AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ನಿಲ್ಲದ ಬೀದಿ ಪುಂಡರ ಹಾವಳಿ: ಯುವತಿ ಎದೆ ಮುಟ್ಟಿ ವಿಕೃತಿ ಮರೆದ ಕಾಮುಕ

ರಾಜಧಾನಿ ಬೆಂಗಳೂರು ಹೆಣ್ಮಕ್ಕಳಿಗೆ ಸೇಫ್‌ ಸಿಟಿ ಎಂಬ ಮಾತಿದೆ. ಆದರೆ ಕೆಲ ಬೀದಿ ಪುಂಡರು ಈ ಹೆಸರನ್ನು ಹಾಳು ಮಾಡುವ ಕೆಲಸ ಮಾಡುತ್ತಿದ್ದಾರೆ. ಜನಜಂಗುಳಿ ಮಧ್ಯೆಯೇ ಯಾರ ಭಯವು ಇಲ್ಲದೇ ಯುವತಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ. ಹಿಂದೊಮ್ಮೆ ನಮ್ಮ ಮೆಟ್ರೋ ರೈಲಿನಲ್ಲಿ ಯುವತಿಯರಿಗೆ ಬೇಕಂತೆ ಸ್ಪರ್ಶಿಸಿ ವಿಕೃತಿ ಮೆರೆದಿದ್ದರು. ಇದೀಗ ಯುವತಿಯ ಎದೆ ಮುಟ್ಟಿ ವಿಕೃತಿ ಮರೆದಿರುವ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.

ಬೆಂಗಳೂರಲ್ಲಿ ನಿಲ್ಲದ ಬೀದಿ ಪುಂಡರ ಹಾವಳಿ: ಯುವತಿ ಎದೆ ಮುಟ್ಟಿ ವಿಕೃತಿ ಮರೆದ ಕಾಮುಕ
ಬಿ ಮೂರ್ತಿ, ನೆಲಮಂಗಲ
| Updated By: ರಮೇಶ್ ಬಿ. ಜವಳಗೇರಾ|

Updated on:Jul 01, 2024 | 7:44 PM

Share

ಬೆಂಗಳೂರು, (ಜುಲೈ 01): ಜ್ಯೂಸ್ ಕುಡಿದುಕೊಂಡು ವಾಪಸ್ ಬರುತ್ತಿದ್ದ ಯುವತಿಯ ಎದೆ ಮುಟ್ಟಿ ವಿಕೃತಿ ಮರೆದಿರುವ ಘಟನೆ ಬೆಂಗಳೂರಿನ ಪೀಣ್ಯಾದ HMTಲೇಔಟ್​​ನಲ್ಲಿ ನಡೆದಿದೆ. 8ನೇ ಮೈಲಿಯ ಪ್ರತಿಷ್ಟಿತ ಕಾಲೇಜಿನಲ್ಲಿ ಬಿಬಿಎ ವಿದ್ಯಾರ್ಥಿಯಾಗಿರುವ ಯುವತಿ, ಪೀಣ್ಯಾದ HMTಲೇಔಟ್‌ ನಲ್ಲಿ ರಾತ್ರಿ 9:45ರ ಸುಮಾರಿಗೆ ಜ್ಯೂಸ್ ಕುಡಿದು ವಾಪಸ್ ಪಿಜಿಗೆ ತೆರಳುವಾಗ ದುರುಳನೋರ್ವ ಆಕೆಯ ಎದೆ ಭಾಗಕ್ಕೆ ಮುಟ್ಟಿದ್ದಾನೆ. ಬಳಿಕ ಯುವತಿ ಕಿರುಚಾಡಿದ್ದರಿಂದ ಕಾಮುಕ ಬೈಕ್​ನಲ್ಲಿ ಎಸ್ಕೇಪ್ ಆಗಿದ್ದಾನೆ. ಇನ್ನು ಯುವತಿಯ ಎದೆಯನ್ನು ಟಚ್​ ಮಾಡಿ ವಿಕೃತಿ ಮೆರೆದು ಪರಾರಿಯಾಗಿರುವ ದೃಶ್ಯ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದ್ದು, ಈ ಬಗ್ಗೆ ಯುವತಿ ಪೊಲೀಸರಿಗೆ ದೂರು ನೀಡಿದ್ದಾರೆ.

ಯುವತಿ ದೂರಿನ ಮೇರೆಗೆ ಇದೀಗ ಪರಾರಿಯಾಗಿರುವ ಆರೋಪಿ ವಿರುದ್ಧ IPC 354(a),354 ಅಡಿಯಲ್ಲಿ ಪೀಣ್ಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.

ಇದೇ ರೀತಿ ಬೆಂಗಳೂರಿನಲ್ಲಿ ಈ ಹಿಂದೆ ನಡೆದಿತ್ತು

ಇನ್ನು ಜನವರಿಯಲ್ಲಿ ಇದೇ ರೀತಿಯ ಪ್ರಕರಣ ಬೆಂಗಳೂರಿನಲ್ಲಿ ನಡೆದಿತ್ತು. ಬೆಂಗಳೂರಿನ ವಿಜಯನಗರದ ಕೃಷ್ಣ ಸಾಗರ್ ಹೋಟೆಲ್ ಬಳಿ ಯುವತಿಗೆ ಲೈಂಗಿಕ‌ ಕಿರುಕುಳ ನೀಡಿದ್ದರು. ಯುವತಿಯೊಬ್ಬಳು ತನ್ನ ಸ್ನೇಹಿತೆಯೊಂದಿಗೆ ತಿಂಡಿ ಪಾಸರ್ಲ್‌ ಪಡೆಯಲು ನಿಂತಿದ್ದಾಗ ವೇಳೆ ಅಲ್ಲಿಗೆ ಬಂದಿದ್ದ ಮೂವರು ಪುಂಡರು, ಕೀಟಲೆ ಮಾಡುತ್ತ ಯುವತಿಯನ್ನು ಹಿಂದಿನಿಂದ ಟಚ್​ ಮಾಡಿದ್ದರು.

ಫೋನ್‌ನಲ್ಲಿ ಮಾತಾಡುತ್ತಿದ್ದ ಯುವತಿಗೆ ಹಿಂದಿನಿಂದ ಬಂದ ಕಾಮುಕ ಬೇಕು ಬೇಕಂತಲೇ ಟಚ್‌ ಮಾಡಿದ್ದ. ಯುವಕನಿಂದ ಸ್ಪರ್ಶಿಸುತ್ತಿದ್ದಂತೆ ಯುವತಿ ಬೆಚ್ಚಿದ್ದಾಳೆ, ನಂತರ ಪ್ರಶ್ನಿಸಲು ಮುಂದಾಗಿದ್ದಾಳೆ. ತಮ್ಮದೇನು ತಪ್ಪೇ ಇಲ್ಲ ಎಂಬಂತೆ ಪುಂಡರು ವಾದ ಮಾಡಿ ಅಲ್ಲಿಂದ ಕಾಲ್ಕಿತ್ತಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:41 pm, Mon, 1 July 24

ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್