AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬುದ್ದಿವಂತ ಸಿನಿಮಾದ ರೀತಿ ಮದ್ವೆ ವಂಚನೆ: ಯುವತಿಯರನ್ನ ಬುಟ್ಟಿಗೆ ಬೀಳಿಸಿಕೊಂಡು ಮದ್ವೆಯಾಗಿ ಕೈಕೊಡುವುದೇ ಇವನ ಕಾಯಕ

ಬುದ್ದಿವಂತ ಸಿನಿಮಾದಲ್ಲಿ ಉಪೇಂದ್ರ ಸ್ಟೈಲ್ ನಲ್ಲಿ ಯುವಕನೋರ್ವ ಯುವತಿಯರನ್ನು ಮದುವೆಯಾಗಿ ವಂಚಿಸುವುದನ್ನೇ ಚಾಳಿಯನ್ನಾಗಿ ಮಾಡಿಕೊಂಡಿದ್ದಾನೆ. ತಂದೆ-ತಾಯಿ ಇಲ್ಲದ ಅಮಾಯಕ ಯುವತಿಯರನ್ನೇ ಟಾರ್ಗೆಟ್ ಮಾಡಿ ಮದುವೆಯಾಗುವ ನೆಪದಲ್ಲಿ ವಂಚನೆ ಮಾಡುವುದೇ ಇವನು ಕಾಯಕ. ಈಗಾಗಲೇ ಒಂದು ಬಾರಿ ಜೈಲಿಗೆ ಹೋಗಿ ಬಂದರೂ ಸಹ ಬುದ್ಧಿ ಕಲಿಯದ ಆಸಾಮಿ ಅದೇ ಚಾಳಿ ಮುಂದುವರಿಸಿ ಮತ್ತೆ ಸಿಕ್ಕಿಬಿದ್ದಿದ್ದಾನೆ.

ಬುದ್ದಿವಂತ ಸಿನಿಮಾದ ರೀತಿ ಮದ್ವೆ ವಂಚನೆ:  ಯುವತಿಯರನ್ನ ಬುಟ್ಟಿಗೆ ಬೀಳಿಸಿಕೊಂಡು ಮದ್ವೆಯಾಗಿ ಕೈಕೊಡುವುದೇ ಇವನ ಕಾಯಕ
ಮಿಥುನ್ ಕುಮಾರ್
Shivaprasad B
| Edited By: |

Updated on: Aug 30, 2025 | 5:31 PM

Share

ಬೆಂಗಳೂರು, (ಆಗಸ್ಟ್ 30): ಮದುವೆ (marriage) ನೆಪದಲ್ಲಿ ಯುವತಿರಿಗೆ ವಂಚನೆ ಮಾಡುತ್ತಿದ್ದ ಯುವಕ ಸಿಕ್ಕಬಿದ್ದಿದ್ದಾನೆ. ಬುದ್ದಿವಂತ ಸಿನಿಮಾದ ಹೀರೋ ಉಪೇಂದ್ರ ಸ್ಟೈಲ್ ನಲ್ಲಿ ಯುವತಿಯರನ್ನು ಮದುವೆಯಾಗಿ ವಂಚಿಸುವುದೇ ಕಾಯಕ ಮಾಡಿಕೊಂಡಿದ್ದವು ಇದೀಗ ಸಿಕ್ಕಿಬಿದ್ದಿದ್ದಾನೆ. ಬೆಂಗಳೂರಿನ (Bengaluru) ಪಟ್ಟೇಗಾರಪಾಳ್ಯ ನಿವಾಸಿ ಮಿಥುನ್ ಕುಮಾರ್, ಯುವತಿಯರನ್ನು ಪರಿಚಯ ಮಾಡಿಕೊಂಡು ಪ್ರೀತಿಯ ನಾಟಕವಾಗಿ ಮದುವೆಯಾಗುತ್ತಾನೆ. ಆರು ತಿಂಗಳ ಸಂಸಾರ ಮಾಡಿ, ಆದಾದ ನಂತರ ದುಡ್ಡು, ಒಡವೆ ದೋಚಿ ಪರಾರಿಯಾಗುತ್ತಾನೆ. ಅದರಂತೆ ಪರಿಚಯವಾಗಿದ್ದ ಯುವತಿಯನ್ನು ಮದುವೆಯಾಗಿ ಮೋಸ ಮಾಡಿದ್ದಾನೆ. ಇದೀಗ ಪೊಲೀಸರು, ಮಿಥುನ್ ಕುಮಾರ್ ನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

6 ವರ್ಷಗಳ ಹಿಂದೆ ಯುವತಿಯೊಬ್ಬಳಿಗೆ ಈ ಮಿಥುನ್ ಕುಮಾರ್ ಪರಿಚಯವಾಗಿದ್ದು, ಒಂದು ವರ್ಷದ ಹಿಂದೆ ಆ ಯುವತಿಯನ್ನೇ ವಿವಾಹ ಆಗಿದ್ದಾನೆ. ನಾಲ್ಕು ತಿಂಗಳು ಚೆನ್ನಾಗಿ ಸಂಸಾರ ಮಾಡಿದ್ದಾನೆ. ನಂತರ ದುಡ್ಡು, ಒಡವೆ ದೋಚಿಕೊಂಡು ಪರಾರಿಯಾಗಿದ್ದ. ಈ ಸಂಬಂಧ ಮೋಸ ಹೋದ ಯುವತಿ ನೀಡಿದ್ದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ವಂಚಕ ಮಿಥುನ್​ ನನ್ನು ಬಂಧಿಸಿದ್ದಾರೆ.ತಂದೆ ತಾಯಿ ಇಲ್ಲದ ಅಮಾಯಕ ಯುವತಿಯರನ್ನು ಟಾರ್ಗೆಟ್ ಮಾಡಿ ವಂಚಿಸುವ ಮಿಥುನ್ ಕುಮಾರ್ ನ ಕಾಯಕವಾಗಿದೆ.

ಇದನ್ನೂ ಓದಿ: 50 ಲಕ್ಷ ರೂ. ಖರ್ಚು ಮಾಡಿ ಮದ್ವೆ: ಮೂರೇ ವರ್ಷದಲ್ಲಿ ಮಹಿಳಾ ಟೆಕ್ಕಿ ದುರಂತ ಸಾವು

ಈ ಹಿಂದೆಯೂ ಇಂಥದ್ದೇ ಕೇಸ್ ನಲ್ಲಿ ಜೈಲಿಗೆ ಹೋಗಿ ಬಂದಿದ್ದಾನೆ. ಈ ಹಿಂದೆ ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಮಿಥುನ್ ಕುಮಾರ್ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿತ್ತು. ಆಗ 6 ತಿಂಗಳು ಜೈಲು ಶಿಕ್ಷೆ ಅನುಭವಿಸಿ, ಜಾಮೀನಿನ ಮೇಲೆ ಹೊರಗೆ ಬಂದಿದ್ದ. ಆದರೂ ಬುದ್ಧಿ ಕಲಿಯದ ಮಿಥುನ್, ಮತ್ತೆ ಬೇರೊಬ್ಬ ಯುವತಿಯನ್ನು ನಂಬಿಸಿ ಮದುವೆಯಾಗಿ ಕೈ ಕೊಟ್ಟು ಇದೀಗ ಮತ್ತೆ ಜೈಲು ಪಾಲಾಗಿದ್ದಾನೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?