AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ನಿಲ್ಲದ ಬೀದಿ ಪುಂಡರ ಹಾವಳಿ: ಯುವತಿ ಎದೆ ಮುಟ್ಟಿ ವಿಕೃತಿ ಮರೆದ ಕಾಮುಕ

ರಾಜಧಾನಿ ಬೆಂಗಳೂರು ಹೆಣ್ಮಕ್ಕಳಿಗೆ ಸೇಫ್‌ ಸಿಟಿ ಎಂಬ ಮಾತಿದೆ. ಆದರೆ ಕೆಲ ಬೀದಿ ಪುಂಡರು ಈ ಹೆಸರನ್ನು ಹಾಳು ಮಾಡುವ ಕೆಲಸ ಮಾಡುತ್ತಿದ್ದಾರೆ. ಜನಜಂಗುಳಿ ಮಧ್ಯೆಯೇ ಯಾರ ಭಯವು ಇಲ್ಲದೇ ಯುವತಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ. ಹಿಂದೊಮ್ಮೆ ನಮ್ಮ ಮೆಟ್ರೋ ರೈಲಿನಲ್ಲಿ ಯುವತಿಯರಿಗೆ ಬೇಕಂತೆ ಸ್ಪರ್ಶಿಸಿ ವಿಕೃತಿ ಮೆರೆದಿದ್ದರು. ಇದೀಗ ಯುವತಿಯ ಎದೆ ಮುಟ್ಟಿ ವಿಕೃತಿ ಮರೆದಿರುವ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.

ಬೆಂಗಳೂರಲ್ಲಿ ನಿಲ್ಲದ ಬೀದಿ ಪುಂಡರ ಹಾವಳಿ: ಯುವತಿ ಎದೆ ಮುಟ್ಟಿ ವಿಕೃತಿ ಮರೆದ ಕಾಮುಕ
ಬಿ ಮೂರ್ತಿ, ನೆಲಮಂಗಲ
| Edited By: |

Updated on:Jul 01, 2024 | 7:44 PM

Share

ಬೆಂಗಳೂರು, (ಜುಲೈ 01): ಜ್ಯೂಸ್ ಕುಡಿದುಕೊಂಡು ವಾಪಸ್ ಬರುತ್ತಿದ್ದ ಯುವತಿಯ ಎದೆ ಮುಟ್ಟಿ ವಿಕೃತಿ ಮರೆದಿರುವ ಘಟನೆ ಬೆಂಗಳೂರಿನ ಪೀಣ್ಯಾದ HMTಲೇಔಟ್​​ನಲ್ಲಿ ನಡೆದಿದೆ. 8ನೇ ಮೈಲಿಯ ಪ್ರತಿಷ್ಟಿತ ಕಾಲೇಜಿನಲ್ಲಿ ಬಿಬಿಎ ವಿದ್ಯಾರ್ಥಿಯಾಗಿರುವ ಯುವತಿ, ಪೀಣ್ಯಾದ HMTಲೇಔಟ್‌ ನಲ್ಲಿ ರಾತ್ರಿ 9:45ರ ಸುಮಾರಿಗೆ ಜ್ಯೂಸ್ ಕುಡಿದು ವಾಪಸ್ ಪಿಜಿಗೆ ತೆರಳುವಾಗ ದುರುಳನೋರ್ವ ಆಕೆಯ ಎದೆ ಭಾಗಕ್ಕೆ ಮುಟ್ಟಿದ್ದಾನೆ. ಬಳಿಕ ಯುವತಿ ಕಿರುಚಾಡಿದ್ದರಿಂದ ಕಾಮುಕ ಬೈಕ್​ನಲ್ಲಿ ಎಸ್ಕೇಪ್ ಆಗಿದ್ದಾನೆ. ಇನ್ನು ಯುವತಿಯ ಎದೆಯನ್ನು ಟಚ್​ ಮಾಡಿ ವಿಕೃತಿ ಮೆರೆದು ಪರಾರಿಯಾಗಿರುವ ದೃಶ್ಯ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದ್ದು, ಈ ಬಗ್ಗೆ ಯುವತಿ ಪೊಲೀಸರಿಗೆ ದೂರು ನೀಡಿದ್ದಾರೆ.

ಯುವತಿ ದೂರಿನ ಮೇರೆಗೆ ಇದೀಗ ಪರಾರಿಯಾಗಿರುವ ಆರೋಪಿ ವಿರುದ್ಧ IPC 354(a),354 ಅಡಿಯಲ್ಲಿ ಪೀಣ್ಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.

ಇದೇ ರೀತಿ ಬೆಂಗಳೂರಿನಲ್ಲಿ ಈ ಹಿಂದೆ ನಡೆದಿತ್ತು

ಇನ್ನು ಜನವರಿಯಲ್ಲಿ ಇದೇ ರೀತಿಯ ಪ್ರಕರಣ ಬೆಂಗಳೂರಿನಲ್ಲಿ ನಡೆದಿತ್ತು. ಬೆಂಗಳೂರಿನ ವಿಜಯನಗರದ ಕೃಷ್ಣ ಸಾಗರ್ ಹೋಟೆಲ್ ಬಳಿ ಯುವತಿಗೆ ಲೈಂಗಿಕ‌ ಕಿರುಕುಳ ನೀಡಿದ್ದರು. ಯುವತಿಯೊಬ್ಬಳು ತನ್ನ ಸ್ನೇಹಿತೆಯೊಂದಿಗೆ ತಿಂಡಿ ಪಾಸರ್ಲ್‌ ಪಡೆಯಲು ನಿಂತಿದ್ದಾಗ ವೇಳೆ ಅಲ್ಲಿಗೆ ಬಂದಿದ್ದ ಮೂವರು ಪುಂಡರು, ಕೀಟಲೆ ಮಾಡುತ್ತ ಯುವತಿಯನ್ನು ಹಿಂದಿನಿಂದ ಟಚ್​ ಮಾಡಿದ್ದರು.

ಫೋನ್‌ನಲ್ಲಿ ಮಾತಾಡುತ್ತಿದ್ದ ಯುವತಿಗೆ ಹಿಂದಿನಿಂದ ಬಂದ ಕಾಮುಕ ಬೇಕು ಬೇಕಂತಲೇ ಟಚ್‌ ಮಾಡಿದ್ದ. ಯುವಕನಿಂದ ಸ್ಪರ್ಶಿಸುತ್ತಿದ್ದಂತೆ ಯುವತಿ ಬೆಚ್ಚಿದ್ದಾಳೆ, ನಂತರ ಪ್ರಶ್ನಿಸಲು ಮುಂದಾಗಿದ್ದಾಳೆ. ತಮ್ಮದೇನು ತಪ್ಪೇ ಇಲ್ಲ ಎಂಬಂತೆ ಪುಂಡರು ವಾದ ಮಾಡಿ ಅಲ್ಲಿಂದ ಕಾಲ್ಕಿತ್ತಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:41 pm, Mon, 1 July 24

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ