AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಮೇಲೆ ಕೆಜಿಗಟ್ಟಲೇ ಚಿನ್ನ, ಕೈಯಲ್ಲಿ ಎಕೆ 47 ಹಿಡ್ಕೊಂಡು ಸುಂದರಿಯರ ಜತೆ ರೀಲ್ಸ್‌ ಮಾಡ್ತಿದ್ದವ ಜೈಲುಪಾಲು!

ಹಿಂದೆ ಮುಂದೆ ಗನ್ ಮ್ಯಾನ್, ಐಷಾರಾಮಿ ಕಾರುಗಳು, ಮೈ ತುಂಬ ಬಂಗಾರ ಹಾಕಿಕೊಂಡು ಕೈಯಲ್ಲಿ ಎಕೆ47 ಇಟ್ಕೊಂಡು ಕೆಶೋ ಕೊಡುತ್ತಿದ್ದ ಅಸಾಮಿಯನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಹೌದು.. ರೀಲ್ಸ್​​ಗಾಗಿ ಫುಲ್​ ರಿಚ್​ ಆಗಿ ಕಾಣಿಸಿಕೊಳ್ಳಲು ಮೈಮೇಲೆ ಕೆಜಿಗಟ್ಟಲೇ ಚಿನ್ನ ಧರಿಸಿಕೊಂಡು ಶೋ ಕೊಡಲು ಹೋಗಿ ಈಗ ರೀಲ್ಸ್ ಸ್ಟಾರ್ ಜೈಲುಪಾಲಾಗಿದ್ದಾನೆ.

ಮೈಮೇಲೆ ಕೆಜಿಗಟ್ಟಲೇ ಚಿನ್ನ, ಕೈಯಲ್ಲಿ ಎಕೆ 47 ಹಿಡ್ಕೊಂಡು ಸುಂದರಿಯರ ಜತೆ ರೀಲ್ಸ್‌ ಮಾಡ್ತಿದ್ದವ ಜೈಲುಪಾಲು!
ಅರುಣ್ ಕಟಾರೆ
ರಮೇಶ್ ಬಿ. ಜವಳಗೇರಾ
|

Updated on:Jul 01, 2024 | 3:57 PM

Share

ಬೆಂಗಳೂರು, (ಜುಲೈ 01) : ಮೈಮೇಲೆ ಕೆಜಿಗಟ್ಟಲೇ ಚಿನ್ನ, ಕೈಯಲ್ಲಿ ಎಕೆ 47, ಹಿಂದೆ-ಮುಂದೆ ಬಾಡಿಗಾರ್ಡ್ಸ್‌ ಇಟ್ಟುಕೊಂಡು ಸುಂದರಿಯರ ನಡುವೆ ರೀಲ್ಸ್‌ ಶೋಕಿ ಮಾಡುತ್ತಿದ್ದವ ಇದೀಗ ಜೈಲು ಸೇರಿದ್ದಾನೆ.  ಈ ವ್ತಕ್ತಿಯ ಹೆಸರು ಅರುಣ್ ಕಟಾರೆ ಅಂತ. ಈತ ಎಕೆ 47 ರೈಫಲ್‌ ಹಿಡಿದ ಗನ್ ಮ್ಯಾನ್‌ಗಳನ್ನು ಬಾಡಿಗಾರ್ಡ್ಸ್‌ ಆಗಿಟ್ಟುಕೊಂಡು, ಪಾಶ್ ಕಾರುಗಳನ್ನು ಚಲಾಯಿಸಿಕೊಂಡು, ಮೈಮೇಲೆ ಕಿಲೋಗಟ್ಟಲೆ ಚಿನ್ನ ಧರಿಸಿಕೊಂಡು ಶೋಕಿ ಮಾಡುತ್ತಿದ್ದ. ಅಲ್ಲದೇ ಬೀದಿಬೀದಿಯಲ್ಲಿ ಗನ್‌ ತೋರಿಸಿಕೊಂಡು ರೀಲ್ಸ್​​ಗಾಗಿ ಶೋಕಿ ಮಾಡಿದವನನ್ನು ಇದೀಗ ಕೊತ್ತನೂರು ಪೊಲೀಸರು ಬಂಧಿಸಿ, ಪರಪ್ಪನ ಅಗ್ರಹಾರಕ್ಕೆ ಮುದ್ದೆ ಮುರಿಯಲು ಕಳಿಸಿದ್ದಾರೆ.

ಅರುಣ್ ಕಟಾರೆ ಮೈಮೇಲೆ ಕೆಜಿಗಟ್ಟಲೇ ಚಿನ್ನ ಗಾಕಿಕೊಂಡು, ಬಾಡಿಗಾರ್ಡ್ಸ್‌ ಥರ ಮನುಷ್ಯರನ್ನಿಟ್ಟುಕೊಂಡು, ಅವರ ಕೈಲಿ ಎಕೆ 47 ಮಾದರಿಯ ನಕಲಿ ಗನ್ ಹಿಡಿಸಿ ರಸ್ತೆಯಲ್ಲಿ ಶೋಆಫ್‌ ಮಾಡುತ್ತಿದ್ದ. ಈತನ ಶೋನಿಂದ ಬೆದರಿದ ಸಾರ್ವಜನಿಕರು ಆತಂಕದಿಂದ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸಾರ್ವಜನಿಕರ ಮಾಹಿತಿ ಮೇರೆಗೆ ಕೊತ್ತನೂರು ಪೊಲೀಸರು, ಅರುಣ್ ಕಟಾರೆಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ಇದನ್ನೂ ಓದಿ: ನೆಲಮಂಗಲ: ಹೆಚ್​ಐವಿ ಸೋಂಕಿತನ ಮೇಲೆ ಸಲಿಂಗ ಕಾಮಿಯಿಂದ ಅತ್ಯಾಚಾರ, ಮನೆ ದರೋಡೆ

ಬೀದಿಬೀದಿಯಲ್ಲಿ ಈತನ ಗನ್‌ ಝಳಪಿಸುವಿಕೆ ಕಂಡು ಜನ ಆತಂಕಕ್ಕೊಳಗಾಗಿದ್ದರು. ಆದ್ರೆ, ಈತ ಹಿಡಿದುಕೊಂಡು ಓಡಾಡಿರುವುದು ನಕಲಿ ಗನ್​ ಎನ್ನುವುದು ವಿಚಾರಣೆ ವೇಳೆ ಗೊತ್ತಾಗಿದೆ. ಆದರೂ ನಕಲಿ ಗನ್ ಹಿಡಿದು ಏರಿಯಾದಲ್ಲಿ ಆತಂಕ ಸೃಷ್ಟಿಸಿದಕ್ಕೆ ಕೇಸ್ ದಾಖಲು ಕೊತ್ತನೂರು ಪೊಲೀಸರು, ಆರ್ಮ್ಸ್ ಆಕ್ಟ್, IPC ಸೆಕ್ಷನ್ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಹಿಂದೆಯೂ ಜೈಲಿಗೆ ಹೋಗಿ ಬಂದ್ದ ರೀಲ್ಸ್​ ರಾಜ

ಚಿತ್ರದುರ್ಗದಲ್ಲಿ SSLC ಹುಡುಗನನ್ನ ಬೆದರಿಸಿ ಚಿನ್ನಾಭರಣ ಸುಲಿಗೆ ಮಾಡಿದ್ದ ಆರೋಪದಲ್ಲಿ ಈ ರೀಲ್ಸ್​ ರಾಜ ಅರುಣ್ ಕಟಾರೆ ಜೈಲಿಗೆ ಹೋಗಿ ಬಂದಿದ್ದ. ಬಾಲಕನಿಗೆ ಬಲವಂತವಾಗಿ ಸಿಗರೇಟ್, ಡ್ರಿಂಕ್ಸ್ ಮಾಡಿಸಿ ಫೋಟೋ ತೆಗೆದು ಬೆದರಿಸಿ ಬರೋಬ್ಬರಿ 35 ಲಕ್ಷ ಮೌಲ್ಯದ 656 ಗ್ರಾಂ ಚಿನ್ನಭರಣ ಸುಲಿಗೆ ಮಾಡಿದ್ದ. ಈ ಸಂಬಂಧ 2023ರಲ್ಲಿ ಚಿತ್ರದುರ್ಗ ನಗರ ಠಾಣೆ ಪೊಲೀಸರು ಅರುಣ್ ನನ್ನ ಬಂಧಿಸಿದ್ದರು. ಇದೇ ಕೇಸ್ ನಲ್ಲಿ ಅರುಣ್ ನ ಇಬ್ಬರು ಸಹೋದರರು ಕೂಡ ಆರೋಪಿಗಳಾಗಿದ್ದರು. ಬಳಿಕ ಜಾಮೀನಿನ‌ ಮೇಲೆ ಹೊರಬಂದಿದ್ದ ಅರುಣ್ ಮೇಲೆ ಮತ್ತೊಂದು ವಂಚನೆ ಕೇಸ್ ದಾಖಲಾಗಿತ್ತು. ಪರಿಚಯಸ್ಥರೊಬ್ಬರ ಬಳಿ 3.5 ಲಕ್ಷ ಸಾಲ ಪಡೆದು ವಂಚಿಸಿದ್ದರ ಬಗ್ಗೆ 2023ರಲ್ಲೇ ಚಿತ್ರದುರ್ಗ ನಗರ ಠಾಣೆಯಲ್ಲೇ ಪ್ರಕರಣ ದಾಖಲಾಗಿತ್ತು. ಸದ್ಯ ಬೆಂಗಳೂರಿನಲ್ಲಿ ರೀಲ್ಸ್ ಗಾಗಿ ಶೋಕಿ ಮಾಡಿ ನ್ಯೂಸೆನ್ಸ್ ಕ್ರಿಯೆಟ್ ಮಾಡಿ ಜೈಲುಪಾಲಾಗಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:33 pm, Mon, 1 July 24

ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ