Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲೊಂದು ಅಮಾನುಷ ಕೃತ್ಯ, ಹೆತ್ತ ತಾಯಿಯಿಂದಲೇ ಮಗುವಿನ ಮೇಲೆ ಹಲ್ಲೆ

ಪ್ರತಿ ಮಕ್ಕಳಿಗೂ ಹೆತ್ತ ತಾಯಿಯೇ ಶ್ರೀರಕ್ಷೆ.. ಅದೆಷ್ಟೋ ಹೆಣ್ಮಕ್ಕಳು ಮಕ್ಕಳಾಗಿಲ್ಲ ಎಂದು ಕೊರಗುತ್ತಾ ಶತಕೋಟಿ ದೇವರನ್ನೆಲ್ಲ ಪೂಜಿಸುತ್ತಾರೆ. ಆದರೆ ಬೆಂಗಳೂರಿನಲ್ಲಿ ಪಾಪಿ ತಾಯಿಯೊಬ್ಬಳು ಪ್ರಿಯಕರನ ಜತೆ ಸೇರಿ ಹೆತ್ತ ಮಗುವಿನ (Assault Case) ಮೇಲೆ ಹಲ್ಲೆ ನಡೆಸಿರುವ ಅಮಾನುಷ ಘಟನೆ ಬೆಳಕಿಗೆ ಬಂದಿದೆ.

ಬೆಂಗಳೂರಿನಲ್ಲೊಂದು ಅಮಾನುಷ ಕೃತ್ಯ, ಹೆತ್ತ ತಾಯಿಯಿಂದಲೇ ಮಗುವಿನ ಮೇಲೆ ಹಲ್ಲೆ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Mar 03, 2024 | 12:59 PM

ಬೆಂಗಳೂರು, (ಮಾರ್ಚ್ 03): ಲಾಲನೆ ಪಾಲನೆ ಮಾಡಬೇಕಾದವಳೇ ತನ್ನ ಮಗುವನ್ನು ಮನೆಯಲ್ಲಿ ಕೂಡಿ ಹಾಕಿ, ಮನಬಂದಂತೆ ಹೊಡೆದು ಬಡಿದು ಹಲ್ಲೆ ಮಾಡಿದ್ದಾಳೆ. ಗಂಡನಿಂದ ವಿಚ್ಛೇದನೆ ಪಡೆದುಕೊಂಡಿರುವ ಸ್ಟ್ಯಾಲಿನ್ ಎನ್ನುವ ಮಹಿಳೆ ತನ್ನ ಪ್ರಿಯಕರನ ಜೊತೆ ಸೇರಿ ಎರಡ್ಮೂರು ವರ್ಷದ ಮಗುವಿನ ಮೇಲೆ ಹಲ್ಲೆ ಮಾಡಿದ್ದಾಳೆ. ಈ ಹಿನ್ನೆಲೆಯಲ್ಲಿ ಮಗುವಿನ ಮೈತುಂಬ ಗಾಯಗಳಾಗಿವೆ. ಈ ಅಮಾನುಷ್ಯ ಕೃತ್ಯ ಬೆಂಗಳೂರಿನ(Bengaluru) ವೀರಭದ್ರ ನಗರದಲ್ಲಿ ನಡೆದಿದೆ. 2-3 ವರ್ಷದ ಮಗುವು ತೊದಲನುಡಿಯಲ್ಲೇ ತನಗೆ ಹೇಗೆಲ್ಲ ಹೊಡೆದು ಹಿಂಸೆ ಕೊಟ್ಟರು ಎಂಬುದನ್ನು ತಿಳಿಸಿದೆ.

ಮನೆಗೆ ಬಂದ ಅಂಕಲ್‌ವೊಬ್ಬರ್‌ ಕುಕ್ಕರ್‌ನಿಂದ ತಲೆಗೆ ಹೊಡೆದರಂತೆ. ಅಮ್ಮ ಕೂಡ ನೀನು ಬೇಡ ಮನೆ ಬಿಟ್ಟು ಹೋಗು ಎಂದು ಕಾಲಲ್ಲಿ ಒದ್ದರಂತೆ. ಇದೆಲ್ಲವನ್ನೂ ಮಗುವು ಸ್ಥಳೀಯರೊಬ್ಬರ ಬಳಿ ಹೇಳಿಕೊಂಡಿದೆ.

ಇದನ್ನೂ ಓದಿ: ಕಬ್ಬಿಣ ಕಾಯಿಸಿ ಮೈಮೇಲೆ ಬರೆ ಎಳೆದ ಮಲತಾಯಿ, ನಡೆಯಲು ಆಗದೆ ಪುಟ್ಟ ಬಾಲಕಿ ನರಳಾಟ

ಬೆಳಗ್ಗೆ ಕೆಲಸಕ್ಕೆ ಹೋಗುವಾಗ ಮನೆಗೆ ಬೀಗ ಹಾಕಿ ಹೋದರೆ ರಾತ್ರಿ ಬರುವವರೆಗೂ ಬಾಗಿಲು ತೆಗಯದೆ ಕೂಡಿಹಾಕುತ್ತಾಳೆ. ಈ ವಿಷಯ ತಿಳಿಯುತ್ತಿದ್ದಂತೆ ಸಂಘಟನೆಯೊಂದು ಮಗುವಿನ ರಕ್ಷಣೆಗೆ ಬಂದಿದೆ. ಪಾಪಿ ತಾಯಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮನೆಯಲ್ಲಿ ಕೂಡಿ ಹಾಕಿದ್ದ ಮಗುವನ್ನು ರಕ್ಷಿಸಿ, ಗೃಹ ಬಂಧನಕ್ಕೆ ಮುಕ್ತಿಕೊಟ್ಟಿದ್ದಾರೆ. ಇನ್ನು ಮೈತುಂಬ ಗಾಯಗೊಂಡಿದ್ದ ಮಗುವಿಗೆ ವೈದ್ಯರಿಂದ ಚಿಕಿತ್ಸೆ ಕೊಡಿಸಲಾಗಿದೆ. ಸಿಡಬ್ಲ್ಯೂಸಿಗೆ(CWC)ಗೆ ದೂರು ಕೊಟ್ಟರೂ ಕ್ರಮಕೈಗೊಂಡಿಲ್ಲ. ಮತ್ತೊಂದು ಕಡೆ ಪೊಲೀಸರು ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ.

ಹೊಡೆದಿದ್ದನ್ನು ಒಪ್ಪಿಕೊಂಡ ಮಹಾತಾಯಿ

ಮಗುವನಗೆ ಹೊಡೆದಿರುವುದನ್ನು ಸ್ವತಃ ತಾಯಿ ಸ್ಟ್ಯಾರೀನ್ ಒಪ್ಪಿಕೊಂಡಿದ್ದಾಳೆ. ನಾನು ಮಗುವಿಗೆ ಹೊಡದಿದ್ದೇನೆ. ಆದ್ರೆ ಮಗು ಬುದ್ಧಿಕಲಿಬೇಕು ಎಂದು ಮಾಡಿದ್ದೀನಿ. ಜೀವನದಲ್ಲಿ ಸ್ವಂತ ಕಾಲಿನ ಮೇಲೆ ನಿಲ್ಲಬೇಕು ಎಂದು ಈ ರೀತಿ ಮಾಡಿದ್ದೀನಿ. ಮಗುವೇ ಸುಳ್ಳು ಹೇಳುತ್ತೆ. ನನಗೆ ಕೆಲಸ ಇರಲಿಲ್ಲ. ನನ್ನ ಗಂಡನ ಜೊತೆ ವಿಚ್ಛೇದನವಾಗಿದ್ದು, ಮನೆಯಲ್ಲಿ ನಾನು ಒಬ್ಬರೇ ಇರುವುದು. ಹೀಗಾಗಿ ಮಗುವನ್ನ ಕೂಡಿ ಹಾಕುತ್ತಿದ್ದೆ ಎಂದು ಸಮಜಾಯಿಷಿ ನೀಡಿದ್ದಾಳೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:45 pm, Sun, 3 March 24

ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ