದೇ ರಸ್ತೆ ದುರಸ್ತಿಗಾಗಿ 500 ಕೋಟಿ ರೂ. ಬಿಡುಗಡೆ ಮಾಡುವಂತೆ ಆರ್ಥಿಕ ಇಲಾಖೆಗೆ ಆದೇಶ ನೀಡಿದ್ದಾರೆ. 4 ಕೆರೆಗಳು ಸಂಪೂರ್ಣ ಹಾನಿಯಾಗಿದೆ ಕೂಡಲೇ ಎಚ್ಚೆತ್ತುಕೊಳ್ಳಿ. ನೀರು ವ್ಯರ್ಥವಾಗದಂತೆ ಎಚ್ಚರವಹಿಸಬೇಕು ಎಂದು ಸೂಚನೆ ನೀಡುರುವ ಅವರು, ರಾಜ್ಯದಲ್ಲಿ ಭಾರಿ ಮಳೆಗೆ ವಿದ್ಯುತ್ ಕಂಬ, ಟಿಸಿಗಳಿಗೆ ಹಾನಿಯಾಗಿವೆ. ವಿದ್ಯುತ್ ಸರಬರಾಜು ಕಂಪನಿಗಳು ದುರಸ್ತಿ ಕಾರ್ಯ ಕೈಗೊಳ್ಳಿ ಅಂತ ತಿಳಿಸಿದ್ದಾರೆ.

ಇದನ್ನೂ ಓದಿ

ಮಳೆ ಅಬ್ಬರ: ಮನೆಗೋಡೆ ಕುಸಿದು ವ್ಯಕ್ತಿ ಸಾವು, ಹರಿಯುವ ನೀರಲ್ಲಿ ತೇಲಿ ಬಂತು ಅಪರಿಚಿತ ಮಹಿಳೆ ಶವ

ಕೋಗಿಲು ಕ್ರಾಸ್ ಬಳಿ ರಸ್ತೆ ಜಲಾವೃತ; ಬಿಬಿಎಂಪಿ ಚುನಾವಣೆ ಬಹಿಷ್ಕರಿಸಿದ ಕೇಂದ್ರೀಯ ವಿಹಾರ ಅಪಾರ್ಟ್‌ಮೆಂಟ್ ನಿವಾಸಿಗಳು

Published On - 2:43 pm, Mon, 22 November 21

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ