AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆಕ್​ಬೌನ್ಸ್​ ಪ್ರಕರಣ: ಕೋರ್ಟ್​ ಆದೇಶವನ್ನೇ ಧಿಕ್ಕರಿಸಿದ ಆರೋಪಿ ಜೈಲು ಪಾಲು

ಚೆಕ್​ ಬೌನ್ಸ್​ ಪ್ರಕರಣದಲ್ಲಿ ಬಂಧನವಾಗಿದ್ದ ವ್ಯಕ್ತಿಗೆ ಕೋರ್ಟ್​ ಹಣ ಪಾವತಿ ಮಾಡುವಂತೆ ತಿಳಿಸಿ ಹೇಳಿ ಕಳುಹಿಸಿತ್ತು. ಆದ್ರೆ, ಆರೋಪಿ ನ್ಯಾಯಾಲಯದ ಆದೇಶಕ್ಕೂ ಕಿಮ್ಮತ್ತು ನೀಡದೇ ಹಣ ಕೊಡದೇ ಸತಾಯಿಸುತ್ತಿದ್ದ. ಇದರಿಂದ ಪೊಲೀಸರು ಮತ್ತೆಮ್ಮೊ ಆರೋಪಿಯನ್ನು ಬಂಧಿಸಿದ್ದು, ಇದೀಗ ಆರೋಪಿ ಜೈಲು ಪಾಲಾಗಿದ್ದಾನೆ. ಏನಿದು ಪ್ರಕರಣ ಎನ್ನುವ ವಿವರ ಇಲ್ಲಿದೆ.

ಚೆಕ್​ಬೌನ್ಸ್​ ಪ್ರಕರಣ: ಕೋರ್ಟ್​ ಆದೇಶವನ್ನೇ ಧಿಕ್ಕರಿಸಿದ ಆರೋಪಿ ಜೈಲು ಪಾಲು
Cheque Bounce Case
TV9 Web
| Edited By: |

Updated on: Feb 26, 2025 | 8:48 PM

Share

ಬೆಂಗಳೂರು, (ಫೆಬ್ರವರಿ 26): ಚೆಕ್​ ಬೌನ್ಸ್​ ಪ್ರಕರಣವೊಂದರಲ್ಲಿ ಆಹಾರ ಉತ್ಪಾದನಾ ಕಂಪನಿಯೊಂದಕ್ಕೆ 7.5 ಲಕ್ಷ ರೂಪಾಯಿ ಮೋಸ ಮಾಡಿದ್ದ ಆರೋಪಿಯನ್ನು ಯಲಹಂಕ ಪೊಲೀಸರು ಬಂಧಿಸಿದ್ದಾರೆ. ಸತ್ಯನಾರಾಯಣ ಎನ್​ ಬಂಧಿತ ಆರೋಪಿ. ನ್ಯೂಟ್ರಿ ಫೀಡ್ಸ್​ ಆ್ಯಂಡ್​ ಫಾರ್ಮ್ಸ್​ ಪ್ರೈ ಲಿ. ಕಂಪನಿಯಿಂದ ಕೋಳಿ ಮಾಂಸ ಖರೀದಿಸಿ ಅಂಗಡಿಗಳಿಗೆ ಸರಬರಾಜು ಮಾಡುವುದಾಗಿ ಹೇಳಿದ್ದ ಆರೋಪಿ ಸತ್ಯನಾರಾಯಣ, ಲೋಡ್​ ತೆಗೆದುಕೊಂಡು ಹೋಗುವಾಗ ನೀಡಿದ್ದ ಚೆಕ್ ನೀಡಿದ್ದರು. ಆದ್ರೆ, ​​ ಖಾತೆಯಲ್ಲಿ ಹಣ ಇರದ ಕಾರಣ ​ ಬೌನ್ಸ್​ ಆಗಿತ್ತು. ಹಣ ಪಾವತಿಸುವಂತೆ ಕಂಪನಿ ಸೂಚನೆ ನೀಡಿದರೂ ತಲೆ ಮರೆಸಿಕೊಂಡು ಓಡಾಡುತ್ತಿದ್ದ. ಕೊನೆಗೆ ಕಂಪನಿ ಪ್ರತಿನಿಧಿಗಳು ಯಲಹಂಕ ಪೊಲೀಸ್​ ಠಾಣೆಗೆ ದೂರು ನೀಡಿದ್ದು,

ಈ ದೂರಿನ ಆಧಾರದಲ್ಲಿ ಎಫ್​ಐಆರ್ ದಾಖಲಿಸಿಕೊಂಡ ಯಲಹಂಕ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್​​ ಹಣ ಪಾವತಿ ಮಾಡುವಂತೆ ಸೂಚಿಸಿತ್ತು. ಆದರೂ ಆತ ಹಣ ನೀಡದೇ ಮೋಸ ಮಾಡಿದ್ದ.ಈ ಮೂಲಕ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿದ ಆರೋಪಿಯನ್ನು ಪೊಲೀಸರು ಮತ್ತೆ ಬಂಧಿಸಿದ್ದು, ಇದೀಗ ಹೆಚ್ಚುವರಿ ಮ್ಯಾಜಿಸ್ಟ್ರೇಜ್​ ನ್ಯಾಯಾಲಯವು ಆರೋಪಿ ಸತ್ಯನಾರಾಯಣಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಕೋರ್ಟ್​ ಹಣ ಪಾವತಿ ಮಾಡುವಂತೆ ಸೂಚಿಸಿದ್ದರೂ ಸಹ ಡೋಂಟ್​ ಕೇರ್​ ಎಂದಿದ್ದವ ಇದೀಗ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾನೆ.

ಪೊಲೀಸ್ ಠಾಣೆಯಲ್ಲಿ ಯುವಕ ಆತ್ಮಹತ್ಯೆಗೆ ಯತ್ನ

ಮತ್ತೊಂದಡೆ ಪೊಲೀಸ್ ಠಾಣೆಯಲ್ಲಿ ಯುವಕನೋರ್ವ ಪಿನಾಯಿಲ್ ಕುಡಿದು ಆತ್ಮಹತ್ಯೆ ಯತ್ನಿಸಿರುವ ಘಟನೆ ನಡೆದಿದೆ. ಸರಗಳ್ಳತನ ಕೇಸ್ ನಲ್ಲಿ ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ರವಿ ಅಲಿಯಾಸ್ ರಾಬಿನ್ ಎನ್ನುವ ಯುವಕನನ್ನ ವಶಕ್ಕೆ ಪಡೆದುಕೊಂಡು ಬಂದು ವಿಚಾರಣೆಗೊಳಪಡಿಸಿದ್ದಾರೆ. ನಿನ್ನೆ (ಫೆ.25) ರಾತ್ರಿಯಿಂದಲೇ ಯುವಕ ಪೊಲೀಸ್ ಕಸ್ಟಡಿಯಲ್ಲಿದ್ದ. ಆದ್ರೆ, ಇಂದು ಭಯಗೊಂಡು ಬಾತ್ರೂಮ್ ನಲ್ಲಿದ್ದ ಪಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೂಡಲೇ ಪೊಲೀಸರು ಯುವಕನ್ನು ಖಾಸಗಿ ಆಸ್ಪತ್ರೆಗೆ ರವಾನಿಸಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಚಿಕಿತ್ಸೆ ಬಳಿಕ ಯುವಕನನ್ನ ಬಿಟ್ಟು ಕಳುಹಿಸಿದ್ದಾರೆ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್