AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್: ಅಣು ಬಾಂಬ್​ನಂತೆ ಸಿಡಿದ ಗ್ಯಾಸ್ ಸಿಲಿಂಡರ್; ಸ್ಫೋಟದ ಶಬ್ದಕ್ಕೆ ಬೆಚ್ಚಿ ಬಿದ್ದ ಬಡಾವಣೆ ಜನ!

ಅದು ಅಕ್ರಮವಾಗಿ ಗ್ಯಾಸ್ ರಿಫಿಲ್ಲಿಂಗ್ ಮಾಡುತ್ತಿದ್ದ ಜಾಗ, ಹತ್ತಾರು ಹಳೆ ಗ್ಯಾಸ್ ಸಿಲಿಂಡರ್​ಗಳನ್ನು ಅಂಗಡಿಯೊಳಗಿಟ್ಟ ಆತ ಇದು‌ ಎಷ್ಟು ಡೇಂಜರ್​ ಅನ್ನೋದು ಮರೆತು ಮಲಗಿದ್ದ, ಈಗ ಅದೇ ಗ್ಯಾಸ್ ಸಿಲಿಂಡರ್ ಸಿಡಿದು ಗಂಭೀರವಾಗಿ ಗಾಯಗೊಂಡಿದ್ದಾನೆ.

ಆನೇಕಲ್: ಅಣು ಬಾಂಬ್​ನಂತೆ ಸಿಡಿದ ಗ್ಯಾಸ್ ಸಿಲಿಂಡರ್; ಸ್ಫೋಟದ ಶಬ್ದಕ್ಕೆ ಬೆಚ್ಚಿ ಬಿದ್ದ ಬಡಾವಣೆ ಜನ!
anekal cylinder blast
ಕಿರಣ್ ಹನುಮಂತ್​ ಮಾದಾರ್
|

Updated on: Apr 19, 2023 | 9:00 AM

Share

ಬೆಂಗಳೂರು: ರಾತ್ರಿ 12:30 ರ ಸಮಯ ಬಡಾವಣೆಯ ಜನರೆಲ್ಲ ನಿದ್ದೆಗೆ ಜಾರಿದ್ರು, ಅದೇ ಸಮಯಕ್ಕೆ ಸರಿಯಾಗಿ ದೊಡ್ಡದಾಗಿ ಭೂಮಿ ಕಂಪಿಸಿದ ಶಬ್ದ. ಜನ ಬಾಂಬ್ ಸಿಡಿಯಿತೋ ಅಥವಾ ಭೂಕಂಪ ಆಯಿತೋ ಎಂದು ಗಾಬರಿಗೊಂಡು ತಮ್ಮ ಮನೆ ಬಾಗಿಲು, ಕಿಟಕಿ‌ ಬಳಿ ಬಂದು ನೋಡಿದರೆ ಮುಖ್ಯರಸ್ತೆಯ ಬಿಲ್ಡಿಂಗ್ ಬಿದ್ದಿರೋದು ಗೊತ್ತಾಗಿದೆ. ಹೌದು ಆನೇಕಲ್ ತಾಲೂಕಿನ‌ ಮುತ್ಯಾನಲ್ಲೂರು ಗ್ರಾಮದಲ್ಲಿ ನಡೆದ ಘಟನೆ ಇಡೀ ಬಡವಾಣೆಯ ಜನರನ್ನ ಆತಂಕಕ್ಕೀಡು ಮಾಡಿದೆ. ಹೌದು ಮುತ್ಯಾನಲ್ಲೂರು ಮುಖ್ಯ ರಸ್ತೆಯಲ್ಲಿರುವ ಅಂಗಡಿಯಲ್ಲಿ ಅಕ್ರಮವಾಗಿ ಹಾಗೂ ಅವೈಜ್ಞಾನಿಕವಾಗಿ ಗ್ಯಾಸ್ ರಿಪೇರಿ ಹಾಗೂ ರಿಫಿಲ್ಲಿಂಗ್ ಮಾಡಲಾಗುತ್ತಿತ್ತು.‌ ಇದು ಎಷ್ಟು ಡೇಂಜರ್ ಎಂದು ಪರಿವೆ ಇಲ್ಲದ ಫೈಜುಲ್ ಎಂಬಾತ ಹಳೆಯ ಗ್ಯಾಸ್ ಸಿಲಿಂಡರ್​ಗಳು ಹಾಗೂ ಲಿಕೇಜ್ ಗ್ಯಾಸ್ ಸಿಲಿಂಡರ್​ಗಳನ್ನ ಶೇಖರಿಸಿಟ್ಟಿದ್ದ.‌ ರಾತ್ರಿ 12:30 ಕ್ಕೆ ಗ್ಯಾಸ್ ಲೀಕ್ ಆಗಿ ಸಿಲಿಂಡರ್ ಸ್ಫೋಟಗೊಂಡಿದೆ.

ಹೌದು ರಾತ್ರಿ ಅಂಗಡಿಯಲ್ಲೇ ಮಲಗಿದ್ದ ಫೈಜುಲ್​ಗೆ ಗಂಭೀರ ಗಾಯಗಳಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಫೋಟದ ತೀವ್ರತೆಗೆ ಇಡೀ ಕಟ್ಟಡದ ನಾಲ್ಕು ಅಂಗಡಿಯ ಚೇಂಬರ್​ಗಳು ಕೂಡ ನೆಲಸಮವಾಗಿದ್ದು, ಸಧ್ಯ ಪ್ರಕರಣ‌ ದಾಖಲಿಸಿಕೊಂಡಿರುವ ಸೂರ್ಯಸಿಟಿ ಪೊಲೀಸರು ಘಟನೆ ಬಗ್ಗೆ ಇನ್ನಷ್ಟು ಪರಿಶೀಲನೆ ಮಾಡುತ್ತಿದ್ದಾರೆ. ಇದೇ ಘಟನೆ ಬೆಳಿಗ್ಗೆ ಸಮಯದಲ್ಲಿ ನಡೆದಿದ್ದರೇ ಬಹಳಷ್ಟು ಸಾವು ನೋವುಗಳಾಗುವ ಸಂಭವವಿತ್ತು ಎನ್ನುವುದು ಸ್ಥಳೀಯರ ಮಾತು, ಅದೇನೆ ಇರಲಿ ಇಂತಹ ಅಕ್ರಮ ಗ್ಯಾಸ್ ಫಿಲ್ಲಿಂಗ್ ಸ್ಟೋರ್​ಗಳ ಬಾಗಿಲು ಮುಚ್ಚಿಸಿ ಜನರ ಜೀವ ಉಳಿಸಿ ಅನ್ನೋದು ಸಾರ್ವಜನಿಕರ ಅಭಿಪ್ರಾಯವಾಗಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ