Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

ಇತ್ತೀಚೆಗೆ ಕ್ಷುಲ್ಲಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿದೆ. ಕುಳಿತು ಮಾತಾಡಿ ಬಗೆಹರಿಸಿಕೊಳ್ಳುವ ವಿಷಯಕ್ಕೂ ತಮ್ಮ ಜೀವನವನ್ನು ಅಂತ್ಯ ಮಾಡಿಕೊಳ್ಳಲು ಮುಂದಾಗುತ್ತಿದ್ದಾರೆ. ಇದೀಗ ಬೆಂಗಳೂರಿನ(Bengaluru) ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ಪಶ್ಚಿಮ ಬಂಗಾಳ ಮೂಲದ ವ್ಯಕ್ತಿಯೋರ್ವ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬೆಂಗಳೂರಿನಲ್ಲಿ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ
ಬೆಂಗಳೂರಿನಲ್ಲಿ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ
Follow us
Jagadisha B
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 25, 2024 | 8:09 PM

ಬೆಂಗಳೂರು, ಜು.25: ಚಲಿಸುತ್ತಿದ್ದ ಒಡೆಯರ್ ಎಕ್ಸ್​​ಪ್ರೆಸ್ ರೈಲಿಗೆ ತಲೆಕೊಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ(Bengaluru) ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಮೈಸೂರಿನ ಖಾಸಗಿ ಸಂಸ್ಥೆಯ ಉದ್ಯೋಗಿ ಸುಶಾಂತ್ (40) ಆತ್ಮಹತ್ಯೆ ಶರಣಾದವರು. ಮೂಲತಃ ಪಶ್ಚಿಮ ಬಂಗಾಳ ಮೂಲದವರಾಗಿರುವ ಮೃತ ಸುಶಾಂತ್, ಕೆಲಸದ ನಿಮಿತ್ತ ಮೈಸೂರಿನಿಂದ ಬೆಂಗಳೂರಿಗೆ ಬಂದಿದ್ದ. ಇನ್ನು ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಕುಟುಂಬದವರಿಗೆ ಮಾಹಿತಿ ನೀಡಿದ ರೈಲ್ವೆ ಪೊಲೀಸರು

ಹೀಗೆ ಬಂದಿದ್ದವ ಸಂಜೆ ಮೈಸೂರಿಗೆ ಹಿಂದಿರುಗಲು ಸುಶಾಂತ್ ರೈಲು ನಿಲ್ದಾಣಕ್ಕೆ ಬಂದಿದ್ದ. ಆತ್ಮಹತ್ಯೆಗೂ ಮುನ್ನ ಒಡೆಯರ್ ಎಕ್ಸ್​​ಪ್ರೆಸ್ ರೈಲು ಹತ್ತಿದ್ದಾನೆ. ಅದೇನಾಯಿತೋ ಏನೋ, ಹೊರಡುವ ಸಂದರ್ಭದಲ್ಲಿ ಕೆಳಗಿಳಿದು ರೈಲಿಗೆ ತಲೆಕೊಟ್ಟಿದ್ದಾನೆ.  ಘಟನೆ ಬಗ್ಗೆ ರೈಲ್ವೆ ಪೊಲೀಸರು ಆತನ ಕುಟುಂಬದವರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಪಶ್ಚಿಮ ಮೃತನ ಕುಟುಂಬ ಬಂಗಾಳದಿಂದ ಬೆಂಗಳೂರಿಗೆ ಬರುತ್ತಿದ್ದಾರೆ. ಈ ಕುರಿತು ಮೆಜೆಸ್ಟಿಕ್ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಬೆಂಗಳೂರು ಗ್ರಾಮಾಂತರ: ಯುಟ್ಯೂಬ್ ಚಾನೆಲ್ ಮಾಲೀಕ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣು

ಮಳಗಿ ಧರ್ಮಾ ಜಲಾಶಯದಲ್ಲಿ ಈಜಲು ತೆರಳಿದ್ದ ಯುವಕ ಸಾವು

ಉತ್ತರ ಕನ್ನಡ: ಜಿಲ್ಲೆಯ ಮುಂಡಗೋಡ ತಾಲೂಕಿನ ಮಳಗಿ ಧರ್ಮಾ ಡ್ಯಾಂಗೆ ಈಜಲು ತೆರಳಿದ್ದ ಯುವಕನೋರ್ವ ಸಾವನ್ನಪ್ಪಿದ್ದಾನೆ. ಮುಂಡಗೋಡ ತಾಲೂಕಿನ ಮುಡಸಾಲಿ ನಿವಾಸಿ ಶ್ರೀಕಾಂತ್(20) ಮೃತ ಯುವಕ. ನಿನ್ನೆ(ಜು.24) 8 ಸ್ನೇಹಿತರ ಜೊತೆ ಮಳಗಿ ಧರ್ಮಾ ಡ್ಯಾಂ ವೀಕ್ಷಣೆಗೆ ಆಗಮಿಸಿದ್ದ. ಈ ವೇಳೆ ಸ್ನೇಹಿತನ ಜತೆ ಜಲಾಶಯದಲ್ಲಿ ಈಜಲು ಹೋಗಿದ್ದ ವೇಳೆ ಅವಘಡ ನಡೆದಿದೆ. ಇಂದು ಜೀವರಕ್ಷಕ ಸಿಬ್ಬಂದಿ ಜಲಾಶಯದಿಂದ ಶ್ರೀಕಾಂತ್ ಶವ ಹೊರತೆಗೆದಿದ್ದಾರೆ. ಈ ಕುರಿತು ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪೊಲೀಸರಿಂದ ಸೂಕ್ತ ತನಿಖೆ ಆಗುತ್ತಿಲ್ಲವೆಂದು ಅರೋಪಿಸಿದ ಸಂಬಂಧಿಕರು
ಪೊಲೀಸರಿಂದ ಸೂಕ್ತ ತನಿಖೆ ಆಗುತ್ತಿಲ್ಲವೆಂದು ಅರೋಪಿಸಿದ ಸಂಬಂಧಿಕರು
ಪ್ರದೀಪ್ ಮಾತುಗಳಿಗೆ ಸಭಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದದರು: ಮೋಹನ್
ಪ್ರದೀಪ್ ಮಾತುಗಳಿಗೆ ಸಭಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದದರು: ಮೋಹನ್
ಬದುಕುಳಿದು ಬಂದು ಅಪಘಾತದ ಭೀಕರತೆ ಬಿಚ್ಚಿಟ್ಟ ಪರಸಪ್ಪ
ಬದುಕುಳಿದು ಬಂದು ಅಪಘಾತದ ಭೀಕರತೆ ಬಿಚ್ಚಿಟ್ಟ ಪರಸಪ್ಪ
VIDEO: ರಾಕಿ ಭಾಯ್ ಸ್ಟೈಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ಗೆ ಕನ್ನಡಿಗನ ಎಂಟ್
VIDEO: ರಾಕಿ ಭಾಯ್ ಸ್ಟೈಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ಗೆ ಕನ್ನಡಿಗನ ಎಂಟ್
ಹತ್ತಿರದ ಸಂಬಂಧಿಯೊಬ್ಬರ ಸಾವಿನ ಕಾರಣ ಪರಮೇಶ್ವರ್ ಭಾಗಿಯಾಗಿರಲಿಲ್ಲ: ಪಾಟೀಲ್
ಹತ್ತಿರದ ಸಂಬಂಧಿಯೊಬ್ಬರ ಸಾವಿನ ಕಾರಣ ಪರಮೇಶ್ವರ್ ಭಾಗಿಯಾಗಿರಲಿಲ್ಲ: ಪಾಟೀಲ್
ಕಾರಿನ ಮೇಲೆ ಬಿದ್ದ ಲಾರಿ: ಭಯಾನಕ ಅಪಘಾತ ಡ್ರೋನ್ ಕ್ಯಾಮರಾದಲ್ಲಿ ಕಂಡಿದ್ದು
ಕಾರಿನ ಮೇಲೆ ಬಿದ್ದ ಲಾರಿ: ಭಯಾನಕ ಅಪಘಾತ ಡ್ರೋನ್ ಕ್ಯಾಮರಾದಲ್ಲಿ ಕಂಡಿದ್ದು
ಕಳ್ಳತನ ಮಾಡಿದ ಬಳಿಕ ತಮ್ಮ ಕಾರನ್ನೇ ಬೆಂಕಿಹಚ್ಚಿ ಸುಟ್ಟುಬಿಡುವ ಖದೀಮರು
ಕಳ್ಳತನ ಮಾಡಿದ ಬಳಿಕ ತಮ್ಮ ಕಾರನ್ನೇ ಬೆಂಕಿಹಚ್ಚಿ ಸುಟ್ಟುಬಿಡುವ ಖದೀಮರು
ದರ್ಶನ್ ನಟನೆಯ ‘ಡೆವಿಲ್’ ಚಿತ್ರಕ್ಕೆ ಮೈಸೂರಿನಲ್ಲಿ ಕೊನೆಯ ದಿನದ ಶೂಟಿಂಗ್
ದರ್ಶನ್ ನಟನೆಯ ‘ಡೆವಿಲ್’ ಚಿತ್ರಕ್ಕೆ ಮೈಸೂರಿನಲ್ಲಿ ಕೊನೆಯ ದಿನದ ಶೂಟಿಂಗ್
ಅಪಘಾತದಲ್ಲಿ ಜಖಂಗೊಂಡ ಕಾರಲ್ಲಿ ಮಲಗಿದ್ದರೂ ಚಾಲಕ ಅಪಾಯದಿಂದ ಪಾರು
ಅಪಘಾತದಲ್ಲಿ ಜಖಂಗೊಂಡ ಕಾರಲ್ಲಿ ಮಲಗಿದ್ದರೂ ಚಾಲಕ ಅಪಾಯದಿಂದ ಪಾರು
IPL 2025: ಐಪಿಎಲ್ ಆರಂಭಕ್ಕೂ ಮುನ್ನ ಹಲವು ಆಟಗಾರರು ಗಾಯಾಳು
IPL 2025: ಐಪಿಎಲ್ ಆರಂಭಕ್ಕೂ ಮುನ್ನ ಹಲವು ಆಟಗಾರರು ಗಾಯಾಳು