Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಟ್ಟು ಹೋದ ಪತಿಯನ್ನು ಒಂದುಗೂಡಿಸುವುದಾಗಿ ನಂಬಿಸಿ ಮಹಿಳಾ ಎಫ್​ಡಿಎಗೆ ವಂಚನೆ

ಬಿಟ್ಟು ಹೋಗಿರುವ ಪತಿಯನ್ನು ವಾಪಸ್ ಜೊತೆಯಾಗಿಸುತ್ತೇನೆ ಎಂದು ನಂಬಿಸಿ ವ್ಯಕ್ತಿಯೊಬ್ಬ ಎಫ್​ಡಿಎ ಉದ್ಯೋಗಸ್ಥ ಮಹಿಳೆಗೆ ವಂಚಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ತನ್ನ ಮಗುವಿನ ಕೈಗೆ ಗಾಯದ ಸಮಸ್ಯೆ ಆಗಿತ್ತು. ಇದನ್ನು ಔಷಧಿ ಮೂಲಕ ಸರಿಪಡಿಸಿದ್ದ ವ್ಯಕ್ತಿಯನ್ನು ನಂಬಿದ ಮಹಿಳೆ, ಪತಿಗಾಗಿ ಲಕ್ಷಾಂತರ ರೂಪಾಯಿ ಕೊಟ್ಟು ಮೋಸ ಹೋಗಿದ್ದಾರೆ.

ಬಿಟ್ಟು ಹೋದ ಪತಿಯನ್ನು ಒಂದುಗೂಡಿಸುವುದಾಗಿ ನಂಬಿಸಿ ಮಹಿಳಾ ಎಫ್​ಡಿಎಗೆ ವಂಚನೆ
ಬಿಟ್ಟು ಹೋದ ಪತಿಯನ್ನು ಒಂದುಗೂಡಿಸುವುದಾಗಿ ನಂಬಿಸಿ ಎಫ್​ಡಿಎ ಉದ್ಯೋಗಸ್ಥ ಮಹಿಳೆಗೆ ವಂಚನೆ ಎಸಗಿದ ವ್ಯಕ್ತಿ (ಸಾಂದರ್ಭಿಕ ಚಿತ್ರ)
Follow us
Shivaprasad
| Updated By: ರಮೇಶ್ ಬಿ. ಜವಳಗೇರಾ

Updated on:Nov 30, 2023 | 8:11 AM

ಬೆಂಗಳೂರು, ನ.30: ಬಿಟ್ಟು ಹೋಗಿರುವ ಪತಿಯನ್ನು ವಾಪಸ್ ಜೊತೆಯಾಗಿಸುತ್ತೇನೆ ಎಂದು ನಂಬಿಸಿ ವ್ಯಕ್ತಿಯೊಬ್ಬ ಎಫ್​ಡಿಎ ಉದ್ಯೋಗಸ್ಥ ಮಹಿಳೆಗೆ ವಂಚಿಸಿದ (Cheating) ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ. ಮಹಿಳೆ ಹೆಸರಲ್ಲಿ ಲಕ್ಷ ಲಕ್ಷ ಲೋನ್ ಮಾಡಿಸಿ ಹಣ ಪಡೆದು ಸಿನಿಮೀಯ ಶೈಲಿಯಲ್ಲಿ ವಂಚನೆ ಮಾಡಿದ್ದಾಗಿ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಪ್ರಕರಣ ದಾಖಲಾಗಿದೆ. ಅತ್ತ, ಶಿರಾ ಪೊಲೀಸರ ಕೈಗೆ ಆರೋಪಿ ಸಿಕ್ಕಿಬಿದ್ದಿದ್ದಾನೆ.

ನೀರಾವರಿ ಇಲಾಖೆಯಲ್ಲಿ ಎಫ್​​ಡಿಎ ಉದ್ಯೋಗ ಮಾಡುತ್ತಿರುವ ಫಾತಿಮಾ ಎಂಬ ಮಹಿಳೆಯ ಪತಿ ಬಿಟ್ಟು ಹೋಗಿದ್ದಾನೆ. ಅಲ್ಲದೆ, ತನ್ನ ಮೂರು ವರ್ಷದ ಮಗುವಿನ ಕೈಗೆ ಗಾಯದ ಸಮಸ್ಯೆಯಿತ್ತು. ಪಕ್ಕದ ಮನೆಯರ ಮಾತು ಕೇಳಿದ ಫಾತಿಮಾ ನಾಗಮಂಗಲದಲ್ಲಿರುವ ಹಜರತ್ ನೂರ್ ಮೊಹಮ್ಮದ್​ ಎಂಬಾತನ್ನು ಸಂಪರ್ಕ ಮಾಡಿ ಔಷಧಿ ಪಡೆದಿದ್ದರು. ಕಾಕತಾಳಿಯ ಎಂಬಂತೆ ಮಗುವಿನ ಕೈ ಒಂದು ವಾರದಲ್ಲಿ ಗುಣವಾಗಿತ್ತು.

ಇದನ್ನೂ ಓದಿ: 100 ಕೋಟಿ ಹಣ ವಂಚನೆ ಪ್ರಕರಣ: ಪ್ರಕಾಶ್ ರೈಗೆ ಸಮನ್ಸ್

ಇದರಿಂದ ಹಜರತ್ ನೂರ್​ನನ್ನು ಸಂಪೂರ್ಣ ನಂಬಿದ್ದ ಫಾತಿಮಾ, ಪತಿಯನ್ನ ತನ್ನ ಜೊತೆಗಿರುವಂತೆ ಮಾಡಿ ಎಂದು ಕೇಳಿಕೊಂಡಿದ್ದರು. ಅದರಂತೆ ಪತಿ ನಿನ್ನ ಜೊತೆಗೇ ಇರುವಂತೆ ಮಾಡುತ್ತೇನೆ ಅಂತ ಒಂದು ಲಕ್ಷ ಹಣ ಪಡೆದಿದ್ದನು. ಬಳಿಕ ವೈಯಕ್ತಿಕ ಸಮಸ್ಯೆಯಿದೆ ಎಂದು ಲೋನ್ ಮಾಡಿಸಿ ಏಳು ಲಕ್ಷ ಕೊಡಿ, ಪ್ರತಿ ತಿಂಗಳು ಇಎಮ್ಐ ಹಣ ಕಟ್ಟುತ್ತೇನೆ ಅಂತ ನಂಬಿಸಿದ್ದಾನೆ.

ಪತಿಗಾಗಿ ಇದಕ್ಕೂ ಒಪ್ಪಿದ ಫಾತಿಮಾ, ಸಾಲ ಮಾಡಿ ಹಣವನ್ನು ನೀಡಿದ ನಂತರ ಹಜರತ್ ನೂರ್ ಪರಾರಿಯಾಗಿದ್ದಾನೆ. ಈ ಬಗ್ಗೆ ಫಾತಿಮಾ ನೀಡಿದ ದೂರಿನ ಮೇರೆಗೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇತ್ತ, ವಂಚನೆ ಪ್ರಕರಣದಲ್ಲಿ ಶಿರಾ ಪೊಲೀಸರು ಆರೋಪಿ ಹಜರತ್​ನನ್ನು ಬಂಧಿಸಿದ್ದು, ಬಾಡಿ ವಾರೆಂಟ್ ಪಡೆಯಲು ವಿಧಾನಸೌಧ ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:10 am, Thu, 30 November 23

ಹನಿಟ್ರ್ಯಾಪ್ ಮಾಡಲು ಬ್ಲೂ ಜೀನ್ಸ್ ಹುಡುಗಿ ಬಂದಿದ್ಳು: ರಾಜಣ್ಣ
ಹನಿಟ್ರ್ಯಾಪ್ ಮಾಡಲು ಬ್ಲೂ ಜೀನ್ಸ್ ಹುಡುಗಿ ಬಂದಿದ್ಳು: ರಾಜಣ್ಣ
ರನ್ಯಾ ಪ್ರಕರಣದಲ್ಲಿ ಡಿಅರ್​ಐ, ಸಿಎಂಗೆ ವರದಿ ಸಲ್ಲಿಸಿರಬಹುದು: ಪರಮೇಶ್ವರ್
ರನ್ಯಾ ಪ್ರಕರಣದಲ್ಲಿ ಡಿಅರ್​ಐ, ಸಿಎಂಗೆ ವರದಿ ಸಲ್ಲಿಸಿರಬಹುದು: ಪರಮೇಶ್ವರ್
ಬಿಡದಿ ರೈಲ್ವೆ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಕರೆ
ಬಿಡದಿ ರೈಲ್ವೆ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಕರೆ
ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿ
ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿ
ಫೆಲೈನ್ ಪ್ಯಾನ್​ಲ್ಯೂಕೊಪೇನಿಯಾ ವೈರಸ್ ಸೋಂಕು ಬೆಕ್ಕುಗಳಲ್ಲಿ ಸಾಂಕ್ರಾಮಿಕ!
ಫೆಲೈನ್ ಪ್ಯಾನ್​ಲ್ಯೂಕೊಪೇನಿಯಾ ವೈರಸ್ ಸೋಂಕು ಬೆಕ್ಕುಗಳಲ್ಲಿ ಸಾಂಕ್ರಾಮಿಕ!
ಸೀರೆಯುಟ್ಟು, ಚಪ್ಪಲಿ ಧರಿಸಿ ಲಂಡನ್​ನ ಪಾರ್ಕ್​ನಲ್ಲಿ ಮಮತಾ ಜಾಗಿಂಗ್
ಸೀರೆಯುಟ್ಟು, ಚಪ್ಪಲಿ ಧರಿಸಿ ಲಂಡನ್​ನ ಪಾರ್ಕ್​ನಲ್ಲಿ ಮಮತಾ ಜಾಗಿಂಗ್
ದಾವಣಗೆರೆ: ನೋಡ ನೋಡ್ತಿದ್ದಂತೆಯೇ ಸುಟ್ಟು ಕರಕಲಾದ ಕಾರುಗಳು
ದಾವಣಗೆರೆ: ನೋಡ ನೋಡ್ತಿದ್ದಂತೆಯೇ ಸುಟ್ಟು ಕರಕಲಾದ ಕಾರುಗಳು
ಕೋಲಾರ: ಹೆಲ್ಮೆಟ್ ತೆಗೀತಿದ್ದಂತೆ ಬುಸ್ ಎಂದ ನಾಗಪ್ಪ! ಆಮೇಲೇನಾಯ್ತು ನೋಡಿ
ಕೋಲಾರ: ಹೆಲ್ಮೆಟ್ ತೆಗೀತಿದ್ದಂತೆ ಬುಸ್ ಎಂದ ನಾಗಪ್ಪ! ಆಮೇಲೇನಾಯ್ತು ನೋಡಿ
ಧಗ ಧಗನೆ ಹೊತ್ತಿ ಉರಿದ ಸಿಲಿಂಡರ್ ತುಂಬಿದ್ದ ಟ್ರಕ್, ಹಲವು ಬಾರಿ ಸ್ಫೋಟ
ಧಗ ಧಗನೆ ಹೊತ್ತಿ ಉರಿದ ಸಿಲಿಂಡರ್ ತುಂಬಿದ್ದ ಟ್ರಕ್, ಹಲವು ಬಾರಿ ಸ್ಫೋಟ