AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ನೋಡ ನೋಡುತ್ತಿದ್ದಂತೆ 4 ವರ್ಷದ ಬಾಲಕಿ ಮೇಲೆ ಹರಿದ ಲಗೇಜ್ ಆಟೋ! ಚಾಲಕ ಅರೆಸ್ಟ್

ಹ್ಯಾಂಡ್ ಬ್ರೇಕ್ ಹಾಕದೆ ಹಿನ್ನೆಲೆ ಮಗುವಿನ ಮೇಲೆ ಆಟೋ ಹರಿದಿದೆ. ಕೂಡಲೇ ಆಟೋ ಚಾಲಕ ಆಸ್ಪತ್ರೆಗೆ ಸಾಗಿಸಿದ್ದ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬೆಂಗಳೂರಿನಲ್ಲಿ ನೋಡ ನೋಡುತ್ತಿದ್ದಂತೆ 4 ವರ್ಷದ ಬಾಲಕಿ ಮೇಲೆ ಹರಿದ ಲಗೇಜ್ ಆಟೋ! ಚಾಲಕ ಅರೆಸ್ಟ್
ಆಟೋ ಬಾಲಕಿಯ ಮೇಲೆ ಹರದಿ ಆಟೋ
TV9 Web
| Updated By: sandhya thejappa|

Updated on:Mar 19, 2022 | 5:01 PM

Share

ಬೆಂಗಳೂರು: ಆಟೋ (Auto) ಚಾಲಕನ ನಿರ್ಲಕ್ಷ್ಯಕ್ಕೆ ಬಾಲಕಿ (Girl) ಬಲಿಯಾಗಿರುವ ಘಟನೆ ಕಾಮಾಕ್ಷಿಪಾಳ್ಯ ಸಂಚಾರಿ ಠಾಣಾ ವ್ಯಾಪ್ತಿಯ ಕಾವೇರಿಪುರದಲ್ಲಿ ನಡೆದಿದೆ. ಮಾ.17ರಂದು ಈ ಘಟನೆ ನಡೆದಿದ್ದು, ಭುವನ (4) ಎಂಬ ನಾಲ್ಕು ವರ್ಷದ ಬಾಲಕಿ ಮೃತಪಟ್ಟಿದೆ. ಬಾಲಕಿ ತಾಯಿಯೊಂದಿಗೆ ರಸ್ತೆಯಲ್ಲಿ ಎಳನೀರು ಕುಡಿಯುತ್ತಿದ್ದಳು. ಈ ವೇಳೆ ಪಕ್ಕದಲ್ಲೇ ನಿಂತಿದ್ದ ಗ್ಯಾಸ್ ಸಿಲಿಂಡರ್ ತುಂಬಿದ್ದ ಲಗೇಜ್ ಆಟೋ ಬಂದಿದೆ. ಹ್ಯಾಂಡ್ ಬ್ರೇಕ್ ಹಾಕದೆ ಚಾಲಕ ಆಟೋದಿಂದ ಇಳಿದಿದ್ದಾನೆ. ರಸ್ತೆ ಇಳಿಜಾರಿನಲ್ಲಿ ಆಟೋ ಮುಂದಕ್ಕೆ ಚಲಾಯಿಸಿದೆ.

ಹ್ಯಾಂಡ್ ಬ್ರೇಕ್ ಹಾಕದೆ ಹಿನ್ನೆಲೆ ಮಗುವಿನ ಮೇಲೆ ಆಟೋ ಹರಿದಿದೆ. ಕೂಡಲೇ ಆಟೋ ಚಾಲಕ ಆಸ್ಪತ್ರೆಗೆ ಸಾಗಿಸಿದ್ದ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸರು ಆರೋಪಿ ಚಾಲಕ ಧನಂಜಯನನ್ನು ಬಂಧಿಸಿದ್ದಾರೆ.

ಆನೆ ದಂತಗಳನ್ನ ಸ್ಮಗ್ಲಿಂಗ್ ಮಾಡುತ್ತಿದ್ದ ಆರೋಪಿಗಳು ಅಂದರ್!: ಆನೆ ದಂತಗಳನ್ನ ಸ್ಮಗ್ಲಿಂಗ್ ಮಾಡುತ್ತಿದ್ದ ಆರೋಪಿಗಳು ಅರೆಸ್ಟ್ ಆಗಿದ್ದಾರೆ. ಸಿ ಕೆ ಅಚ್ಚುಕಟ್ಟು ಪೊಲೀಸರು ಮೂರು ಮಂದಿ ಸ್ಮಗ್ಲರ್​ಗಳನ್ನ ಬಂಧಿಸಿದ್ದಾರೆ.ಚಂದೇಗೌಡ, ಸೋಮಲಿಂಗಪ್ಪ, ಪ್ರವೀಣ್ ಗುಳೆದ್ ಬಂಧಿತ ಆರೋಪಿಗಳು. ಬಂಧಿತರಿಂದ ಎರೆಡು ಆನೆ ದಂತಗಳು ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ಪ್ರಕರಣ ದಾಖಲಾಗಿದೆ.

ಕೊಲೆ ಸುಪಾರಿ ತೆಗೆದುಕೊಂಡಿದ್ದ ಅರೋಪಿಗಳು ಅರೆಸ್ಟ್!: ಕೊಲೆ ಮಾಡುವುದಕ್ಕೆ ಸುಪಾರಿ ತೆಗೆದುಕೊಂಡಿದ್ದ ಅರೋಪಿಗಳನ್ನ ಅರೆಸ್ಟ್ ಮಾಡಿದ್ದಾರೆ. ಜೈಲಿನಲ್ಲಿದ್ದುಕೊಂಡೇ ಕಿಡ್ನ್ಯಾಪ್ ಮಾಡಿಸಿ ಕೊಲೆಗೆ ಸುಫಾರಿ ನೀಡಲಾಗಿತ್ತು. ರೌಡಿಶೀಟರ್ ಮಣಿ ಎಂಬಾತ ಸುಪಾರಿ ನೀಡಿದ್ದ. ತನ್ನ ಪತ್ನಿ ಜೊತೆ ಆಟೋ ಚಾಲಕ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಾನೆಂದು ಶಂಕಿಸಿ ಹತ್ಯೆಗೆ ಸುಪಾರಿ ನೀಡಿದ್ದ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ

ರಾಜ್ಯಸಭೆಗೆ ಕೇರಳದಿಂದ ಜೆಬಿ ಮಾಥರ್​​ ಕಾಂಗ್ರೆಸ್​ ಅಭ್ಯರ್ಥಿ; 42ವರ್ಷಗಳ ನಂತರ ಪಕ್ಷದಿಂದ ನಾಮನಿರ್ದೇಶನಗೊಂಡ ಮೊದಲ ಮಹಿಳೆ

ಸ್ಟೈಲಿಶ್​​ ಲುಕ್​ನಲ್ಲಿ ಮಿಲ್ಕಿ ಬ್ಯೂಟಿ ತಮನ್ನಾ

Published On - 4:02 pm, Sat, 19 March 22

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!