ವಾಕಿಂಗ್​ಗೆ ಬಂದಿದ್ದ ಮಹಿಳೆಯನ್ನು ತಬ್ಬಿಕೊಂಡು ಚುಂಬಿಸಿ ಪರಾರಿಯಾಗಿದ್ದ ಕಾಮುಕ ಅರೆಸ್ಟ್

|

Updated on: Aug 05, 2024 | 6:01 PM

ವಾಕಿಂಗ್ ಎಂದು ರಸ್ತೆ ಬದಿ ನಿಂತಿದ್ದ ಮಹಿಳೆಯನ್ನ ಬಲವಂತವಾಗಿ ತಬ್ಬಿ ಹಿಡಿದು ಚುಂಬಿಸಿದ್ದ ಆರೋಪಿಗೆ ಇದೀಗ ಸಿಕ್ಕಿಬಿದ್ದಿದ್ದಾನೆ. ಕ್ಯಾಬ್ ಚಾಲಕನಾಗಿದ್ದ 25 ವರ್ಷದ ಸುರೇಶ್​ನನ್ನು ಬೆಂಗಳೂರಿನ ಕೋಣನಕುಂಟೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಾಕಿಂಗ್​ಗೆ ಬಂದಿದ್ದ ಮಹಿಳೆಯನ್ನು ತಬ್ಬಿಕೊಂಡು ಚುಂಬಿಸಿ ಪರಾರಿಯಾಗಿದ್ದ ಕಾಮುಕ ಅರೆಸ್ಟ್
ಸುರೇಶ್​ ಬಂಧಿತ ಆರೋಪಿ
Follow us on

ಬೆಂಗಳೂರು, (ಆಗಸ್ಟ್​​ 05): ವಾಯುವಿಹಾರಕ್ಕೆ ಬಂದಿದ್ದ ಮಹಿಳೆಯನ್ನು ಎಳೆದಾಡಿ ಚುಂಬಿಸಿ ಪರಾರಿಯಾಗಿದ್ದವನನ್ನು ಬೆಂಗಳೂರಿನ ಕೋಣನಕುಂಟೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕ್ಯಾಬ್ ಚಾಲಕ 25 ವರ್ಷದ ಸುರೇಶ್ ಬಂಧಿತ ಆರೋಪಿ. ಆಗಸ್ಟ್​ 2ರಂದು ಬೆಳಗಿನ ಜಾವ ಐದು ಗಂಟೆ ಕೋಣನಕುಂಟೆ ಬಳಿಯ ಕೃಷ್ಣಾನಗರದ ಪಾರ್ಕ್​ಗೆ ವಾಕಿಂಗ್​ಗೆ ಬಂದಿದ್ದ ಮಹಿಳೆಯನ್ನು ಬಲವಂತವಾಗಿ ತಬ್ಬಿ ಹಿಡಿದು ಚುಂಬಿಸಿ ಎಸ್ಕೇಪ್ ಆಗಿದ್ದ. ಇದೀಗ ಘಟನೆ ನಡೆದು ಮೂರು ದಿನಗಳ ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಇನ್ನು ಈ ಪ್ರಕರಣದಲ್ಲಿ ನಿರ್ಲಕ್ಷ್ಯ ಮಾಡಿದ ಆರೋಪದಡಿಯಲ್ಲಿ ಕೋಣನಕುಂಟೆ ಪೊಲೀಸ್ ಠಾಣೆಯ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ.

ಆಗಸ್ಟ್ 02ರ ಬೆಳಗಿನ ಜಾವ 5ರ ಸುಮಾರಿಗೆ ಕೋಣನಕುಂಟೆ ಬಳಿಯ ಕೃಷ್ಣಾನಗರದಲ್ಲಿ ವಾಕಿಂಗ್ ಎಂದು ರಸ್ತೆ ಬದಿ ನಿಂತಿದ್ದ ಮಹಿಳೆಯನ್ನ ಬಂಧಿತ ಆರೋಪಿ ಸುರೇಶ್ ಬಲವಂತವಾಗಿ ತಬ್ಬಿ ಹಿಡಿದು ಚುಂಬಿಸಿದ್ದ. ನಂತರ ಆಕೆ ತಪ್ಪಿಸಿಕೊಂಡು ಬಂದರೂ ಸಹ ಹಿಂದೆ ಬಂದು ಹಿಂಸೆ ನೀಡಿದ್ದ. ಈ ಘಟನೆಯಿಂದ ಭಯಗೊಂಡು ಮುಜುಗರಕ್ಕೊಳಗಾಗಿದ್ದ ಮಹಿಳೆ ವಾಕಿಂಗ್‌ಗೆ ತೆರಳದೆ ಮನೆಗೆ ತೆರಳಿದ್ದರು.ಅಲ್ಲದೇ ಪೊಲೀಸರಿಗೆ ದೂರು ನೀಡಲು ಸಹ ಹಿಂಜರಿದಿದ್ದರು.

ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಬೆಚ್ಚಿಬೀಳಿಸುವ ಘಟನೆ: ಮಹಿಳೆಯನ್ನು ಬಲವಂತವಾಗಿ ತಬ್ಬಿ ಚುಂಬಿಸಿದ ದುಷ್ಕರ್ಮಿ

ಆದ್ರೆ, ಘಟನೆಯ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಕೋಣನಕುಂಟೆ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯರಿಂದ ಮಾಹಿತಿ ಪಡೆದುಕೊಂಡು ಆರೋಪಿಗಾಗಿ ಹುಡಕಾಟ ನಡೆಸಿದ್ದರು. ಆದ್ರೆ, ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳದೇ  ಸರಿಯಾದ ರೀತಿ ಕ್ರಮ ತೆಗೆದುಕೊಂಡಿಲ್ಲ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಈ ಪ್ರಕರಣದಲ್ಲಿ ಸರಿಯಾದ ರೀತಿ ಕ್ರಮ ತೆಗೆದುಕೊಂಡಿಲ್ಲ ಎಂದು ನಿರ್ಲಕ್ಷ್ಯ ಆರೋಪದಡಿಯಲ್ಲಿ ಪ್ರಕರಣ ಸಂಬಂಧ ಕೋಣನಕುಂಟೆ ಠಾಣೆಯ ಮೂವರು ಪೊಲೀಸರನ್ನು ಸಸ್ಪೆಂಡ್ ಮಾಡಲಾಗಿದೆ.

ನಿನ್ನೆ(ಆಗಸ್

ವರದಿ: ಪ್ರದೀಪ್ ಚಿಕ್ಕಾಟಿ

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 5:34 pm, Mon, 5 August 24