AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವ್ಯಾಪಾರಕ್ಕೆಂದು ಬಂದು ಮಹಿಳೆಯ ಸಹವಾಸ ಮಾಡಿ ಬರ್ಬರ ಹತ್ಯೆಯಾದ ಈರುಳ್ಳಿ ವ್ಯಾಪಾರಿ!

ತಮಿಳುನಾಡು ಮೂಲದ ಈರುಳ್ಳಿ ವ್ಯಾಪಾರಿಯೊಬ್ಬ ಬೆಂಗಳೂರಿನಲ್ಲಿ ಬರ್ಬರವಾಗಿ ಹತ್ಯೆಯಾಗಿದ್ದಾನೆ. ವ್ಯಾಪಾರಕ್ಕೆಂದು ಬಂದು ಮಹಿಳೆಯ ಸಹವಾಸ ಮಾಡಿದ್ದ. ಇದೀಗ ಮಹಿಳೆಯ ಸಹವಾಸದಿಂದಲೇ ಈರುಳ್ಳಿ ವ್ಯಾಪಾರಿ ಜೀವ ಕಳೆದುಕೊಂಡಿದ್ದಾನೆ. ಮಹಿಳೆಯ ಮನೆಗೆ ಹೋಗಿದ್ದಾಗಲೇ ಈರುಳ್ಳಿ ವ್ಯಾಪಾರಿ ಕೊಲೆಯಾಗಿದ್ದಾನೆ. ಅಷ್ಟಕ್ಕೂ ಕೊಲೆ ಮಾಡಿದ್ಯಾರು? ನಡೆದಿದ್ದೇನು? ಎನ್ನುವ ಡಿಟೇಲ್ಸ್ ಇಲ್ಲಿದೆ.

ವ್ಯಾಪಾರಕ್ಕೆಂದು ಬಂದು ಮಹಿಳೆಯ ಸಹವಾಸ ಮಾಡಿ ಬರ್ಬರ ಹತ್ಯೆಯಾದ ಈರುಳ್ಳಿ ವ್ಯಾಪಾರಿ!
ರಾಮಚಂದ್ರ ರೆಡ್ಡಿ(ಕೊಲೆಯಾದವ), ಹರೀಶ್(ಹಂತಕ)
ರಮೇಶ್ ಬಿ. ಜವಳಗೇರಾ
|

Updated on: Apr 25, 2026 | 9:30 PM

Share

ಬೆಂಗಳೂರು, (ಏಪ್ರಿಲ್ 25): ಮಹಿಳೆಯೊಬ್ಬರ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಈರುಳ್ಳಿ ವ್ಯಾಪಾರಿ (onion merchant) ಬರ್ಬರವಾಗಿ ಹತ್ಯೆಯಾಗಿದ್ದಾನೆ. ಬೆಂಗಳೂರಿನ (Bengaluru) ಕಾಡುಗೋಡಿ ಠಾಣೆ ವ್ಯಾಪ್ತಿಯಲ್ಲಿ ಈ ಕೊಲೆ ನಡೆದಿದ್ದು, ರಾಮಚಂದ್ರ ರೆಡ್ಡಿ ಕೊಲೆಯಾದ ವ್ಯಕ್ತಿ. ತಮಿಳುನಾಡು ಮೂಲದ ರಾಮಚಂದ್ರ ರೆಡ್ಡಿ ಈರುಳ್ಳಿ ವ್ಯಾಪಾರಿಯಾಗಿದ್ದು (Tamil nadu onion merchant), ವ್ಯಾಪಾರಕ್ಕೆಂದು ಬೆಂಗಳೂರಿಗೆ  ಮಹಿಳೆಯೊಬ್ಬರ ಪರಿಚಯವಾಗಿ ಅದು ಅನೈತಿಕ ಸಂಬಂಧಕ್ಕೆ ತಿರುಗಿತ್ತು.  ಬಳಿಕ ಬೆಂಗಳೂರಿಗೆ ಬಂದಾಗೆಲ್ಲಾ ಮಹಿಳೆಯ ಮನೆಗೆ ಹೋಗಿ ಬರ್ತಿದ್ದ. ಅದರಂತೆ ನಿನ್ನೆ(ಏಪ್ರಿಲ್ 25) ಸಹ ಮಹಿಳೆಯ ಮನೆಗೆ ತೆರಳಿದ್ದ ವೇಳೆ ಬರ್ಬರವಾಗಿ ಹತ್ಯೆಯಾಗಿದ್ದಾನೆ.  ಮಹಿಳೆಯ ಹೊಸ ಪ್ರಿಯಕರ ಹರೀಶ್ , ಎನ್ನುವಾತನೇ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

ಈರುಳ್ಳಿ ವ್ಯಾಪಾರಿಯಾಗಿದ್ದ ತಮಿಳುನಾಡು ಮೂಲದ ರಾಮಚಂದ್ರ ರೆಡ್ಡಿ, ವ್ಯಾಪಾರಕ್ಕೆಂದು ಬೆಂಗಳೂರಿಗೆ ಬರುತ್ತಿದ್ದ. ಆ ಸಂದರ್ಭದಲ್ಲಿ ರಾಮಚಂದ್ರ ರೆಡ್ಡಿಗೆ ಮಹಿಳೆಯೊಬ್ಬರ ಪರಿಚಯವಾಗಿದ್ದು, ಬಳಿಕ ಇಬ್ಬರ ಸ್ನೇಹ ಅನೈತಿಕ ಸಂಬಂಧಕ್ಕೆ ತಿರುಗಿತ್ತು. ಹೀಗಾಗಿ ಬೆಂಗಳೂರಿಗೆ ಬಂದಾಗೆಲ್ಲ ಮಹಿಳೆಯ ಮನೆಗೆ ಹೋಗಿ ಬರುತ್ತಿದ್ದ. ಈ ನಡುವೆ ಮಹಿಳೆಗೆ ಹರೀಶ್ ಎಂಬಾತನ ಪರಿಚಯವಾಗಿದ್ದು, ಇಬ್ಬರ ಮಧ್ಯೆ ಪ್ರೀತಿ ಕೂಡ ಶುರು ಆಗಿದೆ. ಆದ್ರೆ ಇತ್ತೀಚೆಗೆ ರಾಮಚಂದ್ರ ರೆಡ್ಡಿ ಬಂದು ಹೋಗುವುದು ಹರೀಶ್ ಗೆ ಗೊತ್ತಾಗಿದ್ದು, ಪ್ರೇಯಸಿಯ ಸಂಬಂಧವನ್ನ ಸಹಿಸದೆ ಆಕ್ರೋಶಗೊಂಡಿದ್ದ. ಅಲ್ಲದೇ ಇದಕ್ಕೆ ಅಂತ್ಯಹಾಡಬೇಕೆಂದು ಪ್ಲ್ಯಾನ್ ಮಾಡಿದ್ದ.

ಇದನ್ನೂ ಓದಿ: ಮೈಸೂರು: ಕುಡಿತದ ಚಟಕ್ಕೆ ದಾಸನಾದ ಮಗ, ಕಾಟ ತಾಳಲಾರದೇ ಕೊಂದೇ ಬಿಟ್ಲು ಹೆತ್ತಮ್ಮ

ಈ ಸಂದರ್ಭದಲ್ಲಿ ರಾಮಚಂದ್ರ ರೆಡ್ಡಿ  ಸಹ ನಿನ್ನೆ (ಏಪ್ರಿಲ್ 25) ಮಹಿಳೆಯ ಮನೆಗೆ ಬಂದಿದ್ದು,  ಬಳಿಕ ಅಲ್ಲೇ ಇದ್ದ ದೇವಸ್ಥಾನವೊಂದರ ಬಳಿ ಮಲಗಿದ್ದ. ಇದೇ ಸಮಯಕ್ಕೆ ಮಹಿಳೆಯ ಪ್ರಿಯಕರ ಹರೀಶ್ ಬಂದು ರಾಮಚಂದ್ರ ರೆಡ್ಡಿ ಮೇಲೆ ಕಲ್ಲು ಎತ್ತಿ ಹಾಕಿ ಕೊಂದಿದ್ದಾನೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಕಾಡುಗೋಡಿ ಪೊಲೀಸರು, ಹಂತಕ ಹರೀಶ್​​ನನ್ನು ಬಂಧಿಸಿದ್ದಾರೆ.

ವರದಿ: ವಿಕಾಸ್, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!