AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ನಿಲ್ಲದ ಬೀದಿ ಪುಂಡರ ಹಾವಳಿ: ಯುವತಿ ಎದೆ ಮುಟ್ಟಿ ವಿಕೃತಿ ಮರೆದ ಕಾಮುಕ

ರಾಜಧಾನಿ ಬೆಂಗಳೂರು ಹೆಣ್ಮಕ್ಕಳಿಗೆ ಸೇಫ್‌ ಸಿಟಿ ಎಂಬ ಮಾತಿದೆ. ಆದರೆ ಕೆಲ ಬೀದಿ ಪುಂಡರು ಈ ಹೆಸರನ್ನು ಹಾಳು ಮಾಡುವ ಕೆಲಸ ಮಾಡುತ್ತಿದ್ದಾರೆ. ಜನಜಂಗುಳಿ ಮಧ್ಯೆಯೇ ಯಾರ ಭಯವು ಇಲ್ಲದೇ ಯುವತಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ. ಹಿಂದೊಮ್ಮೆ ನಮ್ಮ ಮೆಟ್ರೋ ರೈಲಿನಲ್ಲಿ ಯುವತಿಯರಿಗೆ ಬೇಕಂತೆ ಸ್ಪರ್ಶಿಸಿ ವಿಕೃತಿ ಮೆರೆದಿದ್ದರು. ಇದೀಗ ಯುವತಿಯ ಎದೆ ಮುಟ್ಟಿ ವಿಕೃತಿ ಮರೆದಿರುವ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.

ಬೆಂಗಳೂರಲ್ಲಿ ನಿಲ್ಲದ ಬೀದಿ ಪುಂಡರ ಹಾವಳಿ: ಯುವತಿ ಎದೆ ಮುಟ್ಟಿ ವಿಕೃತಿ ಮರೆದ ಕಾಮುಕ
ಬಿ ಮೂರ್ತಿ, ನೆಲಮಂಗಲ
| Edited By: |

Updated on:Jul 01, 2024 | 7:44 PM

Share

ಬೆಂಗಳೂರು, (ಜುಲೈ 01): ಜ್ಯೂಸ್ ಕುಡಿದುಕೊಂಡು ವಾಪಸ್ ಬರುತ್ತಿದ್ದ ಯುವತಿಯ ಎದೆ ಮುಟ್ಟಿ ವಿಕೃತಿ ಮರೆದಿರುವ ಘಟನೆ ಬೆಂಗಳೂರಿನ ಪೀಣ್ಯಾದ HMTಲೇಔಟ್​​ನಲ್ಲಿ ನಡೆದಿದೆ. 8ನೇ ಮೈಲಿಯ ಪ್ರತಿಷ್ಟಿತ ಕಾಲೇಜಿನಲ್ಲಿ ಬಿಬಿಎ ವಿದ್ಯಾರ್ಥಿಯಾಗಿರುವ ಯುವತಿ, ಪೀಣ್ಯಾದ HMTಲೇಔಟ್‌ ನಲ್ಲಿ ರಾತ್ರಿ 9:45ರ ಸುಮಾರಿಗೆ ಜ್ಯೂಸ್ ಕುಡಿದು ವಾಪಸ್ ಪಿಜಿಗೆ ತೆರಳುವಾಗ ದುರುಳನೋರ್ವ ಆಕೆಯ ಎದೆ ಭಾಗಕ್ಕೆ ಮುಟ್ಟಿದ್ದಾನೆ. ಬಳಿಕ ಯುವತಿ ಕಿರುಚಾಡಿದ್ದರಿಂದ ಕಾಮುಕ ಬೈಕ್​ನಲ್ಲಿ ಎಸ್ಕೇಪ್ ಆಗಿದ್ದಾನೆ. ಇನ್ನು ಯುವತಿಯ ಎದೆಯನ್ನು ಟಚ್​ ಮಾಡಿ ವಿಕೃತಿ ಮೆರೆದು ಪರಾರಿಯಾಗಿರುವ ದೃಶ್ಯ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದ್ದು, ಈ ಬಗ್ಗೆ ಯುವತಿ ಪೊಲೀಸರಿಗೆ ದೂರು ನೀಡಿದ್ದಾರೆ.

ಯುವತಿ ದೂರಿನ ಮೇರೆಗೆ ಇದೀಗ ಪರಾರಿಯಾಗಿರುವ ಆರೋಪಿ ವಿರುದ್ಧ IPC 354(a),354 ಅಡಿಯಲ್ಲಿ ಪೀಣ್ಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.

ಇದೇ ರೀತಿ ಬೆಂಗಳೂರಿನಲ್ಲಿ ಈ ಹಿಂದೆ ನಡೆದಿತ್ತು

ಇನ್ನು ಜನವರಿಯಲ್ಲಿ ಇದೇ ರೀತಿಯ ಪ್ರಕರಣ ಬೆಂಗಳೂರಿನಲ್ಲಿ ನಡೆದಿತ್ತು. ಬೆಂಗಳೂರಿನ ವಿಜಯನಗರದ ಕೃಷ್ಣ ಸಾಗರ್ ಹೋಟೆಲ್ ಬಳಿ ಯುವತಿಗೆ ಲೈಂಗಿಕ‌ ಕಿರುಕುಳ ನೀಡಿದ್ದರು. ಯುವತಿಯೊಬ್ಬಳು ತನ್ನ ಸ್ನೇಹಿತೆಯೊಂದಿಗೆ ತಿಂಡಿ ಪಾಸರ್ಲ್‌ ಪಡೆಯಲು ನಿಂತಿದ್ದಾಗ ವೇಳೆ ಅಲ್ಲಿಗೆ ಬಂದಿದ್ದ ಮೂವರು ಪುಂಡರು, ಕೀಟಲೆ ಮಾಡುತ್ತ ಯುವತಿಯನ್ನು ಹಿಂದಿನಿಂದ ಟಚ್​ ಮಾಡಿದ್ದರು.

ಫೋನ್‌ನಲ್ಲಿ ಮಾತಾಡುತ್ತಿದ್ದ ಯುವತಿಗೆ ಹಿಂದಿನಿಂದ ಬಂದ ಕಾಮುಕ ಬೇಕು ಬೇಕಂತಲೇ ಟಚ್‌ ಮಾಡಿದ್ದ. ಯುವಕನಿಂದ ಸ್ಪರ್ಶಿಸುತ್ತಿದ್ದಂತೆ ಯುವತಿ ಬೆಚ್ಚಿದ್ದಾಳೆ, ನಂತರ ಪ್ರಶ್ನಿಸಲು ಮುಂದಾಗಿದ್ದಾಳೆ. ತಮ್ಮದೇನು ತಪ್ಪೇ ಇಲ್ಲ ಎಂಬಂತೆ ಪುಂಡರು ವಾದ ಮಾಡಿ ಅಲ್ಲಿಂದ ಕಾಲ್ಕಿತ್ತಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:41 pm, Mon, 1 July 24

Follow Us
ಬಿ ಮೂರ್ತಿ, ನೆಲಮಂಗಲ
ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?