AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲಾ ಬಸ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ ಬಾಲಕಿ; ಕಿಮ್ಸ್ ಆಸ್ಪತ್ರೆ ಬಳಿ ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಡೆಲ್ಲಿ ಪಬ್ಲಿಕ್ ಶಾಲಾ ಬಸ್ ಹರಿದು ಬಾಲಕಿ ಸ್ಥಳದಲ್ಲೇ  ಸಾವನ್ನಪ್ಪಿರುವ ಘಟನೆ ಬನಶಂಕರಿಯ ದೇವೇಗೌಡ ಪೆಟ್ರೋಲ್ ಬಂಕ್ ಬಳಿ ನಡೆದಿದೆ.

ಶಾಲಾ ಬಸ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ ಬಾಲಕಿ;  ಕಿಮ್ಸ್ ಆಸ್ಪತ್ರೆ ಬಳಿ ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
ಅಪಘಾತ
TV9 Web
| Edited By: |

Updated on:May 26, 2022 | 1:49 PM

Share

ಬೆಂಗಳೂರು: ಶಾಲಾ ಬಸ್ ಹರಿದು ಬಾಲಕಿ ಸ್ಥಳದಲ್ಲೇ  ಸಾವನ್ನಪ್ಪಿರುವ ಘಟನೆ ಬೆಂಗಳೂರಿನ (Bengaluru) ಬನಶಂಕರಿಯ ದೇವೇಗೌಡ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಹಾರೋಹಳ್ಳಿಯ ನಿವಾಸಿ ಕೀರ್ತನಾ(16) ಮೃತ ದುರ್ದೈವಿ.  ಬೈಕ್​ನಲ್ಲಿ ಹರ್ಷಿತಾ, ಮೃತ ಕೀರ್ತನಾ ಬರುತ್ತಿದ್ದರು. ಆಗ ಹಿಂದಿನಿಂದ ಬಂದ ಡೆಲ್ಲಿ ಪಬ್ಲಿಕ್ ಸ್ಕೂಲ್ ಬಸ್  ಬೈಕ್​ಗೆ ಡಿಕ್ಕಿ ಹೊಡೆದಿತ್ತು. ಕೆಳಗೆ ಬಿದ್ದ ಬಾಲಕಿ ಕೀರ್ತನಾ ಮೇಲೆ ಶಾಲಾ ಬಸ್ (School Bus) ಹರಿದಿದೆ. ಕೀರ್ತನಾಳನ್ನ ಹಿಂದೆ ಕೂರಿಸಿಕೊಂಡು ಹೋಗ್ತಿದ್ದ ಅಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಬನಶಂಕರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಬಾಲಕಿ ಕೀರ್ತನಾ ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ಮಗಳನ್ನ ನೆನೆದು ಕೀರ್ತನಾ ತಾಯಿ ಬಿಕ್ಕಿಬಿಕ್ಕಿ ಅಳುತ್ತಿದ್ದು, ಕಿಮ್ಸ್ ಶವಾಗಾರದ ಬಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನು ಓದಿ: ಶಾಕಿಂಗ್ ಘಟನೆ: ಅಪಾರ್ಟ್​ಮೆಂಟ್​ನಲ್ಲಿ ಶವವಾಗಿ ಪತ್ತೆಯಾದ ಯುವ ನಟಿ

ಮೃತ ಕೀರ್ತನಾ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದಿದ್ದಳು. ಮೇ 19ರಂದು ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಎಸ್​ಎಸ್​ಎಲ್​ಸಿಯಲ್ಲಿ ಶೇಕಡಾ 70ರಷ್ಟು ಅಂಕ ಗಳಿಸಿದ್ದಳು. ಇಂದು  ಪ್ರಥಮ PU ಪ್ರವೇಶಕ್ಕೆ ಅಪ್ಲಿಕೇಷನ್​ ತರಲು ಕೀರ್ತನಾ ಮತ್ತು ಕೀರ್ತನಾ ಅಕ್ಕ ಇಬ್ಬರೂ ಬೈಕ್​ನಲ್ಲಿ ಹೋಗುತ್ತಿದ್ದರು.  ಈ ವೇಳೆ ಜವರಾಯನಂತೆ ಬಂದ ಶಾಲಾ ಬಸ್ ಬೈಕ್​ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಕೆಳಗೆ ಬಿದ್ದ ಕೀರ್ತನಾ ಮೇಲೆ ಶಾಲಾ ಬಸ್ ಹರಿದಿದೆ. ಕೀರ್ತನಾ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

ಇದನ್ನು ಓದಿ: ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಚಿನ್ಮಯೀ ಆಸ್ಪತ್ರೆ ಮಾಲೀಕ | ಊಟ ಇಲ್ಲ ಅಂದಿದ್ದಕ್ಕೆ ಹೋಟೆಲ್​ಗೆ ಬೆಂಕಿಯಿಟ್ಟಿ ಕಿಡಿಗೇಡಿಗಳು

ಕೀರ್ತನಾ ಕಳೆದ 1 ತಿಂಗಳಿಂದ ಚೌಚೌ ಅಂಗಡಿಯಲಲ್ಲಿ ಕೆಲಸ ಮಾಡುತ್ತಿದ್ದಳು. ತಂದೆ ಆಟೋ ಡ್ರೈವರ್ ಆಗಿ ಕೆಲಸ ಮಾಡ್ತಿದ್ದರು. ತಾಯಿ ಕೂಡ ಮನೆ ಕೆಲಸ ಮಾಡುತ್ತಿದ್ದರು. ತಂದೆ ತಾಯಿಗೆ ಸಹಾಯ ಆಗ್ಲಿ ಅಂತ ಕೀರ್ತನಾ ಕೆಲಸಕ್ಕೆ ಹೋಗುತ್ತಿದ್ದಳು. ಕಾಲೇಜು ಆರಂಭದವರೆಗೆ ಕೆಲಸಕ್ಕೆ ಹೋಗ್ತೀನಿ ಅಂತ ಸ್ನೇಹಿತರ ಬಳಿ ಕಷ್ಟ ಹೇಳಿಕೊಂಡಿದ್ದಳು.  ಕೀರ್ತನಾ ತಂದೆ ತಾಯಿಗೆ ಮೂರು ಜನರೂ ಹೆಣ್ಣು ಮಕ್ಕಳು. ಇದಕ್ಕೆ ಬಸ್ ಚಾಲಕ ನಿರ್ಲಕ್ಷ್ಯವೇ ಕಾರಣ.ತಂದೆ ತಾಯಿಗೆ ಪರಿಹಾರ ಕೊಡಿಸಿ ಅಂತ ಮೃತ ಬಾಲಕಿ ಕುಟುಂಬಸ್ಥರ ಅಳಲು ತೋಡಿಕೊಂಡಿದ್ದಾರೆ. SSLC ಪರೀಕ್ಷೆಯ ಹಾಲ್ ಟಿಕೆಟ್ ಗಾಗಿ ಕೀರ್ತನಾ ತಾಯಿ  ತಾಳಿ ಅಡವಿಟ್ಟಿದ್ದರು.  ಪೂರ್ತಿ ಶುಲ್ಕ ಕೊಡುವವರೆಗೂ ಹಾಲ್ ಟಿಕೆಟ್ ಕೊಡೊಲ್ಲ ಅಂತ ಶಾಲೆಯ ಸಿಬ್ಬಂದಿ ಹೇಳಿದ್ದರು.  ಟಿಸಿ, ಮಾರ್ಕ್ಸ್ ಕೊಡೊಲ್ಲ ಅಂತ ಕೇವಲ 3 ಸಾವಿರಕ್ಕೆ ತಾಳಿ ಅಡವಿಟ್ಟಿದ್ದರು. ಈಗ ಮಗಳೇ ಹೋಗಿಬಿಟ್ಳು. ತಂದೆ ತಾಯಿ ತುಂಬಾ ಬಡವರು, ಕೂಲಿ ಮಾಡಿ ಮಗಳನ್ನ ಓದಿಸುತ್ತಿದ್ದರು. ಕೀರ್ತನಾ ಯಾವಾಗ್ಲೂ ನಗು ಮುಖದಿಂದ ಇರ್ತಿದ್ದಳು.  ಈ ನಗು ಮಾಯವಾಯ್ತು, ಖಾಸಗಿ ಶಾಲೆಯಿಂದ ಮಕ್ಕಳಿಗೂ ಟಾರ್ಚರ್, ಪೋಷಕರಿಗೂ ಹಿಂಸೆಯಾಗುತ್ತಿದೆ ಎಂದು  ಕೀರ್ತನಾ ಸ್ನೇಹಿತೆ ತಾಯಿ ಕಣ್ಣೀರು ಹಾಕಿದ್ದಾರೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:43 pm, Thu, 26 May 22

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ