AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಪ್ರೀತ್ಸೆ…ಪ್ರೀತ್ಸೆ ಎಂದು ವಿವಾಹಿತ ಮಹಿಳೆ ಬಲಿ ಪಡೆದ ಕಾಮಿ

ಅವರಿಬ್ಬರು ಪ್ರೀತಿಸಿ ಮದುವೆ ಆಗಿದ್ದರು. ದಂಪತಿಗೆ ಇಬ್ಬರು ಮುದ್ದಿನ ಮಕ್ಕಳು ಸಹ ಇದ್ದವು. ಗಂಡ ಹೆಂಡತಿ ಒಳ್ಳೆಯ ಕಡೆ ಕೆಲಸ ಮಾಡುತ್ತಿದ್ದರು. ಆದ್ರೆ ಸುಂದರ ಸಂಸಾರಕ್ಕೆ ಮೂರನೇಯವನ ಎಂಟ್ರಿ ಆಗಿದ್ದು, ಅದು ಪತ್ನಿಯ ಸಾವಿಗೂ ಕಾರಣವಾಗಿದೆ. ಪ್ರೀತ್ಸೆ...ಪ್ರೀತ್ಸೆ ಎಂದು ಕಾಮಿಯೊಬ್ಬ ವಿವಾಹಿತೆ ಹಿಂದೆ ಬಂದಿದ್ದು, ಇದೀಗ ಆಕೆಯನ್ನೇ ಬಲಿ ಪಡೆದುಕೊಂಡಿದ್ದಾನೆ.

ಬೆಂಗಳೂರು: ಪ್ರೀತ್ಸೆ...ಪ್ರೀತ್ಸೆ ಎಂದು ವಿವಾಹಿತ ಮಹಿಳೆ ಬಲಿ ಪಡೆದ ಕಾಮಿ
ರಾಚಪ್ಪಾಜಿ ನಾಯ್ಕ್
| Edited By: |

Updated on: Feb 24, 2025 | 10:21 PM

Share

ಬೆಂಗಳೂರು, (ಫೆಬ್ರವರಿ 24): ಸೂರ್ಯ ಮತ್ತು ನಂದಿನಿ ಅಕ್ಕ ಪಕ್ಕದ ಮನೆಯವರಾಗಿದ್ದು, ಇಬ್ಬರು ಎಂಟು ವರ್ಷದ ಹಿಂದೆ ಪ್ರೀತಿಸಿ ಮದುವೆ ಆಗಿದ್ದರು. ನಂದಿನಿ ಬಿಬಿಎಂಪಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರೆ, ಸೂರ್ಯ ಇನ್ವಿಟೇಷನ್ ಕಾರ್ಡ್ ಪ್ರಿಂಟ್ ಮಾಡೋ ಕೆಲಸ ಮಾಡುತ್ತಿದ್ದ. ಹೀಗಿದ್ದವರ ಬಾಳಲ್ಲಿ ಈಗ ಬಿರುಗಾಳಿ ಎದ್ದಿದ್ದು, ಪತ್ನಿ ಸಾವಿನ ಮನೆ ಸೇರಿದ್ದಾಳೆ.

ಹೌದು..ಫೆಬ್ರವರಿ 23 ರಂದು ರಾತ್ರಿ 9.30 ರ ಸಮಯ. ಚಾಮರಾಜಪೇಟೆ ಏರಿಯಾದಲ್ಲಿರುವ ಮನೆಯಲ್ಲಿ ಗಂಡ ಮತ್ತು ಮಗ ಬೇಕರಿಗೆ ಹೋಗಿದ್ದರು. ಅಲ್ಲಿಂದ ಬಂದು ನೋಡುವಷ್ಟರಲ್ಲಿ ಘನಘೋರ ಕಂಡಿದೆ. ರೂಂ ಲಾಕ್ ಆಗಿದ್ರೆ. ರೂಫ್ ನಲ್ಲಿದ್ದ ಕೊಂಡಿಯಲ್ಲಿ ಹಗ್ಗಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ನಂದಿನಿ ಕಂಡಿದ್ದಾಳೆ. ತನ್ನ ಅಣ್ಣನನ್ನ ಕರಿಸಿಕೊಂಡ ಸೂರ್ಯ ಬಾಗಿಲು ಓಪನ್ ಮಾಡಿ ನಂದಿನಿಯನ್ನ ಕೆಳಗಿಳಿಸಿದ್ದಾರೆ‌‌.‌ ತಕ್ಷಣ ಚಾಮರಾಜಪೇಟೆ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ಮಾಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದು, ತನಿಖೆ ವೇಳೆ ನಂದಿನಿ ಸಾವಿಗೆ ಕಾರಣ ಏನು ಎನ್ನುವುದು ಗೊತ್ತಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ವಿಲಕ್ಷಣ ಘಟನೆ: ದೂರು ನೀಡಲು ಹೋದ ಬಾಲಕಿಯನ್ನು ಲಾಡ್ಜ್​ಗೆ ಕರೆದೊಯ್ದು ಅತ್ಯಾಚಾರ

ಬಿಬಿಎಂಪಿ ಕಚೇರಿ ಕೆಲಸ ಮಾಡುತ್ತಿದ್ದ ನಂದಿನಿ ಹಿಂದೆ ವ್ಯಕ್ತಿಯೊಬ್ಬ ಬಿದ್ದಿದ್ದ. ಪ್ರೀತ್ಸೆ ಪ್ರೀತ್ಸೆ ಎಂದು ಕಾಡುತ್ತಿದ್ದ. ಅಷ್ಟೇ ಅಲ್ಲ ಗಂಡನನ್ನ ಬಿಟ್ಟು ಬರುವಂತೆ ಪೀಡಿಸುತ್ತಿದ್ದನಂತೆ. ಇನ್ನು ನಂದಿನಿ ಪತಿಗೂ ಕರೆ ಮಾಡಿ ಬಿಟ್ಟು ಬಿಡುವಂತೆ ಹೇಳುತ್ತಿದ್ದನಂತೆ. ಇದೇ ವಿಚಾರವಾಗಿ ಪತಿ-ಪತ್ನಿ ಮಧ್ಯೆ ಗಲಾಟೆ ಆಗಿತ್ತು. ಇದರಿಂದ ಬೇಸತ್ತ ನಂದಿನಿ ಮನೆಯಲ್ಲಿ ಯಾರು ಇಲ್ಲದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಪ್ರಕರಣ ದಾಖಲಸಿಕೊಂಡಿರೊ ಚಾಮರಾಜಪೇಟೆ ಠಾಣೆ ಪೊಲೀಸರು ತನಿಖೆ ಮುಂದುವರೆಸಿದ್ದು ತನಿಖೆ ಬಳಿಕ ಸಾವಿಗೆ ವ್ಯಕ್ತಿಯೊಬ್ಬ ನೀಡಿದ್ದ ಕಿರುಕುಳವೇ ಕಾರಣನಾ ಅಥವಾ ಬೇರೆ ಏನಾದರೂ ಕಾರಣ ಎನ್ನುವುದು ಗೊತ್ತಾಗಬೇಕಿದೆ.

ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ