AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರ ವಿರುದ್ಧ ದೂರಿದ್ದಕ್ಕೆ ಸುಳ್ಳು ಕೇಸ್​ನಲ್ಲಿ ಫಿಟ್​: ಜಡ್ಜ್​ ಮುಂದೆ ಅಳಲು ತೋಡಿಕೊಂಡ KPTCL ಉದ್ಯೋಗಿ

ಪೊಲೀಸರು ತಮ್ಮ ವಿರೋಧಿಗಳನ್ನು ಯಾವುದೋ ಒಂದು ಸುಳ್ಳು ಕೇಸ್​ನಲ್ಲಿ ಫಿಟ್ ಮಾಡುತ್ತಾರೆ ಅಂತೆಲ್ಲಾ ಮಾತುಗಳು ಕೇಳಿದ್ದೇವೆ. ಸಿನಿಮಾದಲ್ಲೂ ಸಹ ನೋಡಿದ್ದೇವೆ. ಅದರಂತೆ ಇಲ್ಲಿ ರಿಯಲ್​ ಆಗಿ ವ್ಯಕ್ತಿಯೊಬ್ಬರನ್ನು ಪೊಲೀಸರು ಸುಳ್ಳು ಗಾಂಜಾ ಕೇಸ್​ನಲ್ಲಿ ಫಿಟ್​ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಈ ಬಗ್ಗೆ ಸ್ವತಃ ಬಂಧನವಾಗಿದ್ದ ವ್ಯಕ್ತಿ ಕೋರ್ಟ್​ನಲ್ಲಿ ಜಡ್ಜ್​ ಮುಂದೆ ಪೊಲೀಸರ ಅಸಲಿ ಮುಖವನ್ನು ಬಿಚ್ಚಿಟ್ಟಿದ್ದಾರೆ. ಏನಿದು ಪ್ರಕರಣ ಎನ್ನುವ ವಿವರ ಇಲ್ಲಿದೆ.

ಪೊಲೀಸರ ವಿರುದ್ಧ ದೂರಿದ್ದಕ್ಕೆ ಸುಳ್ಳು ಕೇಸ್​ನಲ್ಲಿ ಫಿಟ್​: ಜಡ್ಜ್​ ಮುಂದೆ ಅಳಲು ತೋಡಿಕೊಂಡ KPTCL ಉದ್ಯೋಗಿ
ಹೈಕೋರ್ಟ್​​
Ramesha M
| Updated By: ರಮೇಶ್ ಬಿ. ಜವಳಗೇರಾ|

Updated on:Aug 06, 2024 | 8:00 PM

Share

ಬೆಂಗಳೂರು, (ಆಗಸ್ಟ್​ 06): ಪೊಲೀಸರ ವಿರುದ್ಧ ದೂರಿದ್ದಕ್ಕೆ ಸುಳ್ಳು ಕೇಸ್ ಹಾಕಿ ಬಂಧನ ಮಾಡಿದ್ದಾರೆ ಎಂದು ಕೆಪಿಟಿಸಿಎಲ್ ಉದ್ಯೋಗಿಯೊಬ್ಬರು ಗಂಭೀರ ಅರೋಪ ಮಾಡಿದ್ದಾರೆ. ಹೌದು…ಪೊಲೀಸರು ಗಾಂಜಾ ಕೇಸ್ ಹಾಕಿದ್ದಾರೆ ಎಂದು ಕೆಪಿಟಿಸಿಎಲ್ ಇಂಜಿನಿಯರ್ ಆಗಿರುವ ಶಾಂತಕುಮಾರಸ್ವಾಮಿ ಎನ್ನುವರು ಹೈಕೋರ್ಟ್​ ಮೊರಹೋಗಿದ್ದು, ಹೈಕೋರ್ಟ್​ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ ಮುಂದೆ ಪೊಲೀಸರಿಂದ ತಮಗಾದ ಕಿರುಕುಳವನ್ನು ಬಿಚ್ಚಿಟ್ಟಿದ್ದಾರೆ. ಇದನ್ನು ಆಲಿಸಿದ ಹೈಕೋರ್ಟ್​, ಕಿರುಕುಳ ನೀಡದಂತೆ ಪೊಲೀಸರಿಗೆ ಹೇಳುವಂತೆ ಎಸ್​​ಪಿಪಿಗೆ ಸೂಚನೆ ನೀಡಿದೆ. ಅಲ್ಲದೇ ಆರೋಪ ಸತ್ಯವಾದರೆ ಡಿವೈಎಸ್​ಪಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದೆ.

ಪೊಲೀಸರ ವಿರುದ್ಧ ಮಾಡಿದ ಆರೋಪಗಳೇನು?

ಮದುವೆ ರದ್ದಾಗಿದ್ದಕ್ಕೆ ದುಡ್ಡು ಕೊಡುವಂತೆ ಶಾಸಕ ಹಾಗೂ‌ ಪೊಲೀಸರು ಬೆದರಿಕೆ ಹಾಕಿದ್ದಾರೆ. ಹೀಗಾಗಿ ಪೊಲೀಸರ ವಿರುದ್ಧ ಲೋಕಾಯುಕ್ತ ಸಂಸ್ಥೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಗಾಂಜಾ ಕೇಸ್ ಹಾಕಿ ಬಂಧಿಸಿದ್ದಾರೆ. ಅಲ್ಲದೇ ಪೊಲೀಸರು ಡೋರ್ ಕ್ಲೋಸ್ ಮಾಡಿ ಹೊಡೆದಿದ್ದಾರೆ ಎಂದು ಸಾಗರ ಡಿವೈಎಸ್​ಪಿ ಗೋಪಾಲಕೃಷ್ಣ ನಾಯಕ್ ವಿರುದ್ಧ‌ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ಗೆ ಕೊಟ್ಟೇ ಕೊಡ್ತಾರೆ: ರಾಜ್ಯಪಾಲರ ಭೇಟಿ ಬಳಿಕ ಅಬ್ರಾಹಂ ಸ್ಫೋಟಕ ಹೇಳಿಕೆ

ಅಲ್ಲದೇ ಎನ್​ಕೌಂಟರ್ ಮಾಡುವುದಾಗಿ ಗನ್ ಇಟ್ಟು ಬೆದರಿಸಿದ್ದಾರೆ. ಪರ್ಸ್,‌ ಸಾಕ್ಷ್ಯವಿದ್ದ ಮೊಬೈಲ್‌ ಕಿತ್ತಿಟ್ಟುಕೊಂಡಿದ್ದಾರೆ. ಸಾಲದಕ್ಕೆ ರೌಡಿಶೀಟರ್ ಮಾಡಿಸಿ ಕೆಲಸದಿಂದ ಸಸ್ಪೆಂಡ್ ಮಾಡಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಕೆಪಿಟಿಸಿಎಲ್ ಇಂಜಿನಿಯರ್ ಶಾಂತಕುಮಾರಸ್ವಾಮಿ ಎಂಬುವರು ಹೈಕೋರ್ಟ್​ ನ್ಯಾಯಾಧೀಶರ ಮುಂದೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಈ ಆರೋಪಗಳನ್ನು ಕೇಳಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನರಿದ್ದ ಹೈಕೋರ್ಟ್ ಪೀಠ, ಆರೋಪ ಸತ್ಯವಾದರೆ ಡಿವೈಎಸ್​ಪಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದೆ.

ಪ್ರಕರಣದ ಹಿನ್ನೆಲೆ

ಕೆಪಿಟಿಸಿಎಲ್​ ಇಂಜಿನಿಯರ್ ಆಗಿರುವ ಶಾಂತಕುಮಾರಸ್ವಾಮಿ  ಅವರಿಗೆ ಮದುವೆ ಫಿಕ್ಸ್ ಆಗಿದ್ದು, ಬಳಿಕ ಕೆಲ ಕಾರಣಾಂತರಗಳಿಂದ ಮದುವೆ ರದ್ದಾಗಿದೆ. ಈ ಸಂಬಂಧ ಸಾಗರ ಶಾಸಕ ಮತ್ತು ಪೊಲೀಸರು ಸೇರಿಕೊಂಡು ಮದುವೆ ರದ್ದು ಮಾಡಿಕೊಂಡಿದ್ದಕ್ಕೆ ಹಣ ನೀಡಬೇಕೆಂದಿದ್ದಾರೆ. ಇದನ್ನು ರೆಕಾರ್ಡ್​ ಮಾಡಿಕೊಂಡು ಶಾಂತಕುಮಾರಸ್ವಾಮಿ ಅವರು ಲೋಕಾಯುಕ್ತಗೆ ದೂರು ನೀಡಿದ್ದಾರೆ. ಇದರಿಂದ ಆಕ್ರೋಶಗೊಂಡ ಪೊಲೀಸರು, ಮದುವೆ ಫಿಕ್ಸ್​ ಆಗಿದ್ದ ಯುವತಿ ಕಡೆಯಿಂದ ದೂರು ಕೊಡಿಸಿದ್ದಾರೆ. ಬಳಿಕ ಶಾಂತಕುಮಾರಸ್ವಾಮಿ ತಮ್ಮ ವಿರುದ್ಧ ದೂರನ್ನು ರದ್ದುಗೊಳಿಸುವಂತೆ ಹೈಕೋರ್ಟ್​ ಮೆಟ್ಟಿಲೇರಿದ್ದಾರೆ. ಇದನ್ನು ಗಮನಿಸಿದ ಸಾಗರ ಪೊಲೀಸರು, ಶಾಂತಕುಮಾರಸ್ವಾಮಿ ವಿರುದ್ಧ ಗಾಂಜಾ ಕೇಸ್ ಹಾಕಿ ಬಂಧಿಸಿದ್ದರು. ನಂತರ ಜೈಲಿಗೆ ಹೋಗಿ ಬಂದ ಶಾಂತಕುಮಾರಸ್ವಾಮಿ ತಮ್ಮ ಮೇಲಿನ ಪ್ರಕರಣವನ್ನು ರದ್ದು ಕೋರಿ ಹೈಕೋರ್ಟ್​ಗೆ ಮನವಿ ಸಲ್ಲಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:13 pm, Tue, 6 August 24

ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?