ಗಂಡನ ಮೇಲಿನ ಸಿಟ್ಟಿಗೆ ಸ್ನೇಹಿತನ ಜತೆ ಸೇರಿ ಸ್ವಂತ ಮಗನನ್ನೇ ಕಿಡ್ನ್ಯಾಪ್ ಮಾಡಿದ ತಾಯಿ

ಗಂಡನ ಮೇಲಿನ ಸಿಟ್ಟಿಗೆ ತನ್ನ ಸ್ವಂತ ಮಗನನ್ನು ತಾಯಿ ಕಿಡ್ನ್ಯಾಪ್​ ಮಾಡಿರುವಂತಹ ಘಟನೆ ಬೆಂಗಳೂರು ಹೊರವಲಯದ ಕೆ.ಆರ್ ಪುರಂನಲ್ಲಿ ನಡೆದಿದೆ. ಮಗುವಿನ ತಾಯಿ ಮತ್ತು ಆತನ ಸ್ನೇಹಿತನಿಂದ ಕಿಡ್ನ್ಯಾಪ್​ ಮಾಡಲಾಗಿದೆ ಎಂದು ತಂದೆ ಆರೋಪಿಸಿದ್ದಾರೆ. ಕೆಆರ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಂಡನ ಮೇಲಿನ ಸಿಟ್ಟಿಗೆ ಸ್ನೇಹಿತನ ಜತೆ ಸೇರಿ ಸ್ವಂತ ಮಗನನ್ನೇ ಕಿಡ್ನ್ಯಾಪ್ ಮಾಡಿದ ತಾಯಿ
ಗಂಡನ ಮೇಲಿನ ಸಿಟ್ಟಿಗೆ ಸ್ನೇಹಿತನ ಜತೆ ಸೇರಿ ಸ್ವಂತ ಮಗನನ್ನೇ ಕಿಡ್ನ್ಯಾಪ್ ಮಾಡಿದ ತಾಯಿ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Aug 02, 2024 | 2:51 PM

ಬೆಂಗಳೂರು, ಆಗಸ್ಟ್​ 2: ತಾಯಿಯಿಂದಲೇ ಮಗುವನ್ನು ಕಿಡ್ನ್ಯಾಪ್ (kidnapped)​ ಮಾಡಿರುವಂತಹ ಘಟನೆ ಇಂದು ಬೆಂಗಳೂರು ಹೊರವಲಯದ ಕೆಆರ್​ ಪುರಂನಲ್ಲಿ ನಡೆದಿದೆ. ಮಗುವಿನ ತಾಯಿ (mother) ಅನುಪಮ ಮತ್ತು ಆತನ ಸ್ನೇಹಿತನಿಂದ ಕೃತ್ಯವೆಸಗಲಾಗಿದೆ ಎಂದು ಮಗುವಿನ ತಂದೆ ಆರೋಪಿಸಿದ್ದಾರೆ. ಮಗುವನ್ನು ಕಿಡ್ನ್ಯಾಪ್ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ. ಕೆಆರ್​ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

2014ರಲ್ಲಿ ವಿವಾಹವಾಗಿದ್ದ ಅನುಪಮ ಹಾಗೂ ಸಿದ್ಧಾರ್ಥ್. ಬಳಿಕ ಇಬ್ಬರ ಮಧ್ಯೆ ಕೌಟುಂಬಿಕ ಕಲಹ  ಹಿನ್ನೆಲೆಯಲ್ಲಿ ದೂರಾಗಿದ್ದರು. ಈ ಬಗ್ಗೆ ಕೋರ್ಟ್​ನಲ್ಲಿ ಪ್ರಕರಣ ಇದೆ. ಕೋರ್ಟ್ ಆರುವರೆ ವರ್ಷದ ಮಗುವನ್ನು ಪತಿ ಸಿದ್ಧಾರ್ಥ್​ಗೆ ನೀಡಿ ಆದೇಶಿಸಿತ್ತು.

ಇದನ್ನೂ ಓದ: ಮಾನಸಿಕ ಅಸ್ವಸ್ಥ ಮಗನಿಂದ ತಾಯಿ ಮೇಲೆ ಕೊಡಲಿಯಿಂದ ಹಲ್ಲೆ, ಆರೋಪಿ ಹಿಡಿಯಲು ಪೊಲೀಸರಿಂದ ಹರಸಾಹಸ

ಇಂದು ಬೆಳಿಗ್ಗೆ ಸಿದ್ಧಾರ್ಥ್ ತಂದೆ ಮಗುವನ್ನು ಶಾಲೆಗೆ ಬಿಡಲು ಅಪಾರ್ಟ್ಮೆಂಟ್​​ ಮುಂಭಾಗದಲ್ಲಿ ಶಾಲಾ ಬಸ್​ಗೆ ಕಾಯುತ್ತಿದ್ದರು. ಈ ವೇಳೆ ತನ್ನ ಸ್ನೇಹಿತನೊಂದಿಗೆ ಬಂದ ತಾಯಿ ಅನುಪಮ ಸಿದ್ಧಾರ್ಥ್ ತಂದೆಯಿಂದ ಮಗುವನ್ನು ಕಿತ್ತುಕೊಂಡು ಹೋಗಿರುವುದು ವಿಡಿಯೋಡಲ್ಲಿ ಸೆರೆ ಆಗಿದೆ.

ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿ: ಬೈಕ್​ನಲ್ಲಿದ್ದ ವಿದ್ಯಾರ್ಥಿ ಸಾವು

ಕೋಲಾರ: ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ವಿದ್ಯಾರ್ಥಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್ ಬಳಿ ನಡೆದಿದೆ. ತಮಟಂಪಲ್ಲಿ ಗ್ರಾಮದ ಭಾರ್ಗವ್ ರೆಡ್ಡಿ(18) ಸ್ಥಳದಲ್ಲೇ ದುರ್ಮರಣ. ಗೌನಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಲಾರಿ ಹರಿದು 33 ಕುರಿಗಳು ಸಾವು: ಕುರಿಗಾಹಿಗೆ ಗಾಯ

ಬಾಗಲಕೋಟೆ: ಇಳಕಲ್​ ಹೊರವಲಯದಲ್ಲಿ ಲಾರಿ ಹರಿದು 33 ಕುರಿಗಳು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೊಡಕೇಲ್ ಗ್ರಾಮದ ಕುರಿಗಾಹಿ ರಾಯಪ್ಪಗೆ ಗಾಯಗಳಾಗಿವೆ. ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಳಕಲ್ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮಾರುಕಟ್ಟೆಗೆ ಹೋದ ಯುವಕ ಶವವಾಗಿ ಪತ್ತೆ

ಆನೇಕಲ್: ಹಣ್ಣಿನ ಮಾರುಕಟ್ಟೆಗೆ ಹೋದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರು ಹೊರವಲಯದ ಹುಸ್ಕೂರು ಹಣ್ಣಿನ ಮಾರುಕಟ್ಟೆಯಲ್ಲಿ ನಡೆದಿದೆ. ಮಧು (31) ಮೃತ ಯುವಕ. ಸಿಂಗೇನ ಅಗ್ರಹಾರದಲ್ಲಿರುವ ಅತಿ ದೊಡ್ಡ ಹುಸ್ಕೂರು ಹಣ್ಣಿನ ಮಾರುಕಟ್ಟೆಯಲ್ಲಿ ಇಂದು ಮಧು ಶವ ಪತ್ತೆ ಆಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!