AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶೇಷ ಚೇತನ ಯುವತಿ ಅತ್ಯಾಚಾರ ಯತ್ನ: ಕಾಮುಕನಿಗೆ ಸ್ಥಳೀಯರಿಂದ ಬಿತ್ತು ಧರ್ಮದೇಟು

ಬೆಂಗಳೂರಿನ ಆಡುಗೋಡಿಯಲ್ಲಿ ವಿಶೇಷ ಚೇತನ ಯುವತಿ ಮೇಲೆ ಗಾಂಜಾ ನಶೆಯಲ್ಲಿದ್ದ ಕಾಮುಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ನಡೆದ ಈ ಕೃತ್ಯದ ಆರೋಪಿಯನ್ನು ಸ್ಥಳೀಯರು ಹಿಡಿದು ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ. ಇಂತಹ ಅಮಾನವೀಯ ಕೃತ್ಯಕ್ಕೆ ತಕ್ಕ ಶಿಕ್ಷೆಯಾಗಬೇಕೆಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಶೇಷ ಚೇತನ ಯುವತಿ ಅತ್ಯಾಚಾರ ಯತ್ನ: ಕಾಮುಕನಿಗೆ ಸ್ಥಳೀಯರಿಂದ ಬಿತ್ತು  ಧರ್ಮದೇಟು
ಆರೋಪಿ ಬಂಧನ
ರಾಚಪ್ಪಾಜಿ ನಾಯ್ಕ್
| Edited By: |

Updated on:Nov 12, 2025 | 8:46 AM

Share

ಬೆಂಗಳೂರು, ನವೆಂಬರ್​ 12: ಗಾಂಜಾ ನಶೆಯಲ್ಲಿದ್ದ ಕಾಮುಕನೊಬ್ಬ ವಿಶೇಷ ಚೇತನ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಅಮಾನವೀಯ ಘಟನೆ ಬೆಂಗಳೂರಿನ ಆಡುಗೋಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿಘ್ನೇಶ್ ಅಲಿಯಾಸ್​​ ದಾಡು ಎಂಬಾತನಿಂದ ಕೃತ್ಯ ನಡೆದಿದ್ದು, ಆರೋಪಿಯನ್ನು ಹಿಡಿದು ಥಳಿಸಿರುವ ಸ್ಥಳೀಯರು ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಆರೋಪಿ ಅತ್ಯಾಚಾರಕ್ಕೆ ಯತ್ನಿಸಿದ್ದ ಎನ್ನಲಾಗಿದೆ. ನವೆಂಬರ್​ 9ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಮದುವೆಗೆ ಎಂದು ಸಂತ್ರಸ್ತೆ ಕುಟುಂಬಸ್ಥರು ತೆರಳಿದ್ದು, ವಿಶೇಷ ಚೇತನ ಯುವತಿಯನ್ನ ಮನೆಯಲ್ಲೇ ಬಿಟ್ಟು ಹೋಗಿದ್ದರು. ಬೆಳಗ್ಗೆ 11 ಗಂಟೆ ಸುಮಾರಿಗೆ ಬಂದ ಗಾಂಜಾ ನಶೆಯಲ್ಲಿದ್ದ ಆರೋಪಿ ವಿಘ್ನೇಶ್, ಚಿಲಕ ಹಾಕಿದ್ದ ಮನೆಗೆ ನುಗ್ಗಿದ್ದಾನೆ. ಬಳಿಕ ಮನೆಯ ಒಳಗಿನಿಂದ ಚಿಲಕ ಹಾಕಿಕೊಂಡಿದ್ದಾನೆ. ಈ ವೇಳೆ ಮಗಳನ್ನು ನೋಡಿಕೊಂಡು ಹೋಗೋಣ ಎಂದು ತಾಯಿ ಬಂದಾಗ ಮನೆ ಒಳಗಿನಿಂದ ಚಿಲಕ ಹಾಕಿರುವುದು ಗೊತ್ತಾಗಿದೆ. ಹೀಗಾಗಿ ಕಾಲಿನಿಂದ ಒದ್ದು ಆಕೆ ಬಾಗಿಲನ್ನು ತೆರೆದಿದ್ದು, ಮಗಳ ಸ್ಥಿತಿ ಕಂಡು ಶಾಕ್​ ಆಗಿದ್ದಾಳೆ. ವಿಶೇಷ ಚೇತನ ಯುವತಿ ಮೇಲೆ ಅತ್ಯಾಚಾರ ನಡೆಸಲು ಮುಂದಾಗಿದ್ದ ಆರೋಪಿ, ಆಕೆಯ ಬಟ್ಟೆಗಳನ್ನೆಲ್ಲ ತೆಗಿದಿದ್ದ. ಬಾಗಿಲು ಓಪನ್​ ಆದ ಹಿನ್ನಲೆ ಅವಿತು ಕುಳಿತಿದ್ದ. ಸಂತ್ರಸ್ತೆ ತಾಯಿಯ ಕಣ್ಣಿಗೆ ಬಿದ್ದಿದ್ದೇ ತಡ, ಒಳ ಉಡುಪು ಧರಿಸಿ ಎಸ್ಕೇಪ್​ ಆಗಿದ್ದಾನೆ.

ಇದನ್ನೂ ಓದಿ: ಆಸ್ತಿ ಆಸೆ,  ಸ್ಕೆಚ್​ ಹಾಕಿ ಸಾಕು ತಾಯಿಯನ್ನೇ ಮುಗಿಸಿದ ಮಗಳು

ಆರೋಪಿಗೆ ಸ್ಥಳೀಯರಿಂದ ಥಳಿತ

ಘಟನೆ ಬಳಿಕ ತಕ್ಷಣ ಅಲರ್ಟ್​ ಆದ ಸ್ಥಳೀಯರು ಆರೋಪಿ ವಿಘ್ನೆಶ್​ನನ್ನು ಹಿಡಿದು ಮನಸೋ ಇಚ್ಛೆ ತಳಿಸಿದ್ದಾರೆ. ಬಳಿಕ ಪೊಲೀಸರಿಗೆ ವಿಘ್ನೇಶ್​​ನನ್ನು ಒಪ್ಪಿಸಲಾಗಿದ್ದು, ಆರೋಪಿಯನ್ನ ಆಡುಗೋಡಿ ಪೊಲೀಸರು ಬಂಧಿಸಿದ್ದಾರೆ. ಮಾತು ಬಾರದ, ಕಾಲು ಸ್ವಾಧೀನವಿಲ್ಲದ ಯುವತಿ ಮೇಲೆ ಈತ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಬೆಳವಣಿಗೆ ಇಲ್ಲದೆ ಇನ್ನು ಮಗುವಿನಂತೆ ಇರುವ ವಿಶೇಷ ಚೇತನ ಯುವತಿ ಮೇಲೆ ಕಣ್ಣು ಹಾಕಿರುವ ಈ ಕಾಮುಕನಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಏರಿಯಾ ಜನರು ಆಗ್ರಹಿಸಿದ್ದಾರೆ. ಇವತ್ತು ಈ ಮಗುವಿಗೆ ಹೀಗೆ ಮಾಡಿದ್ದಾನೆ, ನಾಳೆ ನಮ್ಮ ಮನೆ ಮಕ್ಕಳಿಗೂ ಇದೇ ರೀತಿ ಮಾಡಬಹುದು. ಹಾಗಾಗಿ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು ಎಂಬ ಆಗ್ರಹ ಸ್ಥಳೀಯರಿಂದ ವ್ಯಕ್ತವಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:44 am, Wed, 12 November 25

Follow Us
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ
ಕೊಡಗು: ಪ್ರವಾಸಿಗರ ಬಸ್ ಪಲ್ಟಿ; 22ಕ್ಕೂ ಹೆಚ್ಚು ಜನರಿಗೆ ಗಾಯ
ಕೊಡಗು: ಪ್ರವಾಸಿಗರ ಬಸ್ ಪಲ್ಟಿ; 22ಕ್ಕೂ ಹೆಚ್ಚು ಜನರಿಗೆ ಗಾಯ
ಜೆಡಿಎಸ್ ಪಾದಯಾತ್ರೆ ತಡೆದ ಪೊಲೀಸರು: ಭಾರಿ ಹೈಡ್ರಾಮಾ
ಜೆಡಿಎಸ್ ಪಾದಯಾತ್ರೆ ತಡೆದ ಪೊಲೀಸರು: ಭಾರಿ ಹೈಡ್ರಾಮಾ
ಬೆಂಗಳೂರಲ್ಲಿ ಅಬ್ಬರಿಸಿದ ವರುಣ: ಕೆರೆಗಳಂತಾದ ರಸ್ತೆಗಳು; ಸವಾರರು ಪರದಾಟ
ಬೆಂಗಳೂರಲ್ಲಿ ಅಬ್ಬರಿಸಿದ ವರುಣ: ಕೆರೆಗಳಂತಾದ ರಸ್ತೆಗಳು; ಸವಾರರು ಪರದಾಟ