AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್: ಅಣು ಬಾಂಬ್​ನಂತೆ ಸಿಡಿದ ಗ್ಯಾಸ್ ಸಿಲಿಂಡರ್; ಸ್ಫೋಟದ ಶಬ್ದಕ್ಕೆ ಬೆಚ್ಚಿ ಬಿದ್ದ ಬಡಾವಣೆ ಜನ!

ಅದು ಅಕ್ರಮವಾಗಿ ಗ್ಯಾಸ್ ರಿಫಿಲ್ಲಿಂಗ್ ಮಾಡುತ್ತಿದ್ದ ಜಾಗ, ಹತ್ತಾರು ಹಳೆ ಗ್ಯಾಸ್ ಸಿಲಿಂಡರ್​ಗಳನ್ನು ಅಂಗಡಿಯೊಳಗಿಟ್ಟ ಆತ ಇದು‌ ಎಷ್ಟು ಡೇಂಜರ್​ ಅನ್ನೋದು ಮರೆತು ಮಲಗಿದ್ದ, ಈಗ ಅದೇ ಗ್ಯಾಸ್ ಸಿಲಿಂಡರ್ ಸಿಡಿದು ಗಂಭೀರವಾಗಿ ಗಾಯಗೊಂಡಿದ್ದಾನೆ.

ಆನೇಕಲ್: ಅಣು ಬಾಂಬ್​ನಂತೆ ಸಿಡಿದ ಗ್ಯಾಸ್ ಸಿಲಿಂಡರ್; ಸ್ಫೋಟದ ಶಬ್ದಕ್ಕೆ ಬೆಚ್ಚಿ ಬಿದ್ದ ಬಡಾವಣೆ ಜನ!
anekal cylinder blast
ಕಿರಣ್ ಹನುಮಂತ್​ ಮಾದಾರ್
|

Updated on: Apr 19, 2023 | 9:00 AM

Share

ಬೆಂಗಳೂರು: ರಾತ್ರಿ 12:30 ರ ಸಮಯ ಬಡಾವಣೆಯ ಜನರೆಲ್ಲ ನಿದ್ದೆಗೆ ಜಾರಿದ್ರು, ಅದೇ ಸಮಯಕ್ಕೆ ಸರಿಯಾಗಿ ದೊಡ್ಡದಾಗಿ ಭೂಮಿ ಕಂಪಿಸಿದ ಶಬ್ದ. ಜನ ಬಾಂಬ್ ಸಿಡಿಯಿತೋ ಅಥವಾ ಭೂಕಂಪ ಆಯಿತೋ ಎಂದು ಗಾಬರಿಗೊಂಡು ತಮ್ಮ ಮನೆ ಬಾಗಿಲು, ಕಿಟಕಿ‌ ಬಳಿ ಬಂದು ನೋಡಿದರೆ ಮುಖ್ಯರಸ್ತೆಯ ಬಿಲ್ಡಿಂಗ್ ಬಿದ್ದಿರೋದು ಗೊತ್ತಾಗಿದೆ. ಹೌದು ಆನೇಕಲ್ ತಾಲೂಕಿನ‌ ಮುತ್ಯಾನಲ್ಲೂರು ಗ್ರಾಮದಲ್ಲಿ ನಡೆದ ಘಟನೆ ಇಡೀ ಬಡವಾಣೆಯ ಜನರನ್ನ ಆತಂಕಕ್ಕೀಡು ಮಾಡಿದೆ. ಹೌದು ಮುತ್ಯಾನಲ್ಲೂರು ಮುಖ್ಯ ರಸ್ತೆಯಲ್ಲಿರುವ ಅಂಗಡಿಯಲ್ಲಿ ಅಕ್ರಮವಾಗಿ ಹಾಗೂ ಅವೈಜ್ಞಾನಿಕವಾಗಿ ಗ್ಯಾಸ್ ರಿಪೇರಿ ಹಾಗೂ ರಿಫಿಲ್ಲಿಂಗ್ ಮಾಡಲಾಗುತ್ತಿತ್ತು.‌ ಇದು ಎಷ್ಟು ಡೇಂಜರ್ ಎಂದು ಪರಿವೆ ಇಲ್ಲದ ಫೈಜುಲ್ ಎಂಬಾತ ಹಳೆಯ ಗ್ಯಾಸ್ ಸಿಲಿಂಡರ್​ಗಳು ಹಾಗೂ ಲಿಕೇಜ್ ಗ್ಯಾಸ್ ಸಿಲಿಂಡರ್​ಗಳನ್ನ ಶೇಖರಿಸಿಟ್ಟಿದ್ದ.‌ ರಾತ್ರಿ 12:30 ಕ್ಕೆ ಗ್ಯಾಸ್ ಲೀಕ್ ಆಗಿ ಸಿಲಿಂಡರ್ ಸ್ಫೋಟಗೊಂಡಿದೆ.

ಹೌದು ರಾತ್ರಿ ಅಂಗಡಿಯಲ್ಲೇ ಮಲಗಿದ್ದ ಫೈಜುಲ್​ಗೆ ಗಂಭೀರ ಗಾಯಗಳಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಫೋಟದ ತೀವ್ರತೆಗೆ ಇಡೀ ಕಟ್ಟಡದ ನಾಲ್ಕು ಅಂಗಡಿಯ ಚೇಂಬರ್​ಗಳು ಕೂಡ ನೆಲಸಮವಾಗಿದ್ದು, ಸಧ್ಯ ಪ್ರಕರಣ‌ ದಾಖಲಿಸಿಕೊಂಡಿರುವ ಸೂರ್ಯಸಿಟಿ ಪೊಲೀಸರು ಘಟನೆ ಬಗ್ಗೆ ಇನ್ನಷ್ಟು ಪರಿಶೀಲನೆ ಮಾಡುತ್ತಿದ್ದಾರೆ. ಇದೇ ಘಟನೆ ಬೆಳಿಗ್ಗೆ ಸಮಯದಲ್ಲಿ ನಡೆದಿದ್ದರೇ ಬಹಳಷ್ಟು ಸಾವು ನೋವುಗಳಾಗುವ ಸಂಭವವಿತ್ತು ಎನ್ನುವುದು ಸ್ಥಳೀಯರ ಮಾತು, ಅದೇನೆ ಇರಲಿ ಇಂತಹ ಅಕ್ರಮ ಗ್ಯಾಸ್ ಫಿಲ್ಲಿಂಗ್ ಸ್ಟೋರ್​ಗಳ ಬಾಗಿಲು ಮುಚ್ಚಿಸಿ ಜನರ ಜೀವ ಉಳಿಸಿ ಅನ್ನೋದು ಸಾರ್ವಜನಿಕರ ಅಭಿಪ್ರಾಯವಾಗಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ