AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್‌ಗೆ ಲಾರಿ ಡಿಕ್ಕಿ; ಪತಿ ಸಾವು, ಪತ್ನಿ ಕಾಲುಗಳು ಕಟ್‌, ಮಗು ಪಾರು

ರಸ್ತೆಯಲ್ಲಿ ಸಂಚರಿಸುವಾಗ ಎಷ್ಟೇ ಜಾಗೃತರಾಗಿದ್ದರೂ ಕಡಿಮೆಯೇ, ಅದರಂತೆ ಇದೀಗ ಬೆಂಗಳೂರಿನ ಬೊಮ್ಮಸಂದ್ರ ಫ್ಲೈಓವರ್ ಬಳಿ ಭೀಕರ ಅಪಘಾತವೊಂದು ನಡೆದಿದ್ದು, ದುರ್ಘಟನೆಯಲ್ಲಿ ಬೈಕ್‌ ಸವಾರ ಸಾವನ್ನಪ್ಪಿದ್ದು, ಪತ್ನಿಯ ಎರಡು‌ ಕಾಲು ಕಟ್ ಆಗಿದೆ. ಅದೃಷ್ಟವಶಾತ್​ ಬೈಕ್​ನಲ್ಲಿದ್ದ ಮಗು ಪಾರಾಗಿದೆ.

ಬೈಕ್‌ಗೆ ಲಾರಿ ಡಿಕ್ಕಿ; ಪತಿ ಸಾವು, ಪತ್ನಿ ಕಾಲುಗಳು ಕಟ್‌, ಮಗು ಪಾರು
ಬೈಕ್‌ಗೆ ಲಾರಿ ಡಿಕ್ಕಿ
ರಾಮು, ಆನೇಕಲ್​
| Edited By: |

Updated on:Aug 04, 2024 | 6:12 PM

Share

ಬೆಂಗಳೂರು, ಆ.04: ಲಾರಿ ಡಿಕ್ಕಿಯಾಗಿ ಬೈಕ್‌ ಸವಾರ ಸಾವನ್ನಪ್ಪಿದ್ದು, ಪತ್ನಿಯ ಎರಡು‌ ಕಾಲು ಕಟ್ ಆದ ದಾರುಣ ಘಟನೆ ಬೆಂಗಳೂರಿನ ಬೊಮ್ಮಸಂದ್ರ ಫ್ಲೈಓವರ್ ಬಳಿ ನಡೆದಿದೆ. ಅದೃಷ್ಟವಶಾತ್​ ಸಣ್ಣ ಪುಟ್ಟ ಗಾಯಗಳೊಂದಿಗೆ ಬೈಕ್‌ನಲ್ಲಿದ್ದ ಮಗು ಪಾರಾಗಿದೆ. ಇನ್ನು ಗಾಯಗೊಂಡಿದ್ದವರನ್ನು ಕೂಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಬಳಿಕ ಲಾರಿ ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದು, ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಅನಾರೋಗ್ಯದಿಂದ ಬಾಗಲಕೋಟೆ ಜಿಲ್ಲೆಯ ಯೋಧ ಸಾವು

ಬಾಗಲಕೋಟೆ: ಉಸಿರಾಟ ಸಮಸ್ಯೆಯಿಂದ ಅನಾರೋಗ್ಯಕ್ಕೀಡಾಗಿದ್ದ ಬಾಗಲಕೋಟೆ ಜಿಲ್ಲೆಯ ಯೋಧ ರಾಜಸ್ಥಾನದ ಜೋಧ್‌ಪುರ್ ಬೆಟಾಲಿಯನ್​ನಲ್ಲಿ ಸಾವನ್ನಪ್ಪಿದ್ದಾರೆ. ಉಸಿರಾಟ ಸಮಸ್ಯೆಯಿಂದ ಹನುಮಂತ ತಳವಾರ(32) ಕೊನೆಯುಸಿರೆಳೆದಿದ್ದಾರೆ. ಬಾಗಲಕೋಟೆ ತಾಲೂಕಿನ ಖಜ್ಜಿಡೋಣಿ ಗ್ರಾಮದ ನಿವಾಸಿಯಾದ ಅವರು, ‘2011ರಲ್ಲಿ ಸೇನೆಗೆ ಸೇರ್ಪಡೆ ಆಗಿದ್ದರು. ನಾಳೆ(ಆ.05) ಸಂಜೆ ವೇಳೆಗೆ ಅಂತ್ಯಸಂಸ್ಕಾರ ನಡೆಯುವ ಸಾಧ್ಯತೆಯಿದೆ.

ಇದನ್ನೂ ಓದಿ:ರಾಯಚೂರು: ಸೇತುವೆ ತಡೆಗೋಡೆಗೆ ಬಸ್ ಡಿಕ್ಕಿ; 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಆಯತಪ್ಪಿ ಬೈಕ್​ ಸಮೇತ ನಾಲೆಗೆ ಬಿದ್ದಿದ್ದ ಸವಾರ ಶವವಾಗಿ ಪತ್ತೆ

ಬೆಳಗಾವಿ: ಬೆಳಗಾವಿ ತಾಲೂಕಿನ ಆಲತಗಾ ಬಳಿ ಸಹೋದರರು ಆಯತಪ್ಪಿ ಬೈಕ್ ಸಮೇತ ನಾಲೆಗೆ ಬಿದ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನೀರಲ್ಲಿ ಕಣ್ಮರೆಯಾಗಿದ್ದ ಓಂಕಾರ ಪಾಟೀಲ್ ಶವವಾಗಿ ಪತ್ತೆಯಾಗಿದ್ದಾನೆ. ನಿರಂತರ ಕಾರ್ಯಾಚರಣೆ ನಡೆಸಿ ಎಸ್‌ಡಿಆರ್‌ಎಫ್ ತಂಡ ಶವ ಹೊರತೆಗೆದಿದೆ. ನಿನ್ನೆ(ಆ.03) ತಡರಾತ್ರಿ ಬೈಕ್ ಮೇಲೆ ಹೊರಟಾಗ ಓಂಕಾರ ಪಾಟೀಲ್, ಜ್ಯೋತಿನಾಥ ಪಾಟೀಲ್ ಎಂಬ ಸಹೋದರರಲ್ಲಿ ಆಯತಪ್ಪಿ ನಾಲೆಗೆ ಬಿದ್ದಿದ್ದರು. ನಾಲೆಗೆ ಬೀಳುತ್ತಿದ್ದಂತೆ ಜ್ಯೋತಿನಾಥ ಪಾಟೀಲ್ ಈಜಿ ದಡ ಸೇರಿದ್ದ. ನೀರಲ್ಲಿ ಬೈಕ್‌ ಜೊತೆಗೆ ಕಣ್ಮರೆಯಾದ್ದ ಓಂಕಾರ ಪಾಟೀಲ್ ಇಂದು ಶವವಾಗಿ ಪತ್ತೆಯಾಗಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:06 pm, Sun, 4 August 24

Follow Us
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್
ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ
ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?