AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಪ್ಪನ ಅಗ್ರಹಾರ ಪೊಲೀಸ್ರ ಕೊಂಕು ಮಾತು: ನ್ಯಾಯಕ್ಕಾಗಿ ಕಮಿಷನರ್​ ಕಚೇರಿ ಮೆಟ್ಟಿಲೇರಿದ

ಆತನ ಬೆಂಗಳೂರಿನಲ್ಲಿ ಬದುಕು ಕಟ್ಟಿಕೊಳ್ಳಲು ಕಷ್ಟಪಟ್ಟು ಸೆಕೆಂಡ್ ಹ್ಯಾಂಡ್ ಕಾರು ಖರೀದಿ ಮಾಡಿದ್ದ. ಲೋನ್ ಇದ್ದ ಕಾರನ್ನೇ ಖರೀದಿಸಿದ್ದ. ಆದರೆ ಕಾರ್​ ಓನರ್ ಹಣ ನೀಡಿದ್ರು ವಂಚನೆ ಮಾಡಿದ್ದಾನೆ. ಇದ್ರಿಂದ ಕಾರನ್ನು ಸೀಜ್ ಮಾಡಿದ್ದಾರೆ. ಇದರಿಂದ ಕಾರು ಹಣ ಕಳೆದುಕೊಂಡವನು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾನೆ. ಆದ್ರೆ ಪೊಲೀಸರು ನೊಂದ ವ್ಯಕ್ತಿಗೆ ನ್ಯಾಯ ಕೊಡಿಸದೇ ಚುಚ್ಚು ಮಾತಾಡಿದ್ದಾರೆ. ಹೀಗಾಗಿ ಆ ವ್ಯಕ್ತಿ ಪೊಲೀಸ್ ಕಮಿಷನರ್ ಕಚೇರಿ ಕದ ತಟ್ಟಿದ್ದಾನೆ.

ಪರಪ್ಪನ ಅಗ್ರಹಾರ ಪೊಲೀಸ್ರ ಕೊಂಕು ಮಾತು: ನ್ಯಾಯಕ್ಕಾಗಿ ಕಮಿಷನರ್​ ಕಚೇರಿ ಮೆಟ್ಟಿಲೇರಿದ
Parappana Agrahara Police
ರಮೇಶ್ ಬಿ. ಜವಳಗೇರಾ
|

Updated on:Mar 17, 2025 | 10:35 PM

Share

ಬೆಂಗಳೂರು, (ಮಾರ್ಚ್​ 17): ಲಂಚ ಕೊಡದೇ ದಂಡವನ್ನು ಕೋರ್ಟ್​​ಗೆ ಕಟ್ಟಿದ್ದಕ್ಕೆ ಬೆಂಗಳೂರಿನ ವಿಜಯನಗರ ಟ್ರಾಫಿಕ್ ಪೊಲೀಸ್ ಇನ್ಸ್​ಪೆಕ್ಟರ್ ಶಾಂತರಾಮ್, ಬೈಕ್​ ಸವಾರನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಡ್ರಿಂಕ್​ ಆ್ಯಂಡ್​ ಡ್ರೈವ್​ ಕೇಸ್​ನಲ್ಲಿ ಸಿಕ್ಕಿಬಿದ್ದ  ಬೈಕ್ ಸವಾರ ಈಶ್ವರ್, ದಂಡದ ಮೊತ್ತವನ್ನು ಕೋರ್ಟ್​ಗೆ ಕಟ್ಟಿ ಬಳಿಕ ಸೀಜ್ ಆಗಿದ್ದ ಬೈಕ್ ವಾಪಸ್ ಪಡೆದುಕೊಳ್ಳಲು ಠಾಣೆಗ ಆಗಮಿಸಿದ್ದ ವೇಳೆ ​ ಇನ್ಸ್​ಪೆಕ್ಟರ್ ಶಾಂತರಾಮ್ ಹಾಗೂ ಸಿಬ್ಬಂದಿ ಹಲ್ಲೆ ಮಾಡಿದ್ದಾರೆ. ಇದರಿಂ ಬೈಕ್​ ಸವಾರ ಈಶ್ವರ್ ಆಸ್ಪತ್ರೆಗೆ ದಾಖಲಾಗಿದ್ದಾನೆ. ಮತ್ತೊಂದೆಡೆ ನ್ಯಾಯಕೊಡಿಸಿ ಎಂದು  ಪ್ರಕಾಶ್ ಎನ್ನುವರು ಪರಪ್ಪನ ಅಗ್ರಹಾರ ಠಾಣೆ ಮೆಟ್ಟಿಲೇರಿದ್ದಾರೆ. ಆದ್ರೆ, ಪೊಲೀಸರು ಯಾವುದೇ ರೀತಿಯ ಸ್ಪಂದಿಸಿಲ್ಲ. ಬದಲಿಗೆ ಕೊಂಕು ಮಾತುಗಳಿಂದ ದೂರುದಾರನಿಗೆ ನಿಂದಿಸಿದ್ದಾರೆ. ಇದರಿಂದ ಈಗ ಪ್ರಕಾಶ್ ಕಮಿಷನರ್​ ಕಚೇರಿ ಮೆಟ್ಟಿಲೇರಿದ್ದಾರೆ,

ಈತನ ಹೆಸರು ಸೂರ್ಯ ಪ್ರಕಾಶ್. ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯ ನಿವಾಸಿ. ಕಳೆದ ಒಂದು ವರ್ಷದ ಹಿಂದೆ ವಿನಯ್ ಕುಮಾರ್ ಎಂಬಾತನ ಬಳಿ ಸೆಕೆಂಡ್ ಹ್ಯಾಂಡ್ ಕಾರು ಖರೀದಿ ಮಾಡಿದ್ದರು. 6 ಲಕ್ಷ ರೂ. ಲೋನ್ ಬ್ಯಾಲನ್ಸ್ ಇದ್ದ ಕಾರನ್ನ ಒಂದು ಲಕ್ಷ ಕೊಟ್ಟು ಲೋನ್ ಕಟ್ಟಿಕೊಳ್ಳೋದಾಗಿ ಖರೀದಿ ಮಾಡಿದ್ದ. ಮೂರು ತಿಂಗಳ ಲೋನ್ ಹಣವನ್ನ ವಿನಯ ಕುಮಾರ್ ಗೂ ಕಳಿಸಿದ್ದ. ಆದ್ರೆ ವಿನಯ್ ಕುಮಾರ್ ಲೋನ್ ಹಣ ಕಟ್ಟದ ಕಾರಣಕ್ಕೆ ಬ್ಯಾಂಕ್ ನವರು ಈತನ ಕಾರು ಸೀಜ್ ಮಾಡಿದ್ದಾರೆ. ಈ ಬಗ್ಗೆ ಪ್ರಶ್ನಿಸಿದ್ರೆ ವಿನಯ್ ಹಣ ಕೊಡುತ್ತೇನೆಂದು ಹೇಳಿ ವಂಚನೆ ಮಾಡಿದ್ದ. ಹೀಗಾಗಿ ಅನಿವಾರ್ಯವಾಗಿ ಸೂರ್ಯ ಪ್ರಕಾಶ್. ಪೊಲೀಸ್​ ಠಾಣೆ ಮೆಟ್ಟಿಲೇರಿದ್ದು, ನ್ಯಾಯಕೊಡಿಸಿ ಎಂದು ಮನವಿ ಮಾಡಿದ್ದಾರೆ. ಆದ್ರೆ, ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಯಾವುದೇ ರೀತಿಯ ಸ್ಪಂದಿಸಿಲ್ಲ. ಬದಲಿಗೆ ಕೊಂಕು ಮಾತುಗಳಿಂದ ದೂರುದಾರನಿಗೆ ನಿಂದಿಸಿದ್ದಾರೆ. ಇದರಿಂದ ಬೆಸತ್ತ ಪ್ರಕಾಶ್​ ನ್ಯಾಯಕ್ಕಾಗಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಮೊರೆ ಹೋಗಿದ್ದಾರೆ.

ಇದನ್ನೂ ಓದಿ: ವಿಜಯನಗರ ಟ್ರಾಫಿಕ್​ ಇನ್ಸ್​ಪೆಕ್ಟರ್​ ರೌಡಿ ವರ್ತನೆ: ಕೊಟ್ಟ ಏಟಿಗೆ ಬೈಕ್ ಸವಾರ ಆಸ್ಪತ್ರೆ ಪಾಲು

ಇನ್ನು ಈ ವಂಚನೆ ಬಗ್ಗೆ ಸೂರ್ಯ ಪ್ರಕಾಶ್ ಪರಪ್ಪನ ಅಗ್ರಹಾರ ಠಾಣೆಗೆ ದೂರು ನೀಡಲು ಹೋಗಿದ್ದ ವೇಳೆ ಪೊಲೀಸರು ಇವರ ದೂರು ಸ್ವೀಕರಿಸಿದೇ ಕಳೆದ 8 ತಿಂಗಳಿಂದ ಸತಾಯಿಸಿದ್ದಾರಂತೆ. ಅದರಲ್ಲೂ PSI ಧರಣೇಶ್ ಎಂಬುವರು ಠಾಣೆಯಲ್ಲಿ ಸೂರ್ಯ ಪ್ರಕಾಶ್ ನೋಡಿದ್ರೆ ದಿನ ನಿನ್ನ ಮುಖ ನೋಡಬೇಕಲ್ಲ ಎಂದು ಕೊಂಕು ಮಾತಾಡಿ ನಿಂದಿಸಿದ್ದಾರೆ ಎಂದು ಪ್ರಕಾಶ್​ ಆರೋಪ ಮಾಡಿದ್ದಾರೆ.

ಸದ್ಯ ಪರಪ್ಪನ ಅಗ್ರಹಾರ ಪೊಲೀಸರ ವರ್ತನೆಗೆ ಬೇಸತ್ತ ಸೂರ್ಯ ಪ್ರಕಾಶ್ ಕುಟುಂಬ ಸಮೇತ ನಗರ ಪೊಲೀಸ್ ಆಯುಕ್ತರ ಕಚೇರಿ ಬಾಗಿಲು ಬಡಿದಿದ್ದಾರೆ. ತನಗಾದ ಅನ್ಯಾಯ ಸರಿಪಡಿಸಿಕೊಡಬೇಕೆಂದು ಮನವಿ ಮಾಡಿದ್ದಾರೆ. ಸದ್ಯ ಈತನ ದೂರು ಕಮಿಷನರ್ ಗೆ ತಲುಪಿದ್ದು ಈಗಲಾದರೂ ನ್ಯಾಯ ಸಿಗುತ್ತಾ ಕಾದು ನೋಡಬೇಕು.

ವರದಿ: ಪ್ರದೀಪ್ ಚಿಕ್ಕಾಟೆ, ಟಿವಿ9 ಬೆಂಗಳೂರು

Published On - 10:35 pm, Mon, 17 March 25

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?