AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳ ಮುಂದೆಯೇ ಪತ್ನಿಗೆ 11 ಬಾರಿ ಇರಿದು ಕೊಂದ ಪತಿ: ಇಷ್ಟಪಟ್ಟು ಮದ್ವೆಯಾಗಿದ್ದವಳನ್ನ ಹತ್ಯೆಗೈದಿದ್ಯಾಕೆ?

ಬೆಂಗಳೂರಿನ ಸುಂಕದಕಟ್ಟೆ ಬಸ್ ನಿಲ್ದಾಣದಲ್ಲಿ ರೇಖಾ ಎಂಬ ಮಹಿಳೆಯನ್ನು ಮಗಳ ಕಣ್ಣೆದುರೇ ಕೊಲೆ ಮಾಡಿದ್ದಾರೆ. ಲೋಹಿತಾಶ್ವ ಕೊಲೆ ಮಾಡಿದವ. ಕೆಲವು ತಿಂಗಳ ಹಿಂದೆ ರೇಖಾಳನ್ನು ಮದುವೆಯಾಗಿದ್ದ ಲೋಹಿತಾಶ್ವ, ಆಕೆಯ 12 ವರ್ಷದ ಮಗಳು ಅವರ ಮನೆಯಲ್ಲಿರುವುದನ್ನು ವಿರೋಧಿಸಿ ಜಗಳವಾಡುತ್ತಿದ್ದ. ಇದೇ ಉದ್ವೇಗದಲ್ಲಿ ಮಗಳ ಕಣ್ಣೆದುರೇ ರೇಖಾಳ ಹತ್ಯೆಗೈದಿದ್ದಾನೆ.

ಮಗಳ ಮುಂದೆಯೇ ಪತ್ನಿಗೆ 11 ಬಾರಿ ಇರಿದು ಕೊಂದ ಪತಿ: ಇಷ್ಟಪಟ್ಟು ಮದ್ವೆಯಾಗಿದ್ದವಳನ್ನ ಹತ್ಯೆಗೈದಿದ್ಯಾಕೆ?
Lohitashwa And Rekha
ಭಾವನಾ ಹೆಗಡೆ
|

Updated on: Sep 23, 2025 | 6:31 PM

Share

ಬೆಂಗಳೂರು, (ಸೆಪ್ಟೆಂಬರ್ 23: ಬೆಂಗಳೂರಿನ ಸುಂಕದಕಟ್ಟೆ ಬಸ್ ನಿಲ್ದಾಣದ ಬಳಿ ವಿವಾಹಿತ ಮಹಿಳೆಯೊಬ್ಬಳನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಆಕೆಯ 12 ವರ್ಷದ ಮಗಳೆದುರಿಗೇ ಈ ಭೀಕರ ಘಟನೆ ನಡೆದಿದೆ. ಕೊಲೆ ಮಾಡಿದಾತನ ಹೆಸರು ಲೋಹಿತಾಶ್ವ ಅಲಿಯಾಸ್ ಲೋಕೇಶ್. ರೇಖಾ(35) ಕೊಲೆಯಾದ ದುರ್ದೈವಿ. ಹಂತಕ ಲೋಹಿತಾಶ್ವ ಮತ್ತು ಕೊಲೆಯಾದ ರೇಖಾ ಇಬ್ಬರೂ ಗಂಡ ಹೆಂಡತಿಯಾಗಿದ್ದು, ಆಕೆಯ ಮಗಳ ವಿಷಯದಲ್ಲಿ ನಡೆದ ಕಲಹ ಕೊಲೆಯಲ್ಲಿ ದುರಂತ ಅಂತ್ಯ ಕಂಡಿದೆ.

ಆಗಿದ್ದೇನು?

ಹಂತಕ ಲೋಹಿತಾಶ್ವ ಮತ್ತು ರೇಖಾ ಇತ್ತೀಚೆಗಷ್ಟೆ ಮದುವೆಯಾಗಿದ್ದರು. ಇಬ್ಬರಿಗೂ ಇದು ಎರಡನೇ ಮದುವೆಯಾಗಿತ್ತು. ರೇಖಾಗೆ ಇಬ್ಬರು ಹೆಣ್ಣುಮಕ್ಕಳಿದ್ದು, ಕಿರಿಯವಳನ್ನು ಆಕೆಯ ತಂದೆ ತಾಯಿಯ ಬಳಿ ಬಿಟ್ಟಿದ್ದಳು. ಆದರೆ  12 ವರ್ಷದ  ಹಿರಯ ಮಗಳನ್ನು ಮಾತ್ರ ತನ್ನೊಟ್ಟಿಗೆ ಇರಿಸಿಕೊಂಡಿದ್ದಳು. ಇದರಿಂದಾಗಿಯೇ ರೇಖಾ ಮತ್ತು ಹಂತಕನ ನಡುವೆ ವೈಮನಸ್ಸುಂಟಾಗಿತ್ತು. ಇದರ ಸಲುವಾಗಿಯೇ ಸುಂಕದಕಟ್ಟೆ ಬಸ್ ನಿಲ್ದಾಣಕ್ಕೆ ಬಂದ ತಾಯಿಯನ್ನು ಮಗಳ ಕಣ್ಣೆದುರೇ ಭೀಕರವಾಗಿ ಹತ್ಯೆಗೈದಿದ್ದಾನೆ.

ಈ ಪ್ರಕರಣ ಸೋಮವಾರ ಬೆಳಿಗ್ಗೆ 11.30 ರ ಸುಮಾರಿಗೆ ಸಾರ್ವಜನಿಕರ ಕಣ್ಣೆದುರಿಗೇ ನಡೆದಿದೆ. ರೇಖಾಳ ಎದೆಗೆ ಮತ್ತು ಹೊಟ್ಟಗೆ ಸುಮಾರು 11 ಬಾರಿ ಚಾಕುವಿನಿಂದ ಇರಿದ ಲೋಕೇಶ್​ನನ್ನು ಸಾರ್ವಜನಿಕರು ತಡೆಯಲು ಪ್ರಯತ್ನ ಪಟ್ಟರೂ ಲೆಕ್ಕಿಸದೆ ಅವರೆಡೆಗೆ ಚಾಕು ಎಸೆದು ಪರಾರಿಯಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸದ್ಯ ಹಂತಕ ಲೋಹಿತಾಶ್ವನನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ಇಷ್ಟ ಪಟ್ಟು ಮದ್ವೆಯಾಗಿದ್ದವಳನ್ನು ಕೊಂದಿದ್ಯಾಕೆ?

ತುಮಕೂರು ತಾಲೂಕಿನ ಶಿರಾ ಮೂಲದ ಲೋಹಿತಾಶ್ವ, ಹಾಸನದ ಚನ್ನರಾಯಪಟ್ಟನದ ರೇಖಾಳನ್ನು ತನ್ನ ಸ್ನೇಹಿತರ ಮೂಲಕ ಪರಿಚಯ ಮಾಡಿಕೊಂಡಿದ್ದ. ರೇಖಾ ಕಾಲ್ ಸೆಂಟರ್ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದಳು. ಅವರ ಕಛೇರಿಯಲ್ಲೇ ಲೋಹಿತಾಶ್ವ ಕಾರ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ.  ಮುರಿದು ಬಿದ್ದ ಮದುವೆಯನ್ನು ಬದಿಗಿಟ್ಟು ಹೊಸ ಜೀವನವನ್ನು ಶುರು ಮಾಡಲು ಬಯಸಿದ್ದರು. ಒಂದೂ ವರೆ ವರ್ಷದಿಂದ ಲಿವಿನ್ ಸಂಬಂಧದಲ್ಲಿದ್ದ ಇಬ್ಬರೂ 3 ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದರು. ಬಳಿಕ ಸುಂಕದಕಟ್ಟೆಯ ಬಳಿಯೇ ಬಾಡಿಗೆ ಮನೆಯೊಂದರಲ್ಲಿ ಜೀವಿಸುತ್ತಿದ್ದರು. ರೇಖಾಳ ಹಿರಿಯ ಮಗಳು ಅವಿಬ್ಬರ ಜೊತೆ ಇರುವುದು ಲೋಹಿತಾಶ್ವನಿಗೆ ಇಷ್ಟವಿರಲಿಲ್ಲ. ಮಗಳನ್ನು ಬೇರೆ ಕಡೆ ಕಳುಹಿಸು ಎಂದು ರೇಖಾಗೆ ಸಾಕಷ್ಟು ಬಾರಿ ದುಂಬಾಲು ಬಿದ್ದಿದ್ದ. ಆದರೆ ರೇಖಾ ಮಾತ್ರ ಮಗಳನ್ನು ಕಳುಹಿಸಲು ಒಪ್ಪಿರಲಿಲ್ಲ. ಈ ಕಾರಣಕ್ಕಾಗಿಯೇ ಪದೇ ಪದೇ ಇಬ್ಬರೂ ಜಗಳವಾಡುತ್ತಿದ್ದರು.ಕೊಲೆಯಾದ ದಿನ ಬೆಳಿಗ್ಗೆಯೂ ರೇಖಾ ಅವನೊಂದಿಗೆ ಜಗಳವಾಡಿಕೊಂಡೇ ಬಂದಿದ್ದಳು. ಇದೇ ಉದ್ವೇಗದಲ್ಲಿ ಬಸ್ ನಿಲ್ಧಾಣಕ್ಕೆ ಬಂದ ಹಂತಕ ಹೀನ ಕೃತ್ಯವೆಸಗಿದ್ದಾನೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Bhavana Hegde
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್