AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್‌ಗೆ ಲಾರಿ ಡಿಕ್ಕಿ; ಪತಿ ಸಾವು, ಪತ್ನಿ ಕಾಲುಗಳು ಕಟ್‌, ಮಗು ಪಾರು

ರಸ್ತೆಯಲ್ಲಿ ಸಂಚರಿಸುವಾಗ ಎಷ್ಟೇ ಜಾಗೃತರಾಗಿದ್ದರೂ ಕಡಿಮೆಯೇ, ಅದರಂತೆ ಇದೀಗ ಬೆಂಗಳೂರಿನ ಬೊಮ್ಮಸಂದ್ರ ಫ್ಲೈಓವರ್ ಬಳಿ ಭೀಕರ ಅಪಘಾತವೊಂದು ನಡೆದಿದ್ದು, ದುರ್ಘಟನೆಯಲ್ಲಿ ಬೈಕ್‌ ಸವಾರ ಸಾವನ್ನಪ್ಪಿದ್ದು, ಪತ್ನಿಯ ಎರಡು‌ ಕಾಲು ಕಟ್ ಆಗಿದೆ. ಅದೃಷ್ಟವಶಾತ್​ ಬೈಕ್​ನಲ್ಲಿದ್ದ ಮಗು ಪಾರಾಗಿದೆ.

ಬೈಕ್‌ಗೆ ಲಾರಿ ಡಿಕ್ಕಿ; ಪತಿ ಸಾವು, ಪತ್ನಿ ಕಾಲುಗಳು ಕಟ್‌, ಮಗು ಪಾರು
ಬೈಕ್‌ಗೆ ಲಾರಿ ಡಿಕ್ಕಿ
ರಾಮು, ಆನೇಕಲ್​
| Edited By: |

Updated on:Aug 04, 2024 | 6:12 PM

Share

ಬೆಂಗಳೂರು, ಆ.04: ಲಾರಿ ಡಿಕ್ಕಿಯಾಗಿ ಬೈಕ್‌ ಸವಾರ ಸಾವನ್ನಪ್ಪಿದ್ದು, ಪತ್ನಿಯ ಎರಡು‌ ಕಾಲು ಕಟ್ ಆದ ದಾರುಣ ಘಟನೆ ಬೆಂಗಳೂರಿನ ಬೊಮ್ಮಸಂದ್ರ ಫ್ಲೈಓವರ್ ಬಳಿ ನಡೆದಿದೆ. ಅದೃಷ್ಟವಶಾತ್​ ಸಣ್ಣ ಪುಟ್ಟ ಗಾಯಗಳೊಂದಿಗೆ ಬೈಕ್‌ನಲ್ಲಿದ್ದ ಮಗು ಪಾರಾಗಿದೆ. ಇನ್ನು ಗಾಯಗೊಂಡಿದ್ದವರನ್ನು ಕೂಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಬಳಿಕ ಲಾರಿ ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದು, ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಅನಾರೋಗ್ಯದಿಂದ ಬಾಗಲಕೋಟೆ ಜಿಲ್ಲೆಯ ಯೋಧ ಸಾವು

ಬಾಗಲಕೋಟೆ: ಉಸಿರಾಟ ಸಮಸ್ಯೆಯಿಂದ ಅನಾರೋಗ್ಯಕ್ಕೀಡಾಗಿದ್ದ ಬಾಗಲಕೋಟೆ ಜಿಲ್ಲೆಯ ಯೋಧ ರಾಜಸ್ಥಾನದ ಜೋಧ್‌ಪುರ್ ಬೆಟಾಲಿಯನ್​ನಲ್ಲಿ ಸಾವನ್ನಪ್ಪಿದ್ದಾರೆ. ಉಸಿರಾಟ ಸಮಸ್ಯೆಯಿಂದ ಹನುಮಂತ ತಳವಾರ(32) ಕೊನೆಯುಸಿರೆಳೆದಿದ್ದಾರೆ. ಬಾಗಲಕೋಟೆ ತಾಲೂಕಿನ ಖಜ್ಜಿಡೋಣಿ ಗ್ರಾಮದ ನಿವಾಸಿಯಾದ ಅವರು, ‘2011ರಲ್ಲಿ ಸೇನೆಗೆ ಸೇರ್ಪಡೆ ಆಗಿದ್ದರು. ನಾಳೆ(ಆ.05) ಸಂಜೆ ವೇಳೆಗೆ ಅಂತ್ಯಸಂಸ್ಕಾರ ನಡೆಯುವ ಸಾಧ್ಯತೆಯಿದೆ.

ಇದನ್ನೂ ಓದಿ:ರಾಯಚೂರು: ಸೇತುವೆ ತಡೆಗೋಡೆಗೆ ಬಸ್ ಡಿಕ್ಕಿ; 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಆಯತಪ್ಪಿ ಬೈಕ್​ ಸಮೇತ ನಾಲೆಗೆ ಬಿದ್ದಿದ್ದ ಸವಾರ ಶವವಾಗಿ ಪತ್ತೆ

ಬೆಳಗಾವಿ: ಬೆಳಗಾವಿ ತಾಲೂಕಿನ ಆಲತಗಾ ಬಳಿ ಸಹೋದರರು ಆಯತಪ್ಪಿ ಬೈಕ್ ಸಮೇತ ನಾಲೆಗೆ ಬಿದ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನೀರಲ್ಲಿ ಕಣ್ಮರೆಯಾಗಿದ್ದ ಓಂಕಾರ ಪಾಟೀಲ್ ಶವವಾಗಿ ಪತ್ತೆಯಾಗಿದ್ದಾನೆ. ನಿರಂತರ ಕಾರ್ಯಾಚರಣೆ ನಡೆಸಿ ಎಸ್‌ಡಿಆರ್‌ಎಫ್ ತಂಡ ಶವ ಹೊರತೆಗೆದಿದೆ. ನಿನ್ನೆ(ಆ.03) ತಡರಾತ್ರಿ ಬೈಕ್ ಮೇಲೆ ಹೊರಟಾಗ ಓಂಕಾರ ಪಾಟೀಲ್, ಜ್ಯೋತಿನಾಥ ಪಾಟೀಲ್ ಎಂಬ ಸಹೋದರರಲ್ಲಿ ಆಯತಪ್ಪಿ ನಾಲೆಗೆ ಬಿದ್ದಿದ್ದರು. ನಾಲೆಗೆ ಬೀಳುತ್ತಿದ್ದಂತೆ ಜ್ಯೋತಿನಾಥ ಪಾಟೀಲ್ ಈಜಿ ದಡ ಸೇರಿದ್ದ. ನೀರಲ್ಲಿ ಬೈಕ್‌ ಜೊತೆಗೆ ಕಣ್ಮರೆಯಾದ್ದ ಓಂಕಾರ ಪಾಟೀಲ್ ಇಂದು ಶವವಾಗಿ ಪತ್ತೆಯಾಗಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:06 pm, Sun, 4 August 24

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?