AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಪ್ರೀತ್ಸೆ…ಪ್ರೀತ್ಸೆ ಎಂದು ವಿವಾಹಿತ ಮಹಿಳೆ ಬಲಿ ಪಡೆದ ಕಾಮಿ

ಅವರಿಬ್ಬರು ಪ್ರೀತಿಸಿ ಮದುವೆ ಆಗಿದ್ದರು. ದಂಪತಿಗೆ ಇಬ್ಬರು ಮುದ್ದಿನ ಮಕ್ಕಳು ಸಹ ಇದ್ದವು. ಗಂಡ ಹೆಂಡತಿ ಒಳ್ಳೆಯ ಕಡೆ ಕೆಲಸ ಮಾಡುತ್ತಿದ್ದರು. ಆದ್ರೆ ಸುಂದರ ಸಂಸಾರಕ್ಕೆ ಮೂರನೇಯವನ ಎಂಟ್ರಿ ಆಗಿದ್ದು, ಅದು ಪತ್ನಿಯ ಸಾವಿಗೂ ಕಾರಣವಾಗಿದೆ. ಪ್ರೀತ್ಸೆ...ಪ್ರೀತ್ಸೆ ಎಂದು ಕಾಮಿಯೊಬ್ಬ ವಿವಾಹಿತೆ ಹಿಂದೆ ಬಂದಿದ್ದು, ಇದೀಗ ಆಕೆಯನ್ನೇ ಬಲಿ ಪಡೆದುಕೊಂಡಿದ್ದಾನೆ.

ಬೆಂಗಳೂರು: ಪ್ರೀತ್ಸೆ...ಪ್ರೀತ್ಸೆ ಎಂದು ವಿವಾಹಿತ ಮಹಿಳೆ ಬಲಿ ಪಡೆದ ಕಾಮಿ
ರಾಚಪ್ಪಾಜಿ ನಾಯ್ಕ್
| Edited By: |

Updated on: Feb 24, 2025 | 10:21 PM

Share

ಬೆಂಗಳೂರು, (ಫೆಬ್ರವರಿ 24): ಸೂರ್ಯ ಮತ್ತು ನಂದಿನಿ ಅಕ್ಕ ಪಕ್ಕದ ಮನೆಯವರಾಗಿದ್ದು, ಇಬ್ಬರು ಎಂಟು ವರ್ಷದ ಹಿಂದೆ ಪ್ರೀತಿಸಿ ಮದುವೆ ಆಗಿದ್ದರು. ನಂದಿನಿ ಬಿಬಿಎಂಪಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರೆ, ಸೂರ್ಯ ಇನ್ವಿಟೇಷನ್ ಕಾರ್ಡ್ ಪ್ರಿಂಟ್ ಮಾಡೋ ಕೆಲಸ ಮಾಡುತ್ತಿದ್ದ. ಹೀಗಿದ್ದವರ ಬಾಳಲ್ಲಿ ಈಗ ಬಿರುಗಾಳಿ ಎದ್ದಿದ್ದು, ಪತ್ನಿ ಸಾವಿನ ಮನೆ ಸೇರಿದ್ದಾಳೆ.

ಹೌದು..ಫೆಬ್ರವರಿ 23 ರಂದು ರಾತ್ರಿ 9.30 ರ ಸಮಯ. ಚಾಮರಾಜಪೇಟೆ ಏರಿಯಾದಲ್ಲಿರುವ ಮನೆಯಲ್ಲಿ ಗಂಡ ಮತ್ತು ಮಗ ಬೇಕರಿಗೆ ಹೋಗಿದ್ದರು. ಅಲ್ಲಿಂದ ಬಂದು ನೋಡುವಷ್ಟರಲ್ಲಿ ಘನಘೋರ ಕಂಡಿದೆ. ರೂಂ ಲಾಕ್ ಆಗಿದ್ರೆ. ರೂಫ್ ನಲ್ಲಿದ್ದ ಕೊಂಡಿಯಲ್ಲಿ ಹಗ್ಗಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ನಂದಿನಿ ಕಂಡಿದ್ದಾಳೆ. ತನ್ನ ಅಣ್ಣನನ್ನ ಕರಿಸಿಕೊಂಡ ಸೂರ್ಯ ಬಾಗಿಲು ಓಪನ್ ಮಾಡಿ ನಂದಿನಿಯನ್ನ ಕೆಳಗಿಳಿಸಿದ್ದಾರೆ‌‌.‌ ತಕ್ಷಣ ಚಾಮರಾಜಪೇಟೆ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ಮಾಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದು, ತನಿಖೆ ವೇಳೆ ನಂದಿನಿ ಸಾವಿಗೆ ಕಾರಣ ಏನು ಎನ್ನುವುದು ಗೊತ್ತಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ವಿಲಕ್ಷಣ ಘಟನೆ: ದೂರು ನೀಡಲು ಹೋದ ಬಾಲಕಿಯನ್ನು ಲಾಡ್ಜ್​ಗೆ ಕರೆದೊಯ್ದು ಅತ್ಯಾಚಾರ

ಬಿಬಿಎಂಪಿ ಕಚೇರಿ ಕೆಲಸ ಮಾಡುತ್ತಿದ್ದ ನಂದಿನಿ ಹಿಂದೆ ವ್ಯಕ್ತಿಯೊಬ್ಬ ಬಿದ್ದಿದ್ದ. ಪ್ರೀತ್ಸೆ ಪ್ರೀತ್ಸೆ ಎಂದು ಕಾಡುತ್ತಿದ್ದ. ಅಷ್ಟೇ ಅಲ್ಲ ಗಂಡನನ್ನ ಬಿಟ್ಟು ಬರುವಂತೆ ಪೀಡಿಸುತ್ತಿದ್ದನಂತೆ. ಇನ್ನು ನಂದಿನಿ ಪತಿಗೂ ಕರೆ ಮಾಡಿ ಬಿಟ್ಟು ಬಿಡುವಂತೆ ಹೇಳುತ್ತಿದ್ದನಂತೆ. ಇದೇ ವಿಚಾರವಾಗಿ ಪತಿ-ಪತ್ನಿ ಮಧ್ಯೆ ಗಲಾಟೆ ಆಗಿತ್ತು. ಇದರಿಂದ ಬೇಸತ್ತ ನಂದಿನಿ ಮನೆಯಲ್ಲಿ ಯಾರು ಇಲ್ಲದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಪ್ರಕರಣ ದಾಖಲಸಿಕೊಂಡಿರೊ ಚಾಮರಾಜಪೇಟೆ ಠಾಣೆ ಪೊಲೀಸರು ತನಿಖೆ ಮುಂದುವರೆಸಿದ್ದು ತನಿಖೆ ಬಳಿಕ ಸಾವಿಗೆ ವ್ಯಕ್ತಿಯೊಬ್ಬ ನೀಡಿದ್ದ ಕಿರುಕುಳವೇ ಕಾರಣನಾ ಅಥವಾ ಬೇರೆ ಏನಾದರೂ ಕಾರಣ ಎನ್ನುವುದು ಗೊತ್ತಾಗಬೇಕಿದೆ.

Follow Us
ರಾಚಪ್ಪಾಜಿ ನಾಯ್ಕ್
ರಾಚಪ್ಪಾಜಿ ನಾಯ್ಕ್

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು