ಮೈಮೇಲೆ ಕೆಜಿಗಟ್ಟಲೇ ಚಿನ್ನ, ಕೈಯಲ್ಲಿ ಎಕೆ 47 ಹಿಡ್ಕೊಂಡು ಸುಂದರಿಯರ ಜತೆ ರೀಲ್ಸ್‌ ಮಾಡ್ತಿದ್ದವ ಜೈಲುಪಾಲು!

ಹಿಂದೆ ಮುಂದೆ ಗನ್ ಮ್ಯಾನ್, ಐಷಾರಾಮಿ ಕಾರುಗಳು, ಮೈ ತುಂಬ ಬಂಗಾರ ಹಾಕಿಕೊಂಡು ಕೈಯಲ್ಲಿ ಎಕೆ47 ಇಟ್ಕೊಂಡು ಕೆಶೋ ಕೊಡುತ್ತಿದ್ದ ಅಸಾಮಿಯನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಹೌದು.. ರೀಲ್ಸ್​​ಗಾಗಿ ಫುಲ್​ ರಿಚ್​ ಆಗಿ ಕಾಣಿಸಿಕೊಳ್ಳಲು ಮೈಮೇಲೆ ಕೆಜಿಗಟ್ಟಲೇ ಚಿನ್ನ ಧರಿಸಿಕೊಂಡು ಶೋ ಕೊಡಲು ಹೋಗಿ ಈಗ ರೀಲ್ಸ್ ಸ್ಟಾರ್ ಜೈಲುಪಾಲಾಗಿದ್ದಾನೆ.

ಮೈಮೇಲೆ ಕೆಜಿಗಟ್ಟಲೇ ಚಿನ್ನ, ಕೈಯಲ್ಲಿ ಎಕೆ 47 ಹಿಡ್ಕೊಂಡು ಸುಂದರಿಯರ ಜತೆ ರೀಲ್ಸ್‌ ಮಾಡ್ತಿದ್ದವ ಜೈಲುಪಾಲು!
ಅರುಣ್ ಕಟಾರೆ
Follow us
|

Updated on:Jul 01, 2024 | 3:57 PM

ಬೆಂಗಳೂರು, (ಜುಲೈ 01) : ಮೈಮೇಲೆ ಕೆಜಿಗಟ್ಟಲೇ ಚಿನ್ನ, ಕೈಯಲ್ಲಿ ಎಕೆ 47, ಹಿಂದೆ-ಮುಂದೆ ಬಾಡಿಗಾರ್ಡ್ಸ್‌ ಇಟ್ಟುಕೊಂಡು ಸುಂದರಿಯರ ನಡುವೆ ರೀಲ್ಸ್‌ ಶೋಕಿ ಮಾಡುತ್ತಿದ್ದವ ಇದೀಗ ಜೈಲು ಸೇರಿದ್ದಾನೆ.  ಈ ವ್ತಕ್ತಿಯ ಹೆಸರು ಅರುಣ್ ಕಟಾರೆ ಅಂತ. ಈತ ಎಕೆ 47 ರೈಫಲ್‌ ಹಿಡಿದ ಗನ್ ಮ್ಯಾನ್‌ಗಳನ್ನು ಬಾಡಿಗಾರ್ಡ್ಸ್‌ ಆಗಿಟ್ಟುಕೊಂಡು, ಪಾಶ್ ಕಾರುಗಳನ್ನು ಚಲಾಯಿಸಿಕೊಂಡು, ಮೈಮೇಲೆ ಕಿಲೋಗಟ್ಟಲೆ ಚಿನ್ನ ಧರಿಸಿಕೊಂಡು ಶೋಕಿ ಮಾಡುತ್ತಿದ್ದ. ಅಲ್ಲದೇ ಬೀದಿಬೀದಿಯಲ್ಲಿ ಗನ್‌ ತೋರಿಸಿಕೊಂಡು ರೀಲ್ಸ್​​ಗಾಗಿ ಶೋಕಿ ಮಾಡಿದವನನ್ನು ಇದೀಗ ಕೊತ್ತನೂರು ಪೊಲೀಸರು ಬಂಧಿಸಿ, ಪರಪ್ಪನ ಅಗ್ರಹಾರಕ್ಕೆ ಮುದ್ದೆ ಮುರಿಯಲು ಕಳಿಸಿದ್ದಾರೆ.

ಅರುಣ್ ಕಟಾರೆ ಮೈಮೇಲೆ ಕೆಜಿಗಟ್ಟಲೇ ಚಿನ್ನ ಗಾಕಿಕೊಂಡು, ಬಾಡಿಗಾರ್ಡ್ಸ್‌ ಥರ ಮನುಷ್ಯರನ್ನಿಟ್ಟುಕೊಂಡು, ಅವರ ಕೈಲಿ ಎಕೆ 47 ಮಾದರಿಯ ನಕಲಿ ಗನ್ ಹಿಡಿಸಿ ರಸ್ತೆಯಲ್ಲಿ ಶೋಆಫ್‌ ಮಾಡುತ್ತಿದ್ದ. ಈತನ ಶೋನಿಂದ ಬೆದರಿದ ಸಾರ್ವಜನಿಕರು ಆತಂಕದಿಂದ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸಾರ್ವಜನಿಕರ ಮಾಹಿತಿ ಮೇರೆಗೆ ಕೊತ್ತನೂರು ಪೊಲೀಸರು, ಅರುಣ್ ಕಟಾರೆಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ಇದನ್ನೂ ಓದಿ: ನೆಲಮಂಗಲ: ಹೆಚ್​ಐವಿ ಸೋಂಕಿತನ ಮೇಲೆ ಸಲಿಂಗ ಕಾಮಿಯಿಂದ ಅತ್ಯಾಚಾರ, ಮನೆ ದರೋಡೆ

ಬೀದಿಬೀದಿಯಲ್ಲಿ ಈತನ ಗನ್‌ ಝಳಪಿಸುವಿಕೆ ಕಂಡು ಜನ ಆತಂಕಕ್ಕೊಳಗಾಗಿದ್ದರು. ಆದ್ರೆ, ಈತ ಹಿಡಿದುಕೊಂಡು ಓಡಾಡಿರುವುದು ನಕಲಿ ಗನ್​ ಎನ್ನುವುದು ವಿಚಾರಣೆ ವೇಳೆ ಗೊತ್ತಾಗಿದೆ. ಆದರೂ ನಕಲಿ ಗನ್ ಹಿಡಿದು ಏರಿಯಾದಲ್ಲಿ ಆತಂಕ ಸೃಷ್ಟಿಸಿದಕ್ಕೆ ಕೇಸ್ ದಾಖಲು ಕೊತ್ತನೂರು ಪೊಲೀಸರು, ಆರ್ಮ್ಸ್ ಆಕ್ಟ್, IPC ಸೆಕ್ಷನ್ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಹಿಂದೆಯೂ ಜೈಲಿಗೆ ಹೋಗಿ ಬಂದ್ದ ರೀಲ್ಸ್​ ರಾಜ

ಚಿತ್ರದುರ್ಗದಲ್ಲಿ SSLC ಹುಡುಗನನ್ನ ಬೆದರಿಸಿ ಚಿನ್ನಾಭರಣ ಸುಲಿಗೆ ಮಾಡಿದ್ದ ಆರೋಪದಲ್ಲಿ ಈ ರೀಲ್ಸ್​ ರಾಜ ಅರುಣ್ ಕಟಾರೆ ಜೈಲಿಗೆ ಹೋಗಿ ಬಂದಿದ್ದ. ಬಾಲಕನಿಗೆ ಬಲವಂತವಾಗಿ ಸಿಗರೇಟ್, ಡ್ರಿಂಕ್ಸ್ ಮಾಡಿಸಿ ಫೋಟೋ ತೆಗೆದು ಬೆದರಿಸಿ ಬರೋಬ್ಬರಿ 35 ಲಕ್ಷ ಮೌಲ್ಯದ 656 ಗ್ರಾಂ ಚಿನ್ನಭರಣ ಸುಲಿಗೆ ಮಾಡಿದ್ದ. ಈ ಸಂಬಂಧ 2023ರಲ್ಲಿ ಚಿತ್ರದುರ್ಗ ನಗರ ಠಾಣೆ ಪೊಲೀಸರು ಅರುಣ್ ನನ್ನ ಬಂಧಿಸಿದ್ದರು. ಇದೇ ಕೇಸ್ ನಲ್ಲಿ ಅರುಣ್ ನ ಇಬ್ಬರು ಸಹೋದರರು ಕೂಡ ಆರೋಪಿಗಳಾಗಿದ್ದರು. ಬಳಿಕ ಜಾಮೀನಿನ‌ ಮೇಲೆ ಹೊರಬಂದಿದ್ದ ಅರುಣ್ ಮೇಲೆ ಮತ್ತೊಂದು ವಂಚನೆ ಕೇಸ್ ದಾಖಲಾಗಿತ್ತು. ಪರಿಚಯಸ್ಥರೊಬ್ಬರ ಬಳಿ 3.5 ಲಕ್ಷ ಸಾಲ ಪಡೆದು ವಂಚಿಸಿದ್ದರ ಬಗ್ಗೆ 2023ರಲ್ಲೇ ಚಿತ್ರದುರ್ಗ ನಗರ ಠಾಣೆಯಲ್ಲೇ ಪ್ರಕರಣ ದಾಖಲಾಗಿತ್ತು. ಸದ್ಯ ಬೆಂಗಳೂರಿನಲ್ಲಿ ರೀಲ್ಸ್ ಗಾಗಿ ಶೋಕಿ ಮಾಡಿ ನ್ಯೂಸೆನ್ಸ್ ಕ್ರಿಯೆಟ್ ಮಾಡಿ ಜೈಲುಪಾಲಾಗಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:33 pm, Mon, 1 July 24

ತಾಜಾ ಸುದ್ದಿ
ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್
ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು
ಮುಡಾ ಹಗರಣದ ಕಡತಗಳನ್ನು ಸಚಿವ ಸುರೇಶ್ ಬೆಂಗಳೂರುಗೆ ತಂದಿದ್ದಾರೆ: ವಿಜಯೇಂದ್ರ
ಮುಡಾ ಹಗರಣದ ಕಡತಗಳನ್ನು ಸಚಿವ ಸುರೇಶ್ ಬೆಂಗಳೂರುಗೆ ತಂದಿದ್ದಾರೆ: ವಿಜಯೇಂದ್ರ
ಉಡುಪಿ: ಬೈಕ್​ನ ಹೆಡ್ ಲೈಟ್ ವೈಸರ್​ನಲ್ಲಿ ಹಾವು ಪ್ರತ್ಯಕ್ಷ
ಉಡುಪಿ: ಬೈಕ್​ನ ಹೆಡ್ ಲೈಟ್ ವೈಸರ್​ನಲ್ಲಿ ಹಾವು ಪ್ರತ್ಯಕ್ಷ
‘ನನ್ನ ದೇವ್ರು’ ಮೂಲಕ ಕಿರತೆರೆಗೆ ಮರಳಿದ ಅಶ್ವಿನಿ ನಕ್ಷತ್ರದ ‘ಹೆಂಡ್ತಿ’
‘ನನ್ನ ದೇವ್ರು’ ಮೂಲಕ ಕಿರತೆರೆಗೆ ಮರಳಿದ ಅಶ್ವಿನಿ ನಕ್ಷತ್ರದ ‘ಹೆಂಡ್ತಿ’
ಯುವತಿಯರ ಮುಂದೆ ಬಾಡಿ ಪ್ರದರ್ಶಿಸುತ್ತಿದ್ದ ಯುವಕನಿಗೆ ಪಾಠ ಕಲಿಸಿದ  ಪೊಲೀಸರು
ಯುವತಿಯರ ಮುಂದೆ ಬಾಡಿ ಪ್ರದರ್ಶಿಸುತ್ತಿದ್ದ ಯುವಕನಿಗೆ ಪಾಠ ಕಲಿಸಿದ  ಪೊಲೀಸರು
‘ರೇಣುಕಾಸ್ವಾಮಿ ಮುಗ್ಧನಲ್ಲ, ವಿಕೃತಕಾಮಿ’; ವಿ ಮನೋಹರ್ ಹೇಳಿಕೆ
‘ರೇಣುಕಾಸ್ವಾಮಿ ಮುಗ್ಧನಲ್ಲ, ವಿಕೃತಕಾಮಿ’; ವಿ ಮನೋಹರ್ ಹೇಳಿಕೆ
ಕೇರಳದ ಕಲಾವಿದನ ಕೈಯಲ್ಲಿ ಅರಳಿದ ಪ್ರಧಾನಿ ಮೋದಿ ಭವ್ಯ ಪ್ರತಿಮೆ
ಕೇರಳದ ಕಲಾವಿದನ ಕೈಯಲ್ಲಿ ಅರಳಿದ ಪ್ರಧಾನಿ ಮೋದಿ ಭವ್ಯ ಪ್ರತಿಮೆ
ಕಿರುತೆರೆಗೆ ಎಂಟ್ರಿಕೊಟ್ಟ ನರಸಿಂಹರಾಜು ಮೊಮ್ಮಗ ಅವಿನಾಶ್ ದಿವಾಕರ್
ಕಿರುತೆರೆಗೆ ಎಂಟ್ರಿಕೊಟ್ಟ ನರಸಿಂಹರಾಜು ಮೊಮ್ಮಗ ಅವಿನಾಶ್ ದಿವಾಕರ್
ದೇವಸ್ಥಾನದಲ್ಲಿ ಶಟಗೋಪ ತಲೆ ಮೇಲೆ ಇಡುವುದರ ಮಹತ್ವ ಏನು? ಈ ವಿಡಿಯೋ ನೋಡಿ
ದೇವಸ್ಥಾನದಲ್ಲಿ ಶಟಗೋಪ ತಲೆ ಮೇಲೆ ಇಡುವುದರ ಮಹತ್ವ ಏನು? ಈ ವಿಡಿಯೋ ನೋಡಿ